ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ -ಪ್ರತಿಭಟನೆ
Team Udayavani, Sep 11, 2019, 3:05 PM IST
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಆಗ್ರಹಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ಬುಧವಾರ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಪ್ರತಿಭಟನೆ ನಡೆಯಿತು.
ಮೆಲ್ಕಾರ್ ಜಂಕ್ಷನ್ ನಿಂದ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಬಿ.ಸಿ.ರೋಡ್ ಮಿನಿ ವಿಧಾನಸೌಧದ ವರೆಗೆ ಪಾದಾಯಾತ್ರೆಯ ಮೂಲಕ ಆಗಮಿಸಿ ಹೆದ್ದಾರಿ ದುರಸ್ತಿಗಾಗಿ ತಹಶೀಲ್ದಾರ್ ಅವರ ಮೂಲಕ ಸರಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿ.ಪಂ, ತಾ.ಪಂ ಸದಸ್ಯರು, ಕಾಂಗ್ರೆಸ್ ನ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.