ದೆಹಲಿಯಲ್ಲಿ ಟ್ರಕ್ ಮಾಲಕನಿಗೆ ಬಿತ್ತು ಬರೋಬ್ಬರಿ ಎರಡು ಲಕ್ಷ ರೂಪಾಯಿ ದಂಡ!


Team Udayavani, Sep 12, 2019, 11:15 PM IST

Traffic-Fine-Delhi-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ದೇಶದಲ್ಲಿ ಪರಿಷ್ಕೃತ ಸಂಚಾರಿ ನಿಯಮ ಉಲ್ಲಂಘನೆ ದಂಡ ವ್ಯವಸ್ಥೆ ಜಾರಿಗೆ ಬಂದ ನಂತರ ಇನ್ನೊಂದು ದುಬಾರಿ ದಂಡ ಪ್ರಕರಣ ವರದಿಯಾಗಿದೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಾಗಿ ಟ್ರಕ್ ಮಾಲಕರೊಬ್ಬರಿಗೆ ದೆಹಲಿ ಪೊಲೀಸರು ಬರೋಬ್ಬರಿ ಎರಡು ಲಕ್ಷದ ಐದುನೂರು ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ.

ಈ ದಂಡವನ್ನು ಟ್ರಕ್ ಮಾಲಕ ನ್ಯಾಯಾಲಯದಲ್ಲಿ ಕಟ್ಟಬೇಕಾಗಿದೆ. ಆದರೆ ನ್ಯಾಯಾಲಯದಲ್ಲಿ ದಂಡ ಕಟ್ಟುವ ಸಂದರ್ಭದಲ್ಲಿ ಈ ಟ್ರಕ್ ಮಾಲಕ ಸೂಕ್ತ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದಲ್ಲಿ ಈ ದಂಡ ಮೊತ್ತದಲ್ಲಿ ಸ್ವಲ್ಪ ವಿನಾಯಿತಿ ಸಿಗಬಹುದು ಎಂದು ಹೇಳಲಾಗುತ್ತಿದೆ.

ಭಾರೀ ದಂಡಕ್ಕೆ ಕಾರಣನಾದ ಟ್ರಕ್ ಚಾಲಕನನ್ನು ರಾಮ್ ಕ್ರಿಷನ್ ಎಂದು ಗುರುತಿಸಲಾಗಿದೆ.

ರಾಷ್ಟ್ರ ರಾಜಧಾನಿಯ ರೋಹಿಣಿ ಬಳಿ ಇರುವ ಮುಬಾರಕ ಚೌಕದ ಬಳಿ ದೆಹಲಿ ಸಂಚಾರಿ ಪೊಲೀಸರು ಈ ಟ್ರಕ್ ಅನ್ನು ನಿಲ್ಲಿಸಿ ಚಾಲಕನ ಬಳಿ ಡ್ರೈವಿಂಗ್ ಲೈಸನ್ಸ್ ಮತ್ತು ಟ್ರಕ್ ಗೆ ಸಂಬಂಧಿಸಿದ ಸೂಕ್ತ ದಾಖಲೆಗಳು ಇಲ್ಲದೇ ಇದ್ದ ಕಾರಣಕ್ಕೆ ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ಲಕ್ಷ ದಂಡ ಹೇಗೆ ಗೊತ್ತಾ?

ಡ್ರೈವಿಂಗ್ ಲೈಸನ್ಸ್ ಇರಿಸಿಕೊಂಡಿರದೇ ಇದ್ದುದಕ್ಕೆ – 5000 ರೂಪಾಯಿಗಳು

ವಾಹನದ ನೋಂದಣಿ ದಾಖಲಾತಿ ಇಲ್ಲದೇ ಇದ್ದುದಕ್ಕೆ – 10,000 ರೂಪಾಯಿಗಳು

ಫಿಟ್ನೆಸ್ ಪ್ರಮಾಣಪತ್ರ ಇಲ್ಲದಿದ್ದುಕ್ಕೆ – 10,000 ರೂಪಾಯಿಗಳು

ಪರವಾನಿಗೆ ಪತ್ರ ಉಲ್ಲಂಘನೆಗೆ – 10,000 ರೂಪಾಯಿಗಳು

ವಿಮೆ ಇಲ್ಲದೇ ಇದ್ದುದಕ್ಕೆ – 4000 ರೂಪಾಯಿಗಳು

ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದನ್ವಯ ಮಾಲಿನ್ಯಕ್ಕಾಗಿ – 10,000 ರೂಪಾಯಿಗಳು

ಟ್ರಕ್ ನಲ್ಲಿ ನಿರ್ಮಾಣ ಸಾಮಾಗ್ರಿಗಳನ್ನು ಮುಚ್ಚದೇ ಇದ್ದುದಕ್ಕೆ – 20,000 ರೂಪಾಯಿಗಳು

ಸೀಟ್ ಬೆಲ್ಟ್ ಧರಿಸದೇ ಇದ್ದುದಕ್ಕೆ – 1000 ರೂಪಾಯಿಗಳು

ಓವರ್ ಲೋಡಿಂಗ್ ಕಾರಣಕ್ಕೆ – 20,000 + 36,000 (ಪ್ರತೀ ಹೆಚ್ಚುವರಿ ಓವರ್ ಲೋಡ್ ಟನ್ ಗೆ 2000 ದಂತೆ) ಈ ಟ್ರಕ್ ನಲ್ಲಿ 18 ಟನ್ ಹೊರೆ ಹೆಚ್ಚುವರಿಯಾಗಿತ್ತು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.