ವಾಹನಗಳ ಹೊಗೆ ಮಾಲಿನ್ಯ ಹಾವಳಿಗೆ ಬಿಸಿ ಮುಟ್ಟಿಸಿದ ಪರಿಷ್ಕೃತ ದಂಡ!
Team Udayavani, Sep 11, 2019, 5:49 AM IST
ಉಡುಪಿ: ಹೊಗೆ ತಪಾಸಣೆ (ಎಮಿಷನ್ ಟೆಸ್ಟ್) ಕೇಂದ್ರದಲ್ಲಿ ಭಾರೀ ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯಗಳು ನಗರದಲ್ಲಿ ಸೋಮವಾರ ಕಂಡು ಬಂದಿವೆ.
ಕೇಂದ್ರ ಸರಕಾರ ಮೋಟರ್ ವಾಹನ ಕಾಯ್ದೆಗೆ ತಿದ್ದುಪಡಿ ತಂದು ನಿಯಮ ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಮುಂದಾಗಿದೆ. ವಾಹನ ತಪಾಸಣೆ ಮಾಡುವ ಸಂದರ್ಭ ಗಣಕೀಕೃತ ಹೊಗೆ ತಪಾಸಣೆ ಕೇಂದ್ರದಲ್ಲಿ ಪರೀಕ್ಷೆ ಮಾಡಿ ಮಾಲಿನ್ಯಕಾರವಲ್ಲ ಎನ್ನುವ ಪ್ರಮಾಣ ಪತ್ರ ಹೊಂದಿರದ ವಾಹನ ಮಾಲಕನಿಗೆ ಭಾರೀ ದಂಡ ವಿಧಿಸಲಾಗುತ್ತಿದೆ.
ದಂಡಕ್ಕೆ ಬೆಚ್ಚಿದ ವಾಹನ ಸವಾರರು
ಪ್ರತಿ ಆರು ತಿಂಗಳಿಗೊಮ್ಮೆ ಗಣಕೀ ಕೃತ ಹೊಗೆ ತಪಾಸಣೆ ಕೇಂದ್ರದಿಂದ ವಾಹನಗಳ ಹೊಗೆ ತಪಾಸಣೆಯಾಗಬೇಕು. ಆದರೆ ಹೆಚ್ಚಿನ ವಾಹನಗಳ ಸವಾರರು ಈ ನಿಯಮವನ್ನು ಪಾಲಿಸುತ್ತಿಲ್ಲ. ಇದೀಗ ನಿಯಮ ಪಾಲಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತಿದೆ. 50 ರೂ., 100 ರೂ.ನಲ್ಲಿ ಮುಗಿಯುವ ತಪಾಸಣೆಗೆ ಯಾಕೆ ಭಾರೀ ತಂಡ ಕಟ್ಟಬೇಕು ಎನ್ನುವುದನ್ನು ಅರಿತ ವಾಹನ ಸವಾರರು ಎಮಿಷನ್ ಟೆಸ್ಟ್ ಕೇಂದ್ರಕ್ಕೆ ಲಗ್ಗೆಯಿಟ್ಟಿದ್ದಾರೆ.
ಸರ್ವರ್ ಸಮಸ್ಯೆ
ವಾಹನಗಳ ಎಂಜಿನ್ ಸರಿಯಿದ್ದರೆ ಮಾಲಿನ್ಯ ಕಾರಕ ಹೊಗೆ ಇರುವುದಿಲ್ಲ. ಆಗ ಹೊಗೆ ಪರೀಕ್ಷೆ ಒಂದು ನಿಮಿಷದಲ್ಲಿ ಮುಗಿಯುತ್ತದೆ. ಮಾಲಿನ್ಯಕಾರಕವಾಗಿದ್ದರೆ ಮಾತ್ರ ಪರೀಕ್ಷೆಗೆ ಎರಡು-ಮೂರು ನಿಮಿಷಗಳು ಬೇಕಾಗುತ್ತದೆ. ಇದು ಆನ್ಲೈನ್ ಮೂಲಕ ನಡೆಯುವ ಪ್ರಕ್ರಿಯೆ. ದಂಡಕ್ಕೆ ಬೆಚ್ಚಿದ ಸವಾರರು ಎಲ್ಲ ಕಡೆ ಒಮ್ಮೆಲೆ ವಾಹನಗಳು ಹೊಗೆ ಪರೀಕ್ಷೆಗೆ ಬಂದಿರುವುದರಿಂದ ಸರ್ವರ್ ಕೊಂಚ ಸಮಸ್ಯೆ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ