ಪ್ರಾಣಿಗಳ ಪಾಠ


Team Udayavani, Sep 12, 2019, 5:15 AM IST

e-11

ಕಾಡಿನ ನಡುವೆ ವನರಾಜ ಸಿಂಹದ ನೇತೃತ್ವದಲ್ಲಿ ಪ್ರಾಣಿಗಳ ಸಭೆ ನಡೆಯುತ್ತಿತ್ತು. ಜಿಂಕೆ “ಇತ್ತೀಚೆಗೆ ಬೇಟೆಗಾರನ ಉಪಟಳ ವಿಪರೀತವಾಗುತ್ತಿದೆ. ಇದು ಹೀಗೆ ಮುಂದುವರಿದರೆ ನಮ್ಮ ಸಂತತಿ ನಾಶವಾಗುವುದು ಖಚಿತ. ದಯಮಾಡಿ ನಮ್ಮನ್ನು ಕಾಪಾಡಿ ಉಳಿಸಿ’ ಎಂದು ಮೊರೆ ಇಟ್ಟಿತು. ಉಳಿದ ಪ್ರಾಣಿಗಳೆಲ್ಲ ಅದಕ್ಕೆ ದನಿಗೂಡಿಸಿದವು. ಅದಕ್ಕೆ ನರಿ ಒಂದು ಉಪಾಯ ಹೇಳಿತು. ವನರಾಜ ಸಿಂಹ ಅದಕ್ಕೆ ಒಪ್ಪಿಗೆ ಸೂಚಿಸಿತು. ಮರುದಿನ ಬೇಟೆಗಾರ ಮನೆಯಲ್ಲಿಲ್ಲದ ಸಮಯದಲ್ಲಿ ಆನೆ ಆತನ ಮನೆಯ ಬಳಿ ನಿಂತು ಗಿಳಿಟ್ಟಿತು. ಹೆದರಿದ ಮನೆಯವರು ಹೊರಕ್ಕೆ ಓಡಿಬಂದರು. ಇದನ್ನೇ ಕಾಯುತ್ತಿದ್ದ ಕರಡಿ ಮಾಮ ಅವರನ್ನೆಲ್ಲಾ ಕರೆದುಕೊಂಡು ಸುರಕ್ಷಿತ ಜಾಗಕ್ಕೆ ಕರೆದೊಯ್ಯುವೆನೆಂದು ಹೇಳಿತು. ಮನೆಯವರೆಲ್ಲರೂ ಕರಡಿಯನ್ನು ಹಿಂಬಾಲಿಸಿದರು. ಅವರೆಲ್ಲರೂ ತೊರೆಯೊಂದರ ಬಳಿ ಬಂದರು. ಪೂರ್ವ ಯೋಜನೆಯಂತೆ ಆ ತೊರೆಯ ಸುತ್ತಲೂ ಇದ್ದ ಬಂಡೆಗಳ ಹಿಂಭಾಗದ ಪೊದೆಯೊಳಗೆ ಪ್ರಾಣಿಗಳೆಲ್ಲ ಅವಿತುಕೊಂಡಿದ್ದವು.

ಇತ್ತ ಬೇಟೆಗಾರನ ಕಣ್ಣಿಗೆ ಮುದ್ದಾದ ಜಿಂಕೆಮರಿ ಕಂಡಿತು. ಅವನು ತಡ ಮಾಡಲಿಲ್ಲ. ಸರಕ್ಕನೆ ಪಕ್ಕದ ಮರದ ಹಿಂದೆ ಅಡಗಿ ಬಿಲ್ಲಿಗೆ ಬಾಣ ಹೂಡಿದ. ಅಷ್ಟರಲ್ಲಿ ಇಡೀ ಅಡವಿಯೇ ನಡುಗುವಂತೆ “ನಿಲ್ಲು’ ಎಂಬ ಧ್ವನಿ ಹಿಂದಿನಿಂದ ಬಂದಿತು. ಬೇಟೆಗಾರ ಹಿಂದಕ್ಕೆ ತಿರುಗಿ ನೋಡಿದ. ಅಲ್ಲಿ ಕಾಡುಪ್ರಾಣಿಗಳ ದಂಡೇ ಇತ್ತು. ಅವುಗಳ ಜೊತೆ ಬೇಟೆಗಾರನ ಕುಟುಂಬವೂ ಇತ್ತು. ಬೇಟೆಗಾರ ಬಿಲ್ಲು ಬಾಣವನ್ನು ಎಸೆದು ತನ್ನ ಕುಟುಂಬದವರ ಬಳಿ ಓಡಿ ಬಂದ. ಅವರನ್ನು ಬಾಚಿ ತಬ್ಬಿದ.

ಬಂಡೆಮೇಲೆ ಕುಳಿತ ಸಿಂಹ ಒಂದೇ ನೆಗೆತಕ್ಕೆ ಅವನೆದುರು ಹಾರಿ ಬಂದು “ನೋಡಿದೆಯಾ? ನಿನಗೆ ನಿನ್ನವರ ಮೇಲೆ ಇರುಷ್ಟೇ ಕಾಳಜಿ ನಮಗೂ ನಮ್ಮವರ ಮೇಲಿದೆ’ ಎಂದಿತು. ಬೇಟೆಗಾರನಿಗೆ ಪ್ರಾಣಿಗಳ ಉಪಾಯ ಅರ್ಥವಾಯಿತು. ಅವನು ಕೈ ಜೋಡಿಸಿ “ನಾನು ಇನ್ನೆಂದೂ ಮೂಕಪ್ರಾಣಿಗಳ ಬೇಟೆ ಆಡುವುದಿಲ್ಲ. ನನ್ನನ್ನು ಕ್ಷಮಿಸಿ’ ಎಂದು ಹೇಳಿ ತನ್ನವರೊಂದಿಗೆ ಮನೆಯ ಕಡೆ ಪ್ರಯಾಣ ಬೆಳೆಸಿದ. ಬೇಟೆಗಾರನ ಮಾತು ಕೇಳಿ ಅಲ್ಲಿ ನರೆದ ಪ್ರಾಣಿಗಳೆಲ್ಲ ಕುಣಿದು ಕುಪ್ಪಳಿಸಿದವು.

– ಅರವಿಂದ ಜಿ. ಜೋಶಿ, ಮೈಸೂರು

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.