ಚುನಾವಣೆ ಗುಂಗಿನಲ್ಲಿ ತೆನೆಹೊತ್ತ ಮಹಿಳೆ


Team Udayavani, Sep 12, 2019, 3:08 AM IST

Devegowda

ಬೆಂಗಳೂರು: ಮುಂಬರುವ ಏಪ್ರಿಲ್‌ ಒಳಗೆ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಬಹುದೆಂಬ ಲೆಕ್ಕಾಚಾರದಲ್ಲಿರುವ ಜೆಡಿಎಸ್‌ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ತಳ ಮಟ್ಟದಿಂದ ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ಅಲ್ಲದೇ, ಜಿಲ್ಲಾ ಮಟ್ಟದಲ್ಲಿ ಸಮಾವೇಶಗಳನ್ನು ನಡೆಸಲು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಲಾಗಿದೆ.

ಪಾದಯಾತ್ರೆ: ಪ್ರಚಾರ ಸಮಿತಿ ಆಧ್ಯಕ್ಷ ವೈ.ಎಸ್‌. ವಿ.ದತ್ತಾ, ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಯುವ ಘಟಕದ ಅಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ ಈ ಮಾಸಾಂತ್ಯ ಅಥವಾ ಅಕ್ಟೋಬರ್‌ನಲ್ಲಿ ಪಾದಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರ 17 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೆ ಎಲ್ಲಾ ಕಡೆ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ಪಕ್ಷದ ಶಕ್ತಿ ಪ್ರದರ್ಶನಕ್ಕೂ ತೀರ್ಮಾನಿಸಲಾಗಿದೆ. ಈಗಾಗಲೇ ಪ್ರತಿ ಕ್ಷೇತ್ರಕ್ಕೆ ಮೂವರು ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ ಎಂದು ಹೇಳಲಾಗಿದೆ.

ನಿಷ್ಠಾವಂತರಿಗೆ ಸ್ಥಾನಮಾನ: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಇದ್ದಾಗ ಪಕ್ಷ ಸಂಘಟನೆಯತ್ತ ಗಮನಹರಿಸದಿರುವುದು ಹಾಗೂ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ನಿಗಮ-ಮಂಡಳಿ ಅಧ್ಯಕ್ಷಗಿರಿ ಸೇರಿ ಅಧಿಕಾರ ನೀಡದಿರುವುದರಿಂದ ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರಿದೆ. ಇದೀಗ ಆ ವ್ಯತ್ಯಾಸ ಸರಿಪಡಿಸಿ ಕಾರ್ಯಕರ್ತರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತ್ತೆ ಪಕ್ಷ ಸಂಘಟಿಸುವ ಸವಾಲು ಎದುರಾಗಿದೆ. ಹೀಗಾಗಿ, ಇನ್ನು ಮುಂದೆ ನಿಷ್ಠಾವಂತ ಕಾರ್ಯಕರ್ತರು, ಮುಖಂಡರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.

ರಾಜ್ಯ ಪ್ರವಾಸ ಹಾಗೂ ಜಿಲ್ಲಾ ಮಟ್ಟದ ಸಮಾವೇಶಗಳ ಜತೆ ಜತೆಯಲ್ಲೇ ಹಿಂದುಳಿದ, ಅಲ್ಪಸಂಖ್ಯಾತ, ದಲಿತ, ಮಹಿಳಾ, ರೈತ ಹಾಗೂ ಕಾರ್ಮಿಕರ ಸಮಾವೇಶಗಳನ್ನು ರಾಜ್ಯದ ಎಲ್ಲಾ ವಿಭಾಗಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಮಹಿಳಾ ಸಮಾವೇಶ, ಉತ್ತರ ಕರ್ನಾಟಕ ಭಾಗದಲ್ಲಿ ರೈತ ಸಮಾವೇಶ, ಚಿತ್ರದುರ್ಗ ಅಥವಾ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ, ಮಂಡ್ಯ ಅಥವಾ ಮೈಸೂರಿನಲ್ಲಿ ರೈತ ಸಮಾವೇಶ, ಕಲಬುರಗಿಯಲ್ಲಿ ಕಾರ್ಮಿಕ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ಸಂಘಟನೆಗೆ ಒತ್ತು: ನೂತನ ಸರ್ಕಾರದ ವಿರುದ್ಧ ಮೂರು ತಿಂಗಳ ಮಟ್ಟಿಗೆ ಯಾವುದೇ ರೀತಿಯ ವಿರೋಧ ಅಥವಾ ಹೋರಾಟಕ್ಕೆ ಮುಂದಾಗುವುದು ಬೇಡ. ಸರ್ಕಾರದ ವಿರುದ್ಧ ಮಾತನಾಡಿದರೆ ಒಂದು ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಅದರ ಬದಲು ಪಕ್ಷ ಸಂಘಟನೆಗೆ ಒತ್ತು ನೀಡೋಣ. 4 ತಿಂಗಳ ಬಳಿಕ, ಸರ್ಕಾರದ ಕಾರ್ಯವೈಖರಿ ನೋಡಿ ವಿಷಯಾಧಾರಿತವಾಗಿ ಹೋರಾಟ ರೂಪಿಸುವುದು ಸೂಕ್ತ ಎಂಬ ನಿಲುವಿಗೆ ಬರಲಾಗಿದೆ ಎಂದು ಹೇಳಲಾಗಿದೆ.

* ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.