ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಕಾನೂನು ಸಮರ


Team Udayavani, Sep 11, 2019, 5:39 AM IST

t-37

ಮಹಾನಗರ: ಲೋಕಾಯುಕ್ತ ಕಾಯ್ದೆಯ ಪ್ರಕಾರ ಆಸ್ತಿ ಘೋಷಣೆ ಪತ್ರವನ್ನು ಈ ಹಿಂದೆ ಸಲ್ಲಿಸದ ಮಹಾ ನಗರ ಪಾಲಿಕೆಯ ಮಾಜಿ ಸದಸ್ಯರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿ ಸಿದರೆ, ಕಾನೂನು ತೊಡಕು ಎದುರಾಗುವ ಸಾಧ್ಯತೆಯಿದೆ.

ಆಸ್ತಿ ವಿವರ ಸಲ್ಲಿಸದ ಮಹಾನಗರ ಪಾಲಿಕೆ ಮಾಜಿ ಸದಸ್ಯರು ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಂಥವರ ವಿರುದ್ಧ ಕಾನೂನು ಹೋರಾಟಕ್ಕೆ ಸಾಮಾಜಿಕ ಹೋರಾಟಗಾರರು ನಿರ್ಧರಿಸಿದ್ದಾರೆ. ಶಾಸಕರಿಂದ ಹಿಡಿದು ಪಾಲಿಕೆ ಸದಸ್ಯರವರೆಗೆ ಪ್ರತಿ ಜನ ಪ್ರತಿನಿಧಿಯೂ ಪ್ರತಿವರ್ಷ ಲೋಕಾಯುಕ್ತ ಕಾಯ್ದೆ ಪ್ರಕಾರ, ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ.

ಹೀಗಾಗಿ, ಲೋಕಾಯುಕ್ತ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಐದು ವರ್ಷದಲ್ಲಿ ಆಸ್ತಿ ವಿವರ ಸಲ್ಲಿಸದ ಮಾಜಿ ಸದಸ್ಯರ ಮೇಲೆ ಚುನಾವಣೆ ಆಯೋಗ, ಲೋಕಾಯುಕ್ತಕ್ಕೆ ದೂರು ನೀಡಲು ಕೆಲವು ಸಾಮಾಜಿಕ ಕಾರ್ಯಕರ್ತರು ಮುಂದಾಗಿದ್ದಾರೆ. ಜತೆಗೆ, ಮುಂದಿನ ಮನಪಾ ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಕೂಡ ತಮ್ಮ ಆಸ್ತಿ ವಿವರವನ್ನು ನಿಗದಿತ ಸಮಯದಲ್ಲಿಯೂ ಚುನಾವಣೆ ಆಯೋಗಕ್ಕೆ ಸಲ್ಲಿಸಬೇಕು.

ಮೂರು ವಾರದ ಗಡುವು; ಅವಕಾಶ
ಲೋಕಾಯುಕ್ತ ಕಾಯ್ದೆಗೆ 2010ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ತಿದ್ದುಪಡಿ ಪ್ರಕಾರ ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರ ಪಾಲಿಕೆ, ಪುರಸಭೆಗೆ ಚುನಾಯಿತರಾಗುವ ಸದಸ್ಯರು ತಮ್ಮ ಆಸ್ತಿ ಘೋಷಣೆ ಪತ್ರವನ್ನು ಲೋಕಾಯುಕ್ತರ ಮುಂದೆ ಮಂಡಿಸಬೇಕಾಗಿತ್ತು. ಆದರೆ, 9 ವರ್ಷಗಳಿಂದ ಇದು ನಡೆದಿಲ್ಲ. ಈ ಸಂಬಂಧ ಬೆಂಗಳೂರಿನ ಸಾಮಾಜಿಕ ಹೋರಾಟಗಾರ ಎಚ್.ಎಂ. ವೆಂಕಟೇಶ್‌ ಅವರು ಲೋಕಾಯುಕ್ತಕ್ಕೆ ಇತ್ತೀಚೆಗೆ ಮನವಿ ಸಲ್ಲಿಸಿದ ಕಾರಣ ವಿಚಾರಣೆ ನಡೆಸಿದ ಲೋಕಾಯುಕ್ತರು, ಎಲ್ಲ ಚುನಾಯಿತ ಸದಸ್ಯರು ತಮ್ಮ ಆಸ್ತಿ ಘೋಷಣೆ ಮಾಡುವಂತೆ ಆ. 28ರಿಂದ ಮೂರು ವಾರಗಳ ಗಡುವು ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡ ನಿಯೋಗವು ಮಂಗಳೂರು ಪಾಲಿಕೆಗೆ ಸೋಮವಾರ ಭೇಟಿ ನೀಡಿ ಮನಪಾ ಉಪಆಯುಕ್ತೆ ಗಾಯತ್ರಿ ನಾಯಕ್‌ ಅವರನ್ನು ಭೇಟಿ ಯಾಗಿ ಲೋಕಾಯುಕ್ತ ಆದೇಶ ಪ್ರತಿಯನ್ನು ನೀಡಿದ್ದಾರೆ. ಈಗಾಗಲೇ ಅವಧಿ ಮುಗಿದಿರುವ 60 ಸದಸ್ಯರ ಗಮನಕ್ಕೂ ಈ ಆದೇಶವನ್ನು ಪಾಲಿ ಸು ವಂತೆ ಪತ್ರ ಬರೆಯುವ ಬಗ್ಗೆ ಮನವಿ ಮಾಡಿದ್ದಾರೆ.

ಒಂದು ವೇಳೆ ಪಾಲಿಸದಿದ್ದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರುವ ಮಾಜಿ ಮನಪಾ ಸದಸ್ಯರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಉಲ್ಲೇಖೀಸಲಾಗಿದೆ.

ಮಾಜಿ ಸದಸ್ಯರೂ ಆಸ್ತಿ ವಿವರ ಸಲ್ಲಿಸಬೇಕು

ಲೋಕಾಯುಕ್ತ ಕಾಯ್ದೆಯ ಪ್ರಕಾರ ಮನಪಾದ ಈ ಹಿಂದಿನ ಸದಸ್ಯರು ಕೂಡ ತಮ್ಮ ಆಸ್ತಿ ಘೋಷಣೆ ಮಾಡಬೇಕಿತ್ತು. ಆದರೆ ಯಾರೂ ಮಾಡಿರಲಿಲ್ಲ. ತತ್‌ಕ್ಷಣವೇ ಅವಧಿ ಮುಗಿದಿರುವ ಸದಸ್ಯರು ನಿಗದಿತ ದಿನದೊಳಗೆ ಆಸ್ತಿ ಘೋಷಣೆ ಮಾಡಬೇಕು. ಇಲ್ಲವಾದರೆ, ಮುಂದಿನ ಚುನಾವಣೆಗೆ ಸ್ಪರ್ಧಿಸುವ ಮಾಜಿ ಕಾರ್ಪೊರೇಟರ್‌ಗಳ ವಿರುದ್ಧ ಲೋಕಾಯುಕ್ತ, ಚುನಾವಣೆ ಆಯೋಗಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ.
– ಎಚ್.ಎಂ. ವೆಂಕಟೇಶ್‌, ಸಾಮಾಜಿಕ ಹೋರಾಟಗಾರರು.

 
ಆಸ್ತಿ ವಿವರ ಸಲ್ಲಿಸಿ

ಲೋಕಾಯುಕ್ತ ಕಾಯ್ದೆ ಪ್ರಕಾರ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆ ಸದಸ್ಯರು ಆಸ್ತಿ ವಿವರ ಸಲ್ಲಿಸಬೇಕು. ಕಾರ್ಪೊರೇಟರ್‌ಗಳು, ಕೌನ್ಸಿಲರ್‌ಗಳು ಮೂರು ವಾರದೊಳಗೆ ತಮ್ಮ ಆಸ್ತಿ ವಿವರ ಸಲ್ಲಿಸಬೇಕು ಎಂದು ಈಗಾಗಲೇ ಆದೇಶ ನೀಡಲಾಗಿದೆ. ಅವಧಿ ಮುಗಿದಿರುವ ಪಾಲಿಕೆ ಸದಸ್ಯರು ಆಸ್ತಿ ವಿವರ ನೀಡುವ ವಿಚಾರದ ಬಗ್ಗೆ ಪರಿಶೀಲಿಸಲಾಗುವುದು.
– ಪಿ. ವಿಶ್ವನಾಥ ಶೆಟ್ಟಿ, ಲೋಕಾಯುಕ್ತ ನ್ಯಾಯಮೂರ್ತಿಗಳು

ದಿನೇಶ್‌ ಇರಾ

ಟಾಪ್ ನ್ಯೂಸ್

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು

26

Mangaluru: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

11-

First Rain: ರಂಗು ರಂಗಿನ ಮೊದಲ ಮಳೆ

10-ramana-avathara

Movie Review: ಸಿನೆರಂಗ; ರಾಮನ ಅವತಾರ

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.