ವಿನೋಬ ನಗರ ವಿನಾಯಕಗೆ ವಿದಾಯ

ಮುಗಿಲು ಮುಟ್ಟಿದ ಹರ್ಷೋದ್ಘಾರ•ಸಾವಿರಾರು ಜನ ಭಾಗಿ •ಶಾಂತಿಯುತ ಮೆರವಣಿಗೆ

Team Udayavani, Sep 11, 2019, 11:27 AM IST

11-Sepctember-2

ದಾವಣಗೆರೆ: ವಿನೋಬ ನಗರ ಗಣೇಶ ವಿಸರ್ಜನಾ ಮೆರವಣಿಗೆಯ ನೋಟ.

ದಾವಣಗೆರೆ: ವರುಣನ ಸಿಂಚನ…, ಬೇಸಿಗೆ ನಾಚಿಸುವ ಬಿರು ಬಿಸಿಲು.., ಹೂವಿನ ಮಳೆ…, ಕಿವಿಗಡುಚ್ಚುಕ್ಕುವ ಡಿಜೆ…, ಪಟಾಕಿಯ ಸದ್ದು…, ಧ್ವನಿವರ್ಧಕದಿಂದ ತೇಲಿ ಬರುತ್ತಿದ್ದ ಹಾಡುಗಳಿಗೆ ತಕ್ಕಂತೆ ಹೆಜ್ಜೆ…, ಮುಗಿಲು ಮುಟ್ಟಿದ ಹರ್ಷೋದ್ಘಾರ…, ಮೈ ಮನ ನವಿರೇಳಿಸುವಂತ ವಿಜೃಂಭಣೆಯ ಮೆರವಣಿಗೆಯೊಂದಿಗೆ ಮಂಗಳವಾರ ವಿನೋಬ ನಗರ 2ನೇ ಮುಖ್ಯ ರಸ್ತೆಯ ಶ್ರೀ ವೀರ ವರಸಿದ್ಧಿ ವಿನಾಯಕನ ವಿಸರ್ಜನೆ ಮಾಡಲಾಯಿತು.

ವಿನೋಬ ನಗರ 2ನೇ ಮುಖ್ಯ ರಸ್ತೆಯ ಶ್ರೀ ವೀರ ವರಸಿದ್ಧಿ ವಿನಾಯಕನ ವಿಸರ್ಜನಾ ಮೆರವಣಿಗೆ ತನ್ನದೇ ಆದ ಖ್ಯಾತಿಗೆ ತಕ್ಕಂತೆ ಸೊಬಗಿನಿಂದ ಕೂಡಿತ್ತು. ಭರ್ಜರಿ ಮೆರವಣಿಗೆಗೆ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಚಾಲನೆ ನೀಡಿದರು. ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಹಳ್ಳಿ ರಮೇಶ್‌, ನಗರಸಭೆ ಮಾಜಿ ಉಪಾಧ್ಯಕ್ಷ ಎ. ನಾಗರಾಜ್‌, ಶ್ರೀ ವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಟಿ.ಎಂ. ಗುರುನಾಥ್‌ಬಾಬು, ಗಣೇಶ್‌, ಡಿ.ಎಸ್‌. ರಮೇಶ್‌, ಎಂ. ಟಿಪ್ಪುಸುಲ್ತಾನ್‌, ಬೆಳ್ಳೊಡಿ ಮಂಜುನಾಥ್‌, ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ತಹಶೀಲ್ದಾರ್‌ ಜಿ. ಸಂತೋಷ್‌ಕುಮಾರ್‌ ಇತರರು ಸಾಥ್‌ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ, ಅದ್ಧೂರಿ, ವಿಜೃಂಭಣೆಯ ಗಣೇಶನ ಮೆರವಣಿಗೆ ನೋಡುವುದೇ ಆನಂದ. ಅಲ್ಪಸಂಖ್ಯಾತ ಬಾಂಧವರು ಸಹ ಗಣೇಶಮೂರ್ತಿಗೆ ಮಾಲಾರ್ಪಣೆ ಮಾಡುವುದು ಸಾಮರಸ್ಯದ ಸಂಕೇತ ಎಂದು ಸಂತಸ ವ್ಯಕ್ತಪಡಿಸಿದರು.

ಎಸ್‌ಪಿ ಹನುಮಂತರಾಯ ಮಾತನಾಡಿ, ಬಹಳ ವರ್ಷಗಳಿಂದ ವಿನೋಬ ನಗರ ಗಣೇಶನ ಮೆರವಣಿಗೆಯನ್ನ ಅದ್ಧೂರಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಶಾಂತಿ, ಸುವ್ಯವಸ್ಥೆಯುತ ಮೆರವಣಿಗೆ ನಡೆಯಲಿಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಗಣೇಶನ ಮೆರವಣಿಗೆ ಪ್ರಾರಂಭವಾಗುತ್ತಿದ್ದಂತೆ ಪಟಾಕಿ ಸಿಡಿಸಿ, ಗುಲಾಲ್ ಎರಚಿ ಸಂಭ್ರಮಕ್ಕೆ ಮುನ್ನಡಿ ಬರೆಯಲಾಯಿತು. ಡೊಳ್ಳು, ಕರಡಿ ಮಜಲು, ನಂದಿಕೋಲು… ಮುಂತಾದ ಜಾನಪದ ಕಲಾ ಪ್ರಕಾರ, ಡಿಜೆಯಿಂದ ಹೊರ ಹೊಮ್ಮುತ್ತಿದ್ದ ಹಾಡುಗಳಿಗೆ ವಿಶೇಷ ಧಿರಿಸಿನಲ್ಲಿದ್ದ ನೂರಾರು ಯುವಕರು ಮನಸೋ ಇಚ್ಛೆ ಹೆಜ್ಜೆ ಹಾಕಿದರು. ಸೆಲ್ಫಿ ತೆಗೆದುಕೊಳ್ಳುವ ಮೂಲಕ ಮೆರವಣಗೆ ಸ್ಮರಣೀಯವಾಗಿಸಿಕೊಂಡರು.

ಗಣಪತಿ ಬಪ್ಪ ಮೋರಯ… ಜೈ ಜೈ ಶಿವಾಜಿ… ಜೈ ಶ್ರೀರಾಮ್‌…, ಭಾರತ್‌ ಮಾತಾ ಕೀ ಜೈ… ಎಂಬ ಘೋಷಣೆ ಮೊಳಗಿದವು. ಮುಗಿಲು ಮುಟ್ಟುವಂತೆ ವಿಘ್ನೇಶ್ವರ್‌ ಮಹಾರಾಜ್‌ ಕೀ ಜೈ… ಎಂಬ ಜೈಕಾರ ಹಾಕಿದರು. ಮೆರವಣಿಗೆ ಸಾಗಿ ಬಂದ ಇಕ್ಕೆಲಗಳ ಕಟ್ಟಡಗಳಿಂದ ಹೂವಿನ ಮಳೆ ಸುರಿಸುವ ಮೂಲಕ ಮೆರವಣಿಗೆಗೆ ಇನ್ನಷ್ಟು ಸೊಬಗು ಹೆಚ್ಚಿಸಲಾಯಿತು.

ಮೆರವಣಿಗೆ ಸಾಗುತ್ತಿದ್ದಂತೆ ಜನರ ಸಂಖ್ಯೆ ಜಾಸ್ತಿಯಾಗತೊಡಗಿತು. ಸಾವಿರಾರು ಜನರು ಮೆರವಣಿಗೆಗೆ ಕೂಡಿ ಕೊಂಡಿದ್ದರಿಂದ ಕಾಲಿಡಲು ಜಾಗ ಇಲ್ಲದಂತಾಯಿತು. ಕಿರಿದಾದ ರಸ್ತೆಯುದ್ದಕ್ಕೂ ಅಕ್ಷರಶಃ ಜನಸಾಗರವೇ ಕಂಡು ಬಂದಿತು. ಚಿಕ್ಕ ಮಕ್ಕಳು, ಯುವಕರು, ವಯೋವೃದ್ಧರು… ಎನ್ನದೆ ಎಲ್ಲರೂ ಹೆಜ್ಜೆ ಹಾಕಿ, ಸಂಭ್ರಮಿಸಿದರು.

ಮೆರವಣಿಗೆ ಪ್ರಾರ್ಥನಾ ಮಂದಿರದ ಬಳಿ ಬರುವ ವೇಳೆಗೆ ಸಾಗರೋಪಾದಿ ಜನರು ನೆರೆದಿದ್ದರು. ಮೆರವಣಿಗೆಯಲ್ಲಿದ್ದವರ ಹರ್ಷೋದ್ಘಾರ ಹೆಚ್ಚಾಯಿತು.ಅಲ್ಪಸಂಖ್ಯಾತ ಮುಖಂಡರು ಗಣೇಶಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾದರು. ಪ್ರಾರ್ಥನಾ ಮಂದಿರದ ಬಳಿ ಸ್ವತಃ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ತಹಶೀಲ್ದಾರ್‌ ಜಿ. ಸಂತೋಷ್‌ಕುಮಾರ್‌ ನಿಂತಿದ್ದು ಆಗಾಗ ಕೆಲ ಸೂಚನೆ ನೀಡುವ ಮೂಲಕ ಮೆರವಣಿಗೆ ಮುಂದೆ ಸಾಗುವ ಉಸ್ತುವಾರಿ ವಹಿಸಿಕೊಂಡಿದ್ದರು.

ವಿನೋಬ ನಗರ 2ನೇ ಮುಖ್ಯ ರಸ್ತೆ, ಅರುಣಾ ಚಿತ್ರಮಂದಿರ ವೃತ್ತ, ರಾಂ ಆ್ಯಂಡ್‌ ಕೋ ವೃತ್ತ, ಚರ್ಚ್‌ ರಸ್ತೆ, ವಿನೋಬ ನಗರ 1ನೇ ಮುಖ್ಯ ರಸ್ತೆ, ಹಳೆ ಪಿಬಿ ರಸ್ತೆಯ ಮೂಲಕ ಬಾತಿ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ವೇಳೆಗೆ ರಾತ್ರಿಯಾಗಿತ್ತು.

ಸಾಕಷ್ಟು ಬಿಗಿ ಪೊಲೀಸ್‌, ಹೋಂ ಗಾರ್ಡ್‌ಭದ್ರತೆ ಒದಗಿಸಲಾಗಿತ್ತು. 68ಕ್ಕೂ ಹೆಚ್ಚು ಭಾಗದಲ್ಲಿ ಸಿಸಿ ಟಿವಿ ಕ್ಯಾಮೆರಾ, ಡ್ರೋಣ್‌ ಕ್ಯಾಮೆರಾ, ನೀರು, ತಂಪು ಪಾನೀಯ, ತಿಂಡಿ, ತುರ್ತು ಸೇವೆಗೆ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿತ್ತು. ಟ್ರ್ಯಾಕ್ಟರ್‌ ಹರಿದ ಪರಿಣಾಮ ಓರ್ವ ಪಿಎಸ್‌ಐ, ಪೇದೆಯೊಬ್ಬರ ಕಾಲಿಗೆ ಗಾಯವಾಗಿದ್ದು ಬಿಟ್ಟರೆ ಮೆರವಣಿಗೆ ಶಾಂತಿಯುತವಾಗಿ ನಡೆಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.