ಶೌಚಾಲಯವೇ ಕಿಚನ್‌, ಬೆಡ್‌ ರೂಂ


Team Udayavani, Sep 12, 2019, 3:08 AM IST

showchlaya

ಬೆಂಗಳೂರು: “ಸಾರ್ವಜನಿಕರು ಹಣ ಪಾವತಿಸಿ ಉಪಯೋಗಿಸುವ ಶೌಚಾಲಯಗಳಲ್ಲಿ ಶುಚಿತ್ವದ ಕೊರತೆ ಹಾಗೂ ಅವ್ಯವಸ್ಥೆ. ಶೌಚಾಲಯದಲ್ಲೇ ಕಿಚನ್‌, ಬೆಡ್‌ ರೂಂ, ವಾಸ್ತವ್ಯ’. ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್‌ ಹಿರೇಮನಿ ಅವರು ಬುಧವಾರ ನಗರದ ಶೌಚಾಲಯಗಳ ತಪಾಸಣೆ ಸಂದರ್ಭದಲ್ಲಿ ಕಂಡು ಬಂದ ದೃಶ್ಯಗಳಿವು.

ಗಾಂಧಿನಗರ, ಮಲ್ಲೇಶ್ವರ ಹಾಗೂ ರಾಜಾಜಿನಗರ ಸೇರಿದಂತೆ ಆರು ಕಡೆ ಸಾರ್ವಜನಿಕರು ಹಣ ಪಾವತಿಸಿ ಉಪಯೋಗಿಸುವ ಶೌಚಾಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಲ್ಲಿನ ಅವ್ಯವಸ್ಥೆ ಕಂಡು ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸೂಕ್ತ ದಾಖಲೆ ಇಲ್ಲದ ಹಾಗೂ ಅವ್ಯವಸ್ಥೆಯಿಂದ ಕೂಡಿದ್ದ ಮಂತ್ರಿ ಮಾಲ್‌ ಸಮೀಪದ ಸಾರ್ವಜನಿಕ ಶೌಚಾಲಯ, ಮಲ್ಲೇಶ್ವರ ಮೈದಾನ ಹಾಗೂ ಪ್ರಕಾಶ ನಗರದ ಗಾಯಿತ್ರಿದೇವಿ ಉದ್ಯಾನವನದ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿಸಿದರು.

ಹಲವು ಶೌಚಾಲಯಗಳಲ್ಲಿ ಶುಚಿತ್ವ ಇಲ್ಲದಿರುವುದು ಹಾಗೂ ದರ ಪಟ್ಟಿಯನ್ನು ನಿಗದಿ ಮಾಡದೆ ಇರುವ ಬಗ್ಗೆ ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಕರ್ತವ್ಯ ಲೋಪದ ಆರೋಪದ ಮೇಲೆ ಈ ಭಾಗದ ಎಂಜಿನಿಯರ್‌ಗಳಿಗೆ ನೋಟಿಸ್‌ ನೀಡಲು ಸೂಚನೆ ನೀಡಿದರು.

ಕೊಳ್ಳೆ ಹೊಡೆಯಲು ಬಿಟ್ಟಿದ್ದಿರೇನ್ರಿ: ಹಲವು ಶೌಚಾಲಯಗಳನ್ನು ಉಪಗುತ್ತಿಗೆ ನೀಡಿರುವುದು ಹಾಗೂ ಟೆಂಡರ್‌ ಕರೆಯದೆ ನಿರ್ವಹಣೆ ಮಾಡಲು ಮುಂದುವರಿಸಿರುವುದನ್ನು ಗಮನಿಸಿದ ಅವರು, ಬಿಬಿಎಂಪಿ ಅಧಿಕಾರಿಗಳಿಗೆ ಛೀಮಾರಿ ಹಾಕಿದರು.

ಯಾವುದೇ ದಾಖಲೆ ಇಲ್ಲದವರಿಗೆ ಕೊಳ್ಳೆ ಹೊಡೆಯಲು ಬಿಟ್ಟಿದ್ದಿರಾ? ಎಂದು ಪ್ರಶ್ನಿಸಿದರು. ಸಾರ್ವಜನಿಕರಿಂದ ಹೆಚ್ಚು ಹಣ ಪಡೆಯುತ್ತಿದ್ದ ಗುತ್ತಿಗೆದಾರರನ್ನೂ ತರಾಟೆಗೆ ತೆಗೆದುಕೊಂಡ ಅವರು ನಿಮಗೆ ತೋಚಿದಷ್ಟು ಹಣ ಪಡೆಯಲು ಅನುಮತಿ ಕೊಟ್ಟವರ್ಯಾರು ಎಂದು ಗರಂ ಆದರು.

ಬಹುತೇಕ ಶೌಚಾಲಯಗಳ ನಿರ್ವಹಣೆಯನ್ನು ಉತ್ತರ ಭಾರತೀಯರಿಗೆ ನೀಡಿರುವುದನ್ನು ಇದೇ ಸಂದರ್ಭದಲ್ಲಿ ಗಮನಿಸಿದ ಜಗದೀಶ್‌ ಹಿರೇಮನಿ, ಶೌಚಾಲಯಗಳ ನಿರ್ವಹಣೆಯನ್ನು ಸಫಾಯಿ ಕರ್ಮಚಾರಿಗಳಿಗೆ ನೀಡಬೇಕು ಎಂಬ ನಿಯಮವಿದೆ. ಆದರೆ, ಈ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಮೇಯರ್‌ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

“ಬಿಬಿಎಂಪಿ ವ್ಯಾಪ್ತಿಯಲ್ಲಿ 530 ಪಾಲಿಕೆ ಹಾಗೂ 150 ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವ(ಪಿಪಿಪಿ) ಸೇರಿ ಒಟ್ಟು 680 ಸುಲಭ ಶೌಚಾಲಯಗಳಿವೆ’ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದರು. ತಪಾಸಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್‌ ಹಿರೇಮನಿ, ನಗರದಲ್ಲಿ ಬಿಬಿಎಂಪಿ ಮತ್ತು ಖಾಸಗಿ ಸಂಸ್ಥೆ ನಿರ್ವಹಣೆ ಮಾಡುವ ಎರಡು ರೀತಿಯ ಶೌಚಾಲಯಗಳಿವೆ.

ಹಲವು ಲೋಪಗಳಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಶೌಚಾಲಯ ನಿರ್ವಹಣೆ ಮಾಡುವವರು, ಬಿಬಿಎಂಪಿ ಆಯುಕ್ತರ ಜತೆ ಗುರುವಾರ ಸಭೆ ನಡೆಸಲಾಗುವುದು ಎಂದು ಹೇಳಿದರು. ಬಿಬಿಎಂಪಿಯ ಅಧಿಕಾರಿಗಳು ಹೇಳುವಂತೆ ಅಂದಾಜು 800 ಶೌಚಾಲಯಗಳಿವೆ. ಅದರ ಜತೆಗೆ ಅನಧಿಕೃತವಾಗಿ 700 ಶೌಚಾಲಯ ನಿರ್ಮಿಸಲಾಗಿದೆ.

ಯಾವುದೇ ಶೌಚಾಲಯಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತಿಲ್ಲ. ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದರ ಜತೆಗೆ ಪಾಲಿಕೆಯು ಸಹ ಪ್ರತಿ ಶೌಚಾಲಯದ ನಿರ್ವಹಣೆಗೆ ವಾರ್ಷಿಕ 50 ಸಾವಿರ ರೂ. ನೀಡುತ್ತಿದೆ. ಈ ಅವ್ಯವಸ್ಥೆಯನ್ನು ಕೂಡಲೇ ಸರಿ ಪಡಿಸಬೇಕಿದೆ ಎಂದು ತಿಳಿಸಿದರು.

ಟಾಯ್ಲೆಟ್ಟಲ್ಲೇ ಅಡುಗೆ, ವಾಸ್ತವ್ಯ: ಜಗದೀಶ್‌ ಹಿರೇಮನಿ ಅವರು ಬುಧವಾರ ನಗರದ ಶೌಚಾಲಯಗಳ ಸ್ವತ್ಛತೆ ಪರಿಶೀಲನೆ ನಡೆಸುವಾಗ ಶೌಚಾಲಯಗಳಲ್ಲಿನ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ. ಪ್ರಕಾಶನಗರದ ಗಾಯಿತ್ರಿ ಉದ್ಯಾನದ ಸಾರ್ವಜನಿಕ ಶೌಚಾಲಯದಲ್ಲೇ ಗ್ಯಾಸ್‌ ಸಿಲಿಂಡರ್‌ ತರಿಸಿಕೊಂಡು ಅಡುಗೆ ಮಾಡುವುದನ್ನು ಕಂಡ ಅವರು ಗರಂ ಆದರು. “ಇಲ್ಲಿ ಅಡುಗೆ ಮಾಡಲು ನಿಮಗೆ ಅವಕಾಶ ನೀಡಿದ್ದು ಯಾರು? ಯಾವ ಶೌಚಾಲಯದಲ್ಲೂ ಸುರಕ್ಷತಾ ಸಾಧನಗಳಿಲ್ಲ. ನಿಮ್ಮನ್ನು ಪ್ರಶ್ನೆ ಮಾಡುವವರೇ ಇಲ್ಲದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರು ಬುಧವಾರ ಸಾರ್ವಜನಿಕ ಶೌಚಾಲಯಗಳಿಗೆ ಭೇಟಿ ನೀಡಿದ್ದು, ಆಯೋಗ ನೀಡುವ ವರದಿಯನ್ನು ನೋಡಿಕೊಂಡು ಪ್ರತಿಕ್ರಿಯೆ ನೀಡುತ್ತೇನೆ.
ರಂದೀಪ್‌.ಡಿ, ವಿಶೇಷ ಆಯುಕ್ತ (ಘನತ್ಯಾಜ್ಯ)

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.