ಅ.15ರ ಒಳಗಾಗಿ ದೋಷರಹಿತ ಮತದಾರರ ಪಟ್ಟಿ ಸಿದ್ಧ ಪಡಿಸಿ


Team Udayavani, Sep 10, 2019, 3:48 PM IST

kolar-tdy-2

ಮಾಲೂರು ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಮತದಾರ ಪಟ್ಟಿ ಪರಿಷ್ಕರಣೆಯ ಬಿಎಲ್ಒಗಳ ತರಬೇತಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಸೋಮಶೇಖರ್‌ ಮಾತನಾಡಿದರು.

ಮಾಲೂರು: 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ನಾಗರಿಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡುವುದು ಕಡ್ಡಾಯ ಎಂದು ಉಪವಿಭಾಗಾಧಿಕಾರಿ ಸೋಮಶೇಖರ್‌ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕರ ಜೂನಿಯರ್‌ ಕಾಲೇಜು ಸಭಾಂಗಣದಲ್ಲಿ ನಡೆದ ಬಿಎಲ್ಒ ಮತ್ತು ಸಾಮಾನ್ಯ ಸೇವಾ ಕೇಂದ್ರದ ಪ್ರತಿನಿಧಿಗಳ ತರಬೇತಿ ಸಭೆಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಡ್ಡಾಯ ಮತದಾನ ಮತ್ತು 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ನಮ್ಮ ಹೆಸರು ನೋಂದಣಿ ಮಾಡಿಸಬೇಕು. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಬೂನಾದಿಯಾಗಿರುವ ಚುನಾವಣೆಯಲ್ಲಿನ ಲೋಪ ತಡೆಯಲು ಪ್ರತಿಯೊಬ್ಬರು ಜವಾಬ್ದಾರಿ ಹೊರಬೇಕಾಗಿದೆ ಎಂದು ಹೇಳಿದರು.

ಅ.15 ಕೊನೆ ದಿನ: ಅ.15ರ ಒಳಗಾಗಿ ಸಂಪೂರ್ಣ ದೋಷ ರಹಿತ ಮತದಾರರಪಟ್ಟಿ ಮತ್ತು ಬಣ್ಣದ ಭಾವಚಿತ್ರವಿರುವ ಮತದಾರರಪಟ್ಟಿ ಸಿದ್ಧ ಪಡಿಸಬೇಕಾಗಿದೆ. ಇದರಿಂದ ಶೇ.99 ಚುನಾವಣೆ ದೋಷ ತಡೆಯಲು ಸಾಧ್ಯ. ಹೀಗಾಗಿ ಚುನಾವಣೆ ಆಯೋಗ ಸೆ.1ರಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ ಎಂದು ಹೇಳಿದರು.

ಅಗತ್ಯ ದಾಖಲೆ ಒದಗಿಸಿ: ಈ ಅವಧಿಯಲ್ಲಿ ಹೆಚ್ಚು ಜವಾಬ್ದಾರಿವುಳ್ಳ ಬಿಎಲ್ಒ ಮತ್ತು ಸಾಮಾನ್ಯ ಸೇವಾ ಕೇಂದ್ರದ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯ ಬೂತ್‌ಗಳ ಪ್ರತಿ ಮನೆಗೂ ತೆರಳಿ 18 ವರ್ಷ ಪೂರ್ಣಗೊಂಡವರಿಂದ ವಯಸ್ಸಿನ ದೃಢೀಕರಣದ ದಾಖಲೆ ಪಡೆದು, ಮೃತ ಪಟ್ಟ ವ್ಯಕ್ತಿಗಳ ಹೆಸರು ಪಟ್ಟಿಯಿಂದ ಕೈಬಿಡುವ ನಿಟ್ಟಿನಲ್ಲಿ ಅರ್ಜಿ ನಮೂನೆ 6 ಮತ್ತು 8ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಚುನಾವಣಾ ಶಾಖೆಗೆ ಒದಗಿಸುವಂತೆ ತಿಳಿಸಿದರು.

ತಿದ್ದುಪಡಿಗೆ ಅವಕಾಶ: ಪ್ರತಿಯೊಬ್ಬರು ಶೇ.100 ಗುಣಮಟ್ಟದ ಮತದಾರ ಪಟ್ಟಿ ಸಿದ್ಧಪಡಿಸಲು ಶ್ರಮವಹಿಸಬೇಕಾಗಿದೆ. ಅದೇರೀತಿಯಲ್ಲಿ ಮತದಾ ರರ ಪಟ್ಟಿಯಲ್ಲಿನ ಹೆಸರು ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ವರ್ಗಾವಣೆಗೆ ಅವಕಾಶ ವಿದ್ದು, ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹು ದಾಗಿದೆ. ಬಿಎಲ್ಒಗಳು ಮನೆಗಳಿಗೆ ಭೇಟಿ ನೀಡುವ ಸಮಯದಲ್ಲಿ ಪಟ್ಟಿಯಲ್ಲಿ ಹೆಸರು ತಪ್ಪಾಗಿದ್ದಲ್ಲಿ ಸರಿಪಡಿಸಲು ಅವಕಾಶ ಇದೆ ಎಂದರು.

ಕೊಡುಗೆ ನೀಡಿದಂತೆ: ಎಲ್ಲಾ ಪ್ರಕ್ರಿಯೆಗಳ ಪೂರ್ಣವಾದ ನಂತರ ಶೇ.100 ದೋಷರಹಿತ ಮತದಾರ ಪಟ್ಟಿಯು ಸಿದ್ಧವಾಗಬೇಕಾಗಿದೆ. ಇದರ ಫ‌ಲಿತಾಂಶವನ್ನು 2020ರ ಚುನಾವಣೆಯಲ್ಲಿ ಕಾಣಬಹುದಾಗಿದೆ ಎಂದ ಅವರು, ದೋಷರಹಿತ ಪಟ್ಟಿಯಿಂದ ಬಿಎಲ್ಒಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಮತದಾನವಾದಲ್ಲಿ ಅ ಪ್ರಗತಿಗೆ ತಮ್ಮದೇ ಕೊಡುಗೆಯಾಗಲಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್‌ ವಿ.ನಾಗರಾಜು, ಪುರಸಭೆ ಮುಖ್ಯಾಧಿಕಾರಿ ಪ್ರಸಾದ್‌ರೆಡ್ಡಿ, ತರಬೇತು ದಾರ ಮಂಜುನಾಯಕ್‌ ಮತ್ತಿತರರ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.