ಹೆಚ್ಚುತ್ತಿದೆ ಜಾನಪದ ಕ್ರೀಡೆಗಳತ್ತ ಒಲವು


Team Udayavani, Sep 12, 2019, 5:00 AM IST

e-20

ಜಾನಪದ ಆಟೋಟ ಈ ನೆಲದ ಸಂಸ್ಕೃತಿಯ ಪ್ರತೀಕ. ಒಂದು ಕಾಲದಲ್ಲಿ ಮನೆಯ ಅಂಗಳ, ವಠಾರ, ಗದ್ದೆ ಮೊದಲಾದೆಡೆ ಬಹುವಾಗಿ ಸದ್ದು ಮಾಡಿದ್ದ ಜಾನಪದ ಆಟಗಳು ಕಾಲ ಕ್ರಮೇಣ ಆಧುನಿಕತೆಯ ಆರ್ಭಟಕ್ಕೆ ತೆರೆಮರೆಗೆ ಸರಿದವು ಈಗ ಮತ್ತೆ ಗ್ರಾಮ್ಯ ಪ್ರದೇಶದಲ್ಲಿ ತನ್ನ ಛಾಪು ಮೂಡಿ ಸುತ್ತಿರುವುದು ಗಮನಾರ್ಹ ಸಂಗತಿ.

ಆಟಿಕೂಟ, ಕೆಸರ್‌ಡೊಂಜಿ ದಿನ ಎಂಬಿತ್ಯಾದಿ ಕೂಟಗಳ ಮೂಲಕ ಮಣ್ಣಿನಾಟವನ್ನು ಮತ್ತೆ ನೆನಪಿಸುವ ಪ್ರಯತ್ನಗಳು ನಡೆಯುತ್ತಿವೆೆ. ವರ್ಷಂಪ್ರತಿ ಗ್ರಾಮಗಳಲ್ಲಿ ಸಂಘ ಸಂಸ್ಥೆಗಳು ಜಾನಪದ ಆಟಗಳನ್ನು ಆಯೋಜಿಸಿ ಬಹುಮಾನ ವಿತರಿಸಿ ಸಂಭ್ರಮ ಸಡಗರ ಹಂಚಿಕೊಳ್ಳಲಾಗುತ್ತಿದೆ.

ವೈವಿಧ್ಯಮಯ ಜಾನಪದ ಕ್ರೀಡೆಗಳು
ಎಲ್ಲ ಜನಾಂಗಳಲ್ಲೂ, ಪ್ರದೇಶ ಗಳಲ್ಲೂ ಹಿಂದಿನ ದಿನಗಳಿಂದಲೇ ಪ್ರಚಲಿತವಾಗಿರುವ ಅನೇಕ ಜಾನಪದ ಆಟಗಳಿವೆ. ಆಟಗಳು ಪ್ರಾಚೀನ ಸಂಸ್ಕೃತಿಯನ್ನು ತಕ್ಕಮಟ್ಟಿಗೆ ಬಿಂಬಿಸುವುದು ಕೂಡ ಆಗಿದೆ. ಅಜ್ಜಿಯಾಟ, ತೋಳತೊಟ್ಟಿಲಾಟ, ಕೋಳಿಕಾದುವಿಕೆ, ಕುದುರೆ ಆಟ, ಬೀಸು ಹೊಡೆತ, ಉಪ್ಪಾಟ, ಕಪ್ಪೆಲಾಗ, ಉಸಿರು ಕಟ್ಟಿಸುವುದು, ಟೊಂಕ ಹಾಕುವುದು, ಕಾಗೆ-ಗಿಳಿ, ಕಬಡ್ಡಿ, ಹುಲಿದನ, ಪುಣಿಚ್ಚೆಲ್‌ ಆಟ, ಪಲ್ಲಿಪತ್‌, ಮರಕೋತಿಯಾಟ, ನೇಲಾಟ, ಅವಿತುಕೊಳ್ಳುವಾಟ, ದುರ್ಸುಬಾಣ, ನೀರಮೇಲೆ ಕಪ್ಪೆಲಾಗ, ತಪ್ಪಂಗಾಯಿ, ಚೆಂಡು ಹೊಡೆತ, ಕುಟ್ಟಿದೊಣ್ಣೆ, ಏಳುಪಲ್ಲೆ ಯಾಟ, ಬುಗುರಿ, ಜುಬುಲಿ, ಗೋಲಿಯಾಟ, ಏಳು ಗುಳಿಯ ಆಟ, ಕಣ್ಣಾ ಮುಚ್ಚಾಲೆ, ಗಾಡಿ ಯಾಟ, ಮೊದಲಾದ ಹೊರಾಂಗಣ ಆಟಗಳಿವೆ.

ಚೆನ್ನ ಮಣೆ, ಪಗಡೆ, ಕಲ್ಲಾಟ, ಕವಡೆ ಆಟ, ಹೊಂಗಾರನ ಕಾಯಿ, ಗಜ್ಜುಗ, ಮಂಜೊಟ್ಟಿ, ಹುಣಸೇ ಬೀಜ ಗಳಿಂದ ಆಡುವ ಆಟ ಮುಂತಾದ ಒಳಾಂಗಣ ಆಟ ಆಡುತ್ತಿದ್ದರು. ಇವು ಎಳೆಯರ ಸಣ್ತೀ ಪೂರ್ಣ ಬೆಳವಣಿ ಗೆಗೆ ಸಹಕಾರಿಯಾಗಬಲ್ಲುವು. ತುಳುನಾಡಿ ನಲ್ಲಿ ಕಂಬಳ, ಕೆಸರುಗದ್ದೆ ಕ್ರೀಡೆ ಹೀಗೆ ಹತ್ತಾರು ಬಗೆಯ ಜಾನಪದೀಯ ಸ್ಪರ್ಧೆ ಗಳಿವೆ. ಎಲ್ಲ ಆಟಗಳು ನಿಯಮಗಳ ಚೌಕಟ್ಟಿನಲ್ಲಿ ಸಾಗುವ ಕಾರಣ ಜೀವನದಲ್ಲಿ ಒಂದು ಬಗೆಯ ಶಿಸ್ತು ಮೂಡಿಸಲು ಅನುಕೂಲಕರ ಎನ್ನಬಹುದು.

ಇತ್ತೀಚಿನ ಕೆಲವು ವರ್ಷಗಳಲ್ಲಿ ಗ್ರಾಮ್ಯದ ಆಟಗಳಿಗೆ ಯುವ ಸಮುದಾಯ ಕೂಡ ಹೆಚ್ಚು ಆಸ್ಥೆ ವಹಿಸುತ್ತಿದೆ. ಅಲ್ಲಲ್ಲಿ ಸ್ಪರ್ಧೆ ಆಯೋಜಿಸಿ ಊರ-ಪರವೂರಿನ ಜನರನ್ನು ಭಾಗವಹಿಸಲು ಪ್ರೇರೆಪಿಸುತ್ತದೆ.

ಸರಕಾರ ಯುವಜನ ಇಲಾಖೆ ಮೂಲಕ ವರ್ಷಂಪ್ರತಿ ಯುವಜನ ಮೇಳ ಹಮ್ಮಿಕೊಂಡು ಉತ್ತೇಜನ ನೀಡುತ್ತಿದೆ. ಜಿಲ್ಲಾ, ರಾಜ್ಯಮಟ್ಟದ ಸ್ಪರ್ಧೆ ಏರ್ಪಡಿಸಿ ರಾಜ್ಯದ ವಿವಿಧ ಭಾಗದ ಕಲಾ ಪ್ರಕಾರಗಳನ್ನು ಪ್ರದರ್ಶಿಸುವ ಅವಕಾಶ ನೀಡಲಾಗಿದೆ. ಇದು ಯುವ ಸಮು ದಾಯ ಪಾಲ್ಗೊಳ್ಳಲು ಇರುವ ವೇದಿಕೆ. ಹಾಗಾಗಿ ಇಲ್ಲಿ ಗ್ರಾಮೀಣ ಪ್ರದೇಶದ ಸಂಸ್ಕೃತಿಯನ್ನು ಪರಿಚಿಸುವ ಅವಕಾಶ ದೊರೆಯುತ್ತದೆ. ಇದರ ಜತೆಗೆ ಶಾಲಾ ಕಾಲೇಜುಗಳಲ್ಲಿ ವಿವಿಧ ಘಟಕಗಳ ಮೂಲಕ ಜಾನಪದ ಆಟೋಟ, ನೃತ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.

-  ಕಿರಣ್‌ ಕುಂಡಡ್ಕ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.