3 ದಶಕಗಳ ನಂತರ ಬಂದ ನಟರಾಜ

37 ವರ್ಷಗಳ ನಂತರ ಆಸ್ಟ್ರೇಲಿಯಾದಲ್ಲಿ ಪತ್ತೆ; 1982ರಲ್ಲಿ ಕಳವಾಗಿದ್ದ ಪೂಜಾ ಮೂರ್ತಿ

Team Udayavani, Sep 13, 2019, 6:00 AM IST

q-48

ನವದೆಹಲಿ: 37 ವರ್ಷಗಳ ಹಿಂದೆ, ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಕಲ್ಲಿದೈಕುರುಚಿ ಎಂಬ ಹಳ್ಳಿಯ ‘ಕುಲಸೇಕರ ಮುದಯಾರ್‌ ಅರಾಮ್‌ವಲಾತ ನಾಯಕಿ ಅಮ್ಮನ್‌’ ಎಂಬ ದೇವಸ್ಥಾನದಿಂದ ಕಳವಾಗಿದ್ದ ನಟರಾಜ ದೇವರ ಪುರಾತನ ಕಂಚಿನ ವಿಗ್ರಹವನ್ನು ಪತ್ತೆ ಹಚ್ಚಿ ಪುನಃ ಭಾರತಕ್ಕೆ ತರಲಾಗಿದೆ.

ಸುಮಾರು 600 ವರ್ಷಗಳಷ್ಟು ಹಳೆಯದಾದ, 100 ಕೆಜಿ ತೂಕವಿರುವ ವಿಗ್ರಹವನ್ನು 1982ರ ಜು. 5ರಂದು ಡಕಾಯಿತರು ದೇಗುಲದ ಬಾಗಿಲು ಒಡೆದು ಗರ್ಭಗುಡಿಯ ಒಳಬಂದು ಅಪಹರಿಸಿದ್ದರು. ಅದರ ಜತೆಗೆ, ಪಂಚಲೋಹದ ಶಿವಕಾಮಿ, ಮಣಿಕವಾಸಾಗರ್‌ ಹಾಗೂ ಶ್ರೀಬಲಿ ನಾಯಗರ್‌ ದೇವರುಗಳ ವಿಗ್ರಹಗಳೂ ಕಳುವಾಗಿದ್ದವು.

ಮರೆಯಾದ ದಾರಿ ಮತ್ತೆ ಗೋಚರ: ದೇವಸ್ಥಾನದ ಟ್ರಸ್ಟಿಯವರ ದೂರಿನ ಮೇರೆಗೆ, ಕಳ್ಳಿದೈಕುರಿಚಿ ಪೊಲೀಸ್‌ ಠಾಣೆಯಲ್ಲಿ 1982ರ ಜು. 6ರಂದು ಎಫ್ಐಆರ್‌ ದಾಖಲಾಗಿತ್ತು. ಅದಾಗಿ, ಎರಡು ವರ್ಷಗಳಾದರೂ ಕಾಣೆಯಾದ ವಿಗ್ರಹದ ಬಗ್ಗೆ ಕಿಂಚಿತ್ತೂ ಮಾಹಿತಿಗಳು ಲಭ್ಯವಾಗದ ಕಾರಣ, ಪೊಲೀಸರು ಪ್ರಕರಣವನ್ನು ಅಂತ್ಯಗೊಳಿಸಿದ್ದರು. ಆದರೆ, ಕೆಲವು ವರ್ಷಗಳ ಹಿಂದೆ, ಸ್ಥಳೀಯ ನ್ಯಾಯಾಲಯವು ವಿಗ್ರಹದ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿತು. ಅದಕ್ಕೆ ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಮಣಿಕವೇಲು ಅವರನ್ನು ಮುಖ್ಯಸ್ಥರನ್ನಾಗಿಸಿತು. ತಿರುನೆಲ್ವೇಲಿ ಜಿಲ್ಲೆಯ ಹೆಚ್ಚುವರಿ ಎಸ್‌ಪಿ ರಾಜಾರಾಂ ಅವರೂ ತಂಡದಲ್ಲಿದ್ದರು. ಆಗ, ಮತ್ತೆ ಆರಂಭವಾದ ತನಿಖೆಯಲ್ಲಿ ಕಳುವಾದ ವಿಗ್ರಹ ದಕ್ಷಿಣ ಆಸ್ಟ್ರೇಲಿಯಾದ ‘ಆರ್ಟ್‌ ಗ್ಯಾಲರಿ ಆಫ್ ಸೌತ್‌ ಆಸ್ಟ್ರೇಲಿಯಾ’ (ಎಜಿಎಸ್‌ಎ) ಎಂಬ ವಸ್ತು ಸಂಗ್ರಹಾಲಯವೊಂದರಲ್ಲಿ ಇರುವುದು ಪತ್ತೆಯಾಗಿತ್ತು.

ಭಾರತಕ್ಕೆ ಬಂದ ನಟರಾಜ: ವಿಗ್ರಹ ಹಸ್ತಾಂತರಕ್ಕೆ ಸಂಬಂಧಿಸಿದಂತೆ, ಭಾರತ ಮತ್ತು ಆಸ್ಟ್ರೇಲಿಯಾ ಸರ್ಕಾರಗಳ ನಡುವೆ ಸಾಕಷ್ಟು ಪತ್ರ ವ್ಯವಹಾರಗಳು ನಡೆದ ನಂತರ, ಇತ್ತೀಚೆಗೆ, ಎಜಿಎಸ್‌ಎ ರಿಜಿಸ್ಟ್ರಾರ್‌ ಜೇನ್‌ ರಾಬಿನ್ಸನ್‌ ಅವರು, ತನಿಖಾ ತಂಡಕ್ಕೆ ವಿಗ್ರಹವನ್ನು ಹಸ್ತಾಂತರಿಸಿದ್ದಾರೆ. ಕಾನೂನು ಕ್ರಮ ನಂತರ ದೇಗುಲಕ್ಕೆ ನಟರಾಜನನ್ನು ಮರಳಿಸಲಾಗುತ್ತದೆ.

ವಿಗ್ರಹ ವಿಶೇಷ
•16ನೇ ಶತಮಾನದಲ್ಲಿ ತಯಾರು
•600 ವರ್ಷಗಳಷ್ಟು ಹಿಂದಿನದ್ದು
•ಬಳಕೆಯಾದ ಪ್ರಧಾನ ಲೋಹ ಕಂಚು
•ವಿಗ್ರಹದ ತೂಕ ಸುಮಾರು 100 ಕೆಜಿ
•ವಿಗ್ರಹದ ಎತ್ತರ ಎರಡೂವರೆ ಅಡಿ

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.