ಅಂತಾರಾಜ್ಯ ಸಂಪರ್ಕ ರಸ್ತೆಗೆ ದುಸ್ಥಿತಿ

ತೆಲಂಗಾಣ ಗಡಿ ಗ್ರಾಮಗಳ ಜನರಿಗೆ ಸಮಸ್ಯೆ •ವಿದ್ಯಾರ್ಥಿಗಳು-ರೈತರಿಗೆ ಸಂಚಾರ ಸಂಕಟ

Team Udayavani, Sep 11, 2019, 12:01 PM IST

11-Sepctember-4

ಔರಾದ: ಕರ್ನಾಟಕ-ತೆಲಂಗಾಣ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುಸ್ಥಿತಿ.

ರವೀಂದ್ರ ಮುಕ್ತೇದಾರ
ಔರಾದ:
ದಶಕಗಳು ಕಳೆದರೂ ರಸ್ತೆ ಕಾಮಗಾರಿ ಮಾಡದಿರುವುದರಿಂದ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದ ಗಡಿ ಗ್ರಾಮಸ್ಥರು ಸಂಚಾರಕ್ಕೆ ಸಮಸ್ಯೆ ಎದುರಿಸುವಂತಾಗಿದೆ. ಇದು ಕರ್ನಾಟ ಮತ್ತು ತೆಲಂಗಾಣ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಐದು ಗ್ರಾಮಸ್ತರ ದಶಕದ ಕಥೆಯಾಗಿದೆ.

ಹಾಳಾದ ರಸ್ತೆ ಸುಧಾರಣೆ ಮಾಡುವಂತೆ ಸರ್ಕಾರಕ್ಕೆ ಹಾಗೂ ಸಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈ ಭಾಗದ ಜನರು ರಸ್ತೆಗಳಿಲ್ಲದೇ ಸಂಚಾರಕ್ಕೆ ಸಮಸ್ಯೆ ಅನುಭವಿಸುತ್ತಿದ್ದಾರೆ.

ಗಡಿ ಗ್ರಾಮಸ್ಥರು ನೆರೆಯ ತೆಲಂಗಾಣಕ್ಕೆ ಹಾಗೂ ತೆಲಂಗಾಣ ರಾಜ್ಯದ ಜನರು ಕರ್ನಾಟಕ ಪ್ರವೇಶ ಮಾಡಲು ಇರುವ ರಸ್ತೆ ಸಂರ್ಪೂಣ ಹಾಳಾಗಿದೆ. ಇದರಿಂದ ಜನರು ನಿತ್ಯ ಭಯದ ವಾತಾವರಣದ ಮಧ್ಯದಲ್ಲಿ ಸಂಚಾರ ಮಾಡುವ ಸ್ಥಿತಿ ಇದೆ. ರಸ್ತೆ ಸಂಪೂರ್ಣ ಕೆಟ್ಟು ಹೋಗಿರುವುದರಿಂದ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡು ಸಂಚಾರ ಸಂಚಕಾರವನ್ನುಂಟು ಮಾಡುತ್ತಿದೆ.

ತೆಲಂಗಾಣ ರಾಜ್ಯದಲ್ಲಿನ ಕಾರೆಮುಂಗಿ, ಗಡಿ ಗೌಂಡಗಾಂವ, ಸಿಖರಖಾನೆ, ಜೈನಾಪೂರ ಮತ್ತು ಎಸಕಿ ಐದು ಗ್ರಾಮದ ವಿದ್ಯಾರ್ಥಿಗಳು ಪ್ರತಿನಿತ್ಯ ಔರಾದ ತಾಲೂಕಿನ ಕಂದಗೂಳ ಗ್ರಾಮದಲ್ಲಿ ಹಾಗೂ ಜಿಲ್ಲಾ ಕೇಂದ್ರವಾದ ಬೀದರನಲ್ಲಿ ಶಾಲಾ-ಕಾಲೇಜುಗಳಿಗೆ ಬರುತ್ತಾರೆ. ರಸ್ತೆ ಹಾಳಾಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಸಾರಿಗೆ ಸಂಸ್ಥೆಯ ಬಸ್‌ಗಳು ಬರುವುದಿಲ್ಲ. ಖಾಸಗಿ ವಾಹನಗಳ ಮೇಲೆ ಸಂಚಾರ ಮಾಡುವ ಅನಿವಾರ್ಯವಾಗಿದೆ.

ವಿದ್ಯಾರ್ಥಿಗಳಿಗೆ ಮಾತ್ರವಲ್ಲ. ರೈತರು ಬೆಳೆಗಳನ್ನು ಜಿಲ್ಲಾ ಕೇಂದ್ರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಾಗಿಸಲು ಹರಸಾಹಸ ಪಡುವಂತಾಗಿದೆ. ಅದಲ್ಲದೆ ಗರ್ಭಿಣಿಯರು, ಅನಾರೋಗ್ಯದಿಂದ ಬಳಲುವ ಜನರು ಆಸ್ಪತ್ರೆಗೆ ಹೋಗಲು ಉತ್ತಮ ರಸ್ತೆಯಿಲ್ಲದೇ ಪರದಾಡುವಂತಾಗಿದೆ. ಸರಿಯಾದ ರಸ್ತೆಗಳಿಲ್ಲದಿರುವುದರಿಂದ ರಸ್ತೆ ಮಧ್ಯದಲ್ಲಿ ಇಬ್ಬರು ಪ್ರಾಣವನ್ನು ಕಳೆದುಕೊಂಡ ಉದಾರಣೆಗಳು ಕೂಡ ಇವೆ.

ಸರ್ಕಾರ ಪ್ರತಿವರ್ಷ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ತಾಲೂಕಿನ ರಸ್ತೆ ಅಭಿವೃದ್ಧಿಗೆ ಬಂದ ಅನುದಾನ ಎಲ್ಲಿಗೆ ಹೋಗುತ್ತಿದೆ ಎನ್ನುವುದು ಯಕ್ಷ ಪ್ರಶ್ನೆಯಾಗಿ ಈ ಭಾಗದ ಜನರನ್ನು ಕಾಡುತ್ತಿದೆ.

ಕಂದಗೂಳ ಗ್ರಾಮದಿಂದ ಗಡಿ ಗೌಂಡಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದೆ. ಹತ್ತು ವರ್ಷಗಳ ಹಿಂದೆ ಅರ್ಧ ಕಿ.ಮೀ. ರಸ್ತೆ ಮಾಡಿದ ಅಧಿಕಾರಿಗಳು ಇನ್ನೂ ಅರ್ಥ ಕಿ.ಮೀ. ರಸ್ತೆ ಮಾಡದೆ ಹಾಗೇ ಬಿಟ್ಟಿದ್ದಾರೆ. ಅಲ್ಲದೇ ಹಾಗೆಯೇ ಬಿಟ್ಟ ರಸ್ತೆ ಸಂಪೂರ್ಣ ಹಾಳಾಗಿದೆ. ಹತ್ತು ವರ್ಷಗಳಿಂದ ಈ ಭಾಗದ ರಸ್ತೆ ಅಭಿವೃದ್ಧಿಯಾಗದಿರುವುದರಿಂದ ಬೈಕ್‌ ಸವಾರರು ಹಾಗೂ ಪ್ರಯಾಣಿಕರು ಯಾತನೆ ಅನುಭವಿಸುವಂತಾಗಿದೆ.

ಕನ್ನಡ ವ್ಯಾಮೋಹ: ಕರ್ನಾಟಕದಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಕನ್ನಡ ಕಲಿಯಿರಿ ಎಂದು ಸರ್ಕಾರ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನರ ಮನ ಪರಿವರ್ತನೆ ಮಾಡಲು ಮುಂದಾಗಿದೆ. ಆದರೆ ನೇರೆ ತೆಲಂಗಾಣ ರಾಜ್ಯದ ಐದು ಗ್ರಾಮದ ಜನರು ಔರಾದ ತಾಲೂಕಿನ ಕಂದಗೂಳ, ಬೀದರ ತಾಲೂಕಿನ ಚಾಂಬೋಳ ಮತ್ತು ಜಿಲ್ಲಾ ಕೇಂದ್ರವಾದ ಬೀದರನಲ್ಲಿ ಪದವಿ ಸೇರಿದಂತೆ ಇನ್ನಿತರ ಉನ್ನತ ಶಿಕ್ಷಣವನ್ನು ಮಾತೃ ಭಾಷೆಯಲ್ಲಿ ಪಡೆದುಕೊಳ್ಳುತ್ತಿದ್ದಾರೆ. ಅದರಂತೆ ಇಲ್ಲಿನ ಯುವಕರು ಹಾಗೂ ಕೂಲಿ ಕಾರ್ಮಿಕರು ಕೂಡ ತಮ್ಮ ಪ್ರತಿನಿತ್ಯದ ಉಪಜೀವನಕ್ಕಾಗಿ ಬೀದರ ಮೇಲೆ ಅವಲಂಬಿತರಾಗಿ ತಮ್ಮ ಕುಟುಂಬ ಸದಸ್ಯರನ್ನು ನೋಡಿಕೊಳ್ಳುತ್ತಿದ್ದಾರೆ.

ದಶಕಗಳಿಂದ ಈ ಭಾಗದ ರಸ್ತೆ ಸುಧಾರಣೆ ನಡೆದಿಲ್ಲ. ಕಂದಗೂಳ ಗ್ರಾಮದಿಂದ ಗಡಿ ಗೌಂಡಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅರ್ಧ ಕಿ.ಮೀ. ಮಾಡಿ ಇನ್ನುಳಿದ ರಸ್ತೆಯನ್ನು ಅಧಿಕಾರಿಗಳು ಇಂದಿಗೂ ಮಾಡಿಲ್ಲ. ಕೂಡಲೆ ಉತ್ತಮ ರಸ್ತೆ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಬೇಕು. ಇಲ್ಲವಾದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುತ್ತದೆ.
ವಿನೋದಕುಮಾರ ಪಾಟೀಲ,
 ಗೌಡಗಾಂವ ನಿವಾಸಿ

ಕಂದಗೂಳ ಗಡಿಗೌಂಡಗಾವ ರಸ್ತೆಯ ಅರ್ಧ ಕಿ.ಮೀ. ಕಾಮಗಾರಿ ಮಾಡದಿರುವುದರ ಬಗ್ಗೆ ಹಾಗೂ ರಸ್ತೆ ಸುಧಾರಣೆಯ ಬಗ್ಗೆ ಸಬಂಧ ಪಟ್ಟ ಜೆಇ ಗಮನಕ್ಕೆ ತಂದು, ಕೂಡಲೆ ನಿಂತಿಹೋದ ರಸ್ತೆ ಸುಧಾರಣೆ ಮಾಡಲು ಮತ್ತು ಗುಂಡಿಗಳು ಬಿದ್ದ ರಸ್ತೆಯಲ್ಲಿ ಬರಬು ಹಾಕುವಂತೆ ಆದೇಶ ಮಾಡುವೆ.
ಅಶೋಕ ಸಜ್ಜನಶೆಟ್ಟಿ,
 ಜಿಪಂ ಇಇ ಔರಾದ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.