ಅನಧಿಕೃತ ಬಿಪಿಎಲ್ ಕಾರ್ಡ್‌ ರದ್ದು


Team Udayavani, Sep 13, 2019, 11:48 AM IST

br-tdy-1

ದೇವನಹಳ್ಳಿ ತಾಲೂಕಿನ ಚಪ್ಪರದ ಕಲ್ಲು ಸಮೀಪ ವಿರುವ ಜಿಲ್ಲಾಡಳಿತ ಭವನ.

ದೇವನಹಳ್ಳಿ: ತಪ್ಪು ಮಾಹಿತಿ ನೀಡಿ ಅನಧಿಕೃತ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವುದು ಶಿಕ್ಷಾರ್ಹವಾಗಿದ್ದು, ಫ‌ಲಾನುಭವಿಗಳಲ್ಲದವರು ಸ್ವಯಂ ಪ್ರೇರಿತರಾಗಿ ಸರ್ಕಾರಕ್ಕೆ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಬೇಕೆಂದು ಜಿಲ್ಲಾ ಉಪನಿರ್ದೇಶಕ‌ ಆರ್‌.ಡಿ.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ದುರ್ಬಲವಾಗಿ ಹಿಂದೂಳಿದ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಸಲು ಸರ್ಕಾರದಿಂದ ಬಿಪಿಎಲ್ ಪಡಿತರ ಚೀಟಿ ವಿತರಿಸಿಲಾಗಿದ್ದು, ಆದರೆ ಅನೇಕ ಸ್ಥಿತಿವಂತ ಕುಟುಂಬದವರೂ ಸಹ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿದ್ದಾರೆ. ಅಂತವರು ಸೆ.30 ಒಳಗಾಗಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಿದರೆ, ಪಡಿತರ ಚೀಟಿ ರದ್ದುಪಡಿಸಿ ಯಾವುದೇ ಕ್ರಮ ಜರುಗಿಸದೆ, ಎಪಿಎಲ್ ಪಡಿತರ ಚೀಟಿಯನ್ನು ನೀಡಲಾಗುವುದು ಎಂದು ಎಚ್ಚರಿಸಿದರು.

ಆದಾಯ ತೆರಿಗೆ ಪಾವತಿಸುತ್ತಿರುವ ಕುಟುಂಬದವರು, 10 ಚದರ ಅಡಿ ಅಥವಾ ಅದಕ್ಕಿಂತಲೂ ದೊಡ್ಡ ಮನೆ ಹೊಂದಿರುವವರು, ಸರ್ಕಾರಿ ನೌಕರರು ಸ್ವಾಯುತ್ತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು, ಉದ್ಯಮಿಗಳು, ಸ್ವಂತ ವಾಹನ ದೊಂದಿರುವವರು, ಮನೆ-ಮಳಿಗೆ ಕಟ್ಟಡ ಕಟ್ಟಿ ಬಾಡಿಗೆ ವರಮಾನ ಪಡೆಯುತ್ತಿರುವವರು, ಬಹುರಾಷ್ಟ್ರೀಯ ಕಂಪನಿಯ ನೌಕರರು, ಉದ್ದಿಮೆದಾರರು, ನಿವೃತ್ತಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರು ಇನ್ನಿತರೆ ಆರ್ಥಿಕವಾಗಿ ಸಬಲವಾಗಿರುವ ಕುಟುಂಬಗಳು ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಪಡೆದು ಸರ್ಕಾರಕ್ಕೆ ವಂಚನೆ ಮಾಡಿರುವುದು ಕಂಡುಬಂದಿದೆ. ಸರ್ಕಾರದ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ 1977 ರ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಿಗದಿತ ಅವಧಿ ಮೀರಿದ ನಂತರ ಸರ್ಕಾರವೇ ಮನೆ-ಮನೆ ಸಮೀಕ್ಷೆ ಕೈಗೊಳ್ಳಲಿದ್ದು, ಈ ವೇಳೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಕಂಡುಬಂದಲ್ಲಿ ಅವರು ಪಡೆದ ದಿನಾಂಕದಿಂದ ಈ ತಿಂಗಳವರೆಗೆ ಪಡೆದಿರುವ ಅಕ್ಕಿ ಹಾಗೂ ಇತರೆ ಅಗತ್ಯ ವಸ್ತುಗಳ ಪ್ರಮಾಣವನ್ನು ಲೆಕ್ಕಾಚಾರ ಮಾಡಿ 1 ಕೆ,ಜಿ ಅಕ್ಕಿಗೆ 35/- ರೂ ನಂತೆ ಹಾಗೂ 1.ಕೆ.ಜಿ ತೊಗರಿ ಬೇಳೆಗೆ 100/- ರೂ ಅಂತೆ ಲೆಕ್ಕಾಚಾರ ಮಾಡಿ ಪೂರ್ಣ ಮೊತ್ತವನ್ನು ಸರ್ಕಾರಕ್ಕೆ ಸಂದಾಯ ಮಾಡಲು ಸೂಚಿಸಲಾಗುವದು ಎಂದರು.

ಸಾರ್ವಜನಿಕರು ಇದನ್ನು ಪಾಲಿಸದಿದ್ದಲ್ಲಿ 1977 ರ ಕಾಯ್ದೆಯಡಿ ಮೊಕದ್ದಮೆ ಹೂಡಲಾಗುವುದು. ಆದ್ದರಿಂದ ದಂಡನೆ ಹಾಗೂ ಶಿಕ್ಷೆ ತಪ್ಪಿಸಿಕೊಳ್ಳಲು ಸ್ವಯಂ ಪ್ರೇರಿತವಾಗಿ ನಿಗದಿತ ಅವಧಿಯೊಳಗೆ ಅನರ್ಹ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.