ಸಹಜ್‌, ಸುಗಮ್‌ನಿಂದ ಸಮಸ್ಯೆ ನಿವಾರಣೆ?


Team Udayavani, Sep 11, 2019, 3:10 AM IST

sahaj

ಬೆಂಗಳೂರು: ಸರಕು ಸೇವಾ ತೆರಿಗೆ ವ್ಯವಸ್ಥೆ ಜಾರಿಯಾಗಿ ಎರಡು ವರ್ಷ ಕಳೆದ ಬೆನ್ನಲ್ಲೇ ಡೀಲರ್‌ಗಳು, ವ್ಯಾಪಾರ- ವ್ಯವಹಾರಸ್ಥರು ವಹಿವಾಟಿನ ವಿವರ “ರಿಟರ್ನ್ಸ್’ ಸಲ್ಲಿಸುವ ಅರ್ಜಿ ನಮೂನೆಯನ್ನು ಇನ್ನಷ್ಟು ಸರಳಗೊಳಿಸಲು ಜಿಎಸ್‌ಟಿ ಕೌನ್ಸಿಲ್‌ ಚಿಂತಿಸಿದ್ದು, ನಿರೀಕ್ಷೆಯಂತೆ ಎಲ್ಲ ಪ್ರಕ್ರಿಯೆ ನಡೆದರೆ ಅ.1ರಿಂದ ಸುಧಾರಿತ ಅರ್ಜಿ ನಮೂನೆ ಬಳಕೆಗೆ ಅವಕಾಶ ಸಿಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಜಿಎಸ್‌ಟಿಯಡಿ ನೋಂದಾಯಿತ ವ್ಯವಹಾ ರಸ್ಥರ ಪೈಕಿ ಐದು ಕೋಟಿ ರೂ.ಗಿಂತ ಕಡಿಮೆ ವಾರ್ಷಿಕ ವಹಿವಾಟು ಹೊಂದಿರುವವರೇ ಗಣನೀಯ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಸುಧಾರಿತ ಸಹಜ್‌, ಸುಗಮ್‌ ವ್ಯವಸ್ಥೆಯಡಿ ಮಾಸಿಕ ರಿಟರ್ನ್ಸ್ ಸಲ್ಲಿಕೆ ದಿನಾಂಕ ಬದಲಾವಣೆ ಜತೆಗೆ ತ್ತೈಮಾಸಿಕ ರಿಟರ್ನ್ಸ್ ಸಲ್ಲಿಕೆಗೂ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆದಿದೆ.

ಅ.1ರಿಂದ ಇದು ಜಾರಿಯಾದರೆ ಅನುಕೂಲವಾಗುವ ನಿರೀಕ್ಷೆಯಲ್ಲಿ ಲಕ್ಷಾಂತರ ಮಂದಿ ವ್ಯಾಪಾರ- ವಹಿವಾಟುದಾರರಿದ್ದಾರೆ. ಕಳೆದ ಜುಲೈ 1ಕ್ಕೆ ಜಿಎಸ್‌ಟಿ ದೇಶಾದ್ಯಂತ ಜಾರಿಯಾಗಿ ಎರಡು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ವ್ಯಾಪಾರ- ವ್ಯವಹಾರಸ್ಥರಿಂದ ಕೇಳಿ ಬಂದ ದೂರು, ಅಹವಾಲುಗಳಿಗೆ ಸಂಬಂಧ ಪಟ್ಟಂತೆ ಸ್ಪಂದಿಸುತ್ತಲೇ ಬಂದಿರುವ ಜಿಎಸ್‌ಟಿ ಮಂಡಳಿಯು ನಾನಾ ಸುಧಾರಣೆಗಳನ್ನು ಜಾರಿಗೊಳಿಸಿದೆ.

ಮುಖ್ಯವಾಗಿ ಮಾಸಿಕ ವಹಿವಾಟಿನ ವಿವರ: “ರಿಟರ್ನ್ಸ್’ ಸಲ್ಲಿಕೆ ಬಗ್ಗೆಯೇ ಸಾಕಷ್ಟು ಆಕ್ಷೇಪ, ಅಹ ವಾಲು ಗಳಿವೆ. ಡೀಲರ್‌ಗಳು ನೇರವಾಗಿ ಗ್ರಾಹಕರೊಂ ದಿಗೆ ವ್ಯವಹರಿಸುವ ಹಾಗೂ ವಹಿವಾಟುದಾರರು- ವಹಿವಾಟುದಾರರೊಂದಿಗೆ ಹಾಗೂ ಗ್ರಾಹಕರೊಂದಿಗೆ ನಡೆಸುವ ವ್ಯವಹಾರ ಸೇರಿದಂತೆ ವಾರ್ಷಿಕ 5 ಕೋಟಿ ರೂ.ಗಿಂತ ಹೆಚ್ಚು ವಹಿವಾಟು ನಡೆಸುವವರು ಮಾಸಿಕ ರಿಟರ್ನ್ಸ್ ಸಲ್ಲಿಕೆಗೆ ವಿವರ ಸಲ್ಲಿಸಲು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಹೆಚ್ಚುವರಿ ಅಂಕಣಗಳ ವಿವರ ಭರ್ತಿ ಮಾಡುವುದು ಸವಾಲೆನಿಸಿತ್ತು.

ಸರ್ವರ್‌ ಸಮಸ್ಯೆ: ಇನ್ನೊಂದೆಡೆ ಎಲ್ಲ ವ್ಯಾಪಾರ- ವಹಿವಾಟುದಾರರು ಪ್ರತಿ ತಿಂಗಳ 20ಕ್ಕೆ ರಿಟರ್ನ್ಸ್ ಸಲ್ಲಿಸಬೇಕಿರುವುದರಿಂದ ಜಿಎಸ್‌ಟಿ ಸರ್ವರ್‌ ಮೇಲೆ ತೀವ್ರ ಒತ್ತಡ ಸೃಷ್ಟಿಯಾಗುತ್ತಿತ್ತು. ಇದರಿಂದ ಸಕಾಲದಲ್ಲಿ ಸಮರ್ಪಕವಾಗಿ ರಿಟರ್ನ್ಸ್ ಸಲ್ಲಿಸುವಲ್ಲಿ ವ್ಯಾಪಾರಸ್ಥರು ಹೈರಾಣಾಗುತ್ತಿದ್ದರು. ಈ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂಬುದು ವಾಣಿಜ್ಯೋದ್ಯಮಿಗಳ ಪ್ರಮುಖ ಬೇಡಿಕೆಯಾಗಿತ್ತು.

ಇದಕ್ಕೆ ಸ್ಪಂದಿಸಿದಂತಿರುವ ಜಿಎಸ್‌ಟಿ ಕೌನ್ಸಿಲ್‌ ಸುಧಾರಿತ ಅರ್ಜಿ ನಮೂನೆಗಳನ್ನು ಸಿದ್ಧಪಡಿಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಐದು ಕೋಟಿ ರೂ.ಗಿಂತ ಕಡಿಮೆ ವಾರ್ಷಿಕ ವಹಿವಾಟು ಹೊಂದಿರುವ “ಡೀಲರ್‌- ಗ್ರಾಹಕ’ ವ್ಯವಹಾರಸ್ಥರ ಅನುಕೂಲಕ್ಕಾಗಿ “ಸಹಜ್‌’ ಅರ್ಜಿ ನಮೂನೆ ಪರಿಚಯಿಸಿದೆ. ಹಾಗೆಯೇ ಐದು ಕೋಟಿ ರೂ.ಗಿಂತ ಕಡಿಮೆ ವಾರ್ಷಿಕ ವಹಿವಾಟು ಹೊಂದಿರುವ “ಡೀಲರ್‌- ಡೀಲರ್‌’ ಹಾಗೂ “ಡೀಲರ್‌- ಗ್ರಾಹಕ’ ವ್ಯವಹಾರ ನಡೆಸುವವರಿಗೆ “ಸುಗಮ್‌’ ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಐದು ಕೋಟಿ ರೂ.ಗಿಂತ ಹೆಚ್ಚು ವಾರ್ಷಿಕ ವಹಿವಾಟು ನಡೆಸುವವರಿಗೆ “ನಾರ್ಮಲ್‌’ ಅರ್ಜಿ ನಮೂನೆಯನ್ನು ವೆಬ್‌ಸೈಟ್‌ನಲ್ಲಿ ಪರಿಚಯಿಸಿದೆ.

ತಿಂಗಳ 25ರಂದು ರಿಟರ್ನ್ಸ್ ಸಲ್ಲಿಕೆ ಅವಕಾಶ: “ಸಹಜ್‌’, “ಸುಗಮ್‌’, “ನಾರ್ಮಲ್‌’ ಅರ್ಜಿ ನಮೂನೆಯಡಿ ಹೆಚ್ಚುವರಿ ಅಂಕಣ ವಿವರ ಭರ್ತಿ ಮಾಡುವ ಪ್ರಕ್ರಿಯೆ ಕೈಬಿಡುವ ಪ್ರಸ್ತಾಪವಿದೆ. ಅಲ್ಲದೇ ಸಹಜ್‌, ಸುಗಮ್‌ ಅರ್ಜಿ ನಮೂನೆಯಡಿ ರಿಟರ್ನ್ಸ್ ಸಲ್ಲಿಸುವವರು ತಿಂಗಳ 20ನೇ ದಿನಾಂಕದ ಬದಲಿಗೆ 25ರಂದು ರಿಟರ್ನ್ಸ್ ಸಲ್ಲಿಕೆಗೆ ಅವಕಾಶ ಸಿಗಲಿದೆ. ಇದರಿಂದ ತಿಂಗಳ 20ರಂದು ಒಮ್ಮೆಗೆ ಲಕ್ಷಾಂತರ ಮಂದಿ ರಿಟರ್ನ್ಸ್ ಸಲ್ಲಿಸಲು ಮುಂದಾಗುತ್ತಿದ್ದರಿಂದ ಸರ್ವರ್‌ ಮೇಲೆ ಉಂಟಾಗುತ್ತಿದ್ದ ಒತ್ತಡ ತಗ್ಗಿದಂತಾಗಲಿದ್ದು, ಮಾಹಿತಿ ರವಾನೆ ಸುಗಮವಾಗುವ ನಿರೀಕ್ಷೆ ಇದೆ.

ಮುಖ್ಯವಾಗಿ ಸಹಜ್‌, ಸುಗಮ್‌ ಅಡಿಯಲ್ಲಿ ಪ್ರತಿ ತಿಂಗಳ ಬದಲಿಗೆ ಮೂರು ತಿಂಗಳಿಗೊಮ್ಮೆ ರಿಟರ್ನ್ಸ್ ಸಲ್ಲಿಕೆಗೂ ಅವಕಾಶ ನೀಡುವ ಚಿಂತನೆ ಇದೆ. ಅಂದರೆ ಮಾಸಿಕ ತೆರಿಗೆ ಪಾವತಿಸಿ ವಹಿವಾಟಿನ ವಿವರಗಳನ್ನು ಮೂರು ತಿಂಗಳಿಗೊಮ್ಮೆ ಸಲ್ಲಿಸಲು ಅವಕಾಶ ಕೊಡುವ ಚಿಂತನೆ ಇದೆ. ಇದರಿಂದ ಸರ್ವರ್‌ ಮೇಲೆ ಯಾವುದೇ ರೀತಿಯ ಒತ್ತಡ ಉಂಟಾಗದಂತೆ ತಡೆಯಬಹುದಾಗಿದೆ ಎಂಬುದು ಅಧಿಕಾರಿಗಳ ನಿರೀಕ್ಷೆ. “ನಾರ್ಮಲ್‌’ ಅರ್ಜಿ ನಮೂನೆ ಬಳಸುವ ವಹಿವಾಟುದಾರರು ತಿಂಗಳ 20 ರಂದು ರಿಟರ್ನ್ಸ್ ಸಲ್ಲಿಕೆ ವ್ಯವಸ್ಥೆ ಮುಂದುವರಿಯಲಿದೆ.

ದೇಶದಲ್ಲಿ 1.30 ಕೋಟಿಗೂ ಹೆಚ್ಚು ಮಂದಿ ಜಿಎಸ್‌ಟಿಡಿಯಡಿ ನೋಂದಾಯಿಸಿಕೊಂಡಿದ್ದು, ಇದರಲ್ಲಿ 1.10 ಕೋಟಿ ವ್ಯಾಪಾರ ವಹಿವಾಟುದಾರರು ಸಹಜ್‌, ಸುಗಮ್‌ ವ್ಯಾಪ್ತಿಗೆ ಒಳಪಡಲಿದ್ದಾರೆ. ರಾಜ್ಯದಲ್ಲೂ 8 ಲಕ್ಷ ಮಂದಿ ಜಿಎಸ್‌ಟಿಯಡಿ ನೋಂದಾಯಿಸಿ ಕೊಂಡಿದ್ದು, ಇಲ್ಲಿಯೂ ಐದು ಕೋಟಿ ರೂ.ಗಿಂತಲೂ ಕಡಿಮೆ ವಾರ್ಷಿಕ ವಹಿವಾಟು ಹೊಂದಿರುವವರ ಸಂಖ್ಯೆ 6 ಲಕ್ಷಕಿಂತ ಹೆಚ್ಚು ಇದೆ. ಹಾಗಾಗಿ ಸುಧಾರಿತ ಅರ್ಜಿ ನಮೂನೆಗಳಿಂದ ರಾಜ್ಯದ ಲಕ್ಷಾಂತರ ಮಂದಿ ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.

ಅ. 1ರಿಂದ ಜಾರಿ ನಿರೀಕ್ಷೆ: ಸಹಜ್‌, ಸುಗಮ್‌, ನಾರ್ಮಲ್‌ ಅರ್ಜಿ ನಮೂನೆ ಬಳಕೆ ವ್ಯವಸ್ಥೆಯನ್ನು ಅ.1ರಿಂದ ಜಾರಿಗೊಳಿಸುವ ಮಾತುಗಳಿದ್ದು, ಈ ಬಗ್ಗೆ ಜಿಎಸ್‌ಟಿ ಕೌನ್ಸಿಲ್‌ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ. ಆ ಹಿನ್ನೆಲೆಯಲ್ಲಿ ಸುಧಾರಿತ ಅರ್ಜಿ ನಮೂನೆಗಳನ್ನು ಪ್ರಕಟಿಸಿ ಆಕ್ಷೇಪಣೆ, ಸಲಹೆ, ಸೂಚನೆಯನ್ನು ಸ್ವೀಕರಿಸಲಾಗಿತ್ತು. ಸುಧಾರಿತ ಅರ್ಜಿ ನಮೂನೆಗಳಡಿ ರಿಟರ್ನ್ಸ್ ಸಲ್ಲಿಕೆಗೆ ಅವಕಾಶ ನೀಡಿದರೆ ಸರ್ವರ್‌ ಮೇಲಿನ ಒತ್ತಡ ತಗ್ಗಲಿದೆ. ಕಾಲಮಿತಿಯಲ್ಲಿ ಸಮರ್ಪಕವಾಗಿ ರಿಟರ್ನ್ಸ್ ಸಲ್ಲಿಕೆಗೆ ಅವಕಾಶವಿದೆ. ಪರಿಣಾಮವಾಗಿ ತೆರಿಗೆ ಸಂಗ್ರಹ ಹೆಚ್ಚಾಗುವ ನಿರೀಕ್ಷೆ ಎಂದು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಿಟರ್ನ್ಸ್ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅನಗತ್ಯ ವಿವರ ನಮೂದು, ಹೆಚ್ಚುವರಿ ಅಂಕಣಗಳನ್ನು ಕೈಬಿಡಬೇಕು ಎಂಬುದು ವ್ಯಾಪಾರ- ವಹಿವಾಟುದಾರರ ಒತ್ತಾಯವಾಗಿತ್ತು, ಎಫ್ಕೆಸಿಸಿಐ ವತಿಯಿಂದಲೂ ಜಿಎಸ್‌ಟಿ ಕೌನ್ಸಿಲ್‌ಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದನೆ ದೊರೆತಂತಿದ್ದು, ಸುಧಾರಿತ ಅರ್ಜಿ ನಮೂನೆಗಳನ್ನು ಪರಿಚಯಿಸಲು ಮುಂದಾಗಿರುವುದು ಸ್ವಾಗತಾರ್ಹ. ಈ ಬಗ್ಗೆ ವಾಣಿಜ್ಯೋದ್ಯಮಿಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ.
ಬಿ.ಟಿ.ಮನೋಹರ್‌, ಎಫ್ಕೆಸಿಸಿಐ ರಾಜ್ಯ ಜಿಎಸ್‌ಟಿ ಸಮಿತಿ ಅಧ್ಯಕ್ಷ

* ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.