ಸ್ವಚ್ಛ ಮೇವ ಜಯತೆ: ಹಣ ಬಳಕೆಯಲ್ಲಿ ಲೋಪ


Team Udayavani, Sep 13, 2019, 1:06 PM IST

rn-tdy-1

ರಾಮನಗರ: ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿಯಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನದ ನಿಮಿತ್ತ ವರ್ಣ ಸಹಿತ ಗೋಡೆ ಬರಹಕ್ಕಾಗಿ ವೆಚ್ಚ ಮಾಡಿರುವ ಅನುದಾನದಲ್ಲಿ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ, ಜಿಲ್ಲಾ ಪಂಚಾಯತ್‌ ಸಿಇಒ ಅವರಿಗೆ ಪತ್ರ ರವಾನೆಯಾಗಿದೆ.

ಗೋಡೆ ಬರಹ ಅನುದಾನದಲ್ಲಿ 95 ಲಕ್ಷ ರೂ. ಅಕ್ರಮವಾಗಿರುವ ಆರೋಪವಿದ್ದು, ನಾಗರಿಕ ವಲಯದಲ್ಲಿ ಈಗಾಗಲೇ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಅವ್ಯವಹಾರದ ಹಿಂದೆ ಕೆಲವು ರಾಜಕೀಯ ಧುರೀಣರ ಪ್ರಭಾವ ಇರುವುದಾಗಿ ಅನುಮಾನಗಳು ಮೂಡಿವೆ. ವರ್ಣಸಹಿತ ಗೋಡೆ ಚಿತ್ರಗಳನ್ನು ಬರೆಯುವ ವಿಚಾರದಲ್ಲಿ ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.

ಏನಿದು ವಿವಾದ?: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಸ್ವಚ್ಛ ಭಾರತ್‌ ಮಿಷನ್‌ ಅಡಿ ಹಲವಾರು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಈ ಪೈಕಿ ಸ್ವಚ್ಛ ಮೇವ ಜಯತೆ ಆಂದೋಲನವೂ ಒಂದು ಭಾಗವಾಗಿದ್ದು, ಗೋಡೆಗಳ ಮೇಲೆ ವರ್ಣಸಹಿತ ಚಿತ್ರಗಳನ್ನು ಬರೆದು ಆಮೂಲಕ ಗ್ರಾಮೀಣರಲ್ಲಿ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವುದು ಸರ್ಕಾರದ ಉದ್ದೇಶವಾಗಿದೆ.

2019ರ ಜುಲೈನಲ್ಲಿ ಜಿಲ್ಲೆಯ 127 ಗ್ರಾಪಂಗಳಿಗೆ ಒಟ್ಟು 95. 17ಲಕ್ಷ ರೂ. ಬಿಡುಗಡೆ ಮಾಡಲಾಗಿತ್ತು. ಈ ಸಂಬಂಧ ಜಿಪಂನಿಂದ ಗ್ರಾಪಂಗಳಿಗೆ ಜಿಪಂ ಸಿಇಒ ಅವರಿಂದ ಬಿಡುಗಡೆಯಾಗಿರುವ ಅಧಿಕೃತ ಜ್ಞಾಪನ (ಡಿಆರ್‌ಡಿಎ/ಎಸ್‌ಬಿಎಂ/ಎಸ್‌ಎಂಜೆ/ಸಿಆರ್‌-01/2019-20)ರಲ್ಲಿ ವರ್ಗ 1ರ ಲೆಕ್ಕಖಾತೆಗೆ ಆರ್‌ಟಿಜಿಎಸ್‌ ಮೂಲಕ ನಿಯಮಾನುಸಾರ ಬಿಡುಗಡೆಗೊಳಿಸಲು ಮುಖ್ಯ ಲೆಕ್ಕಾಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ತಿಳಿಸಲಾಗಿದೆ. 127 ಗ್ರಾಪಂಗಳ ಪೈಕಿ 28 ಗ್ರಾಪಂಗಳಿಗೆ ಒಂದು ಲಕ್ಷಕ್ಕಿಂತ ಅಧಿಕ ಮೊತ್ತದ ಅನುದಾನ ಜಮೆ ಆಗಿದೆ. ಉದಾಹರಣೆಗೆ ಬಾಚೇನಹಟ್ಟಿ ಗ್ರಾಪಂಗೆ 1.87 ಲಕ್ಷ ರೂ. ಬಾಣವಾಡಿ ಗ್ರಾಪಂಗೆ 1.51 ಲಕ್ಷ ರೂ., ಬೆಳಗುಂಬ ಗ್ರಾಪಂಗೆ 1.63 ಲಕ್ಷ ರೂ., ಬಿಟ್ಟಸಂದ್ರ ಗ್ರಾಪಂಗೆ 1.30 ಲಕ್ಷ, ಚಿಕ್ಕಮುದುಗೆರೆ ಗ್ರಾಮಪಂಚಯ್ತಿ 1.51 ಲಕ್ಷ, ಹಂಚೀಕುಪ್ಪೆ ಗ್ರಾಪಂಗೆ 1.27 ಲಕ್ಷ ರೂ., ಲಕ್ಕೇನಹಳ್ಳಿ ಗ್ರಾಪಂಗೆ 1.39 ಲಕ್ಷ ರೂ., ಮಾಡಬಾಳ್‌ ಗ್ರಾಪಂಗೆ 1.51 ಲಕ್ಷ ರೂ. ಹೀಗೆ 28 ಗ್ರಾಪಂಗಳಿಗೆ 1 ಲಕ್ಷಕ್ಕಿಂತ ಅಧಿಕ ಮೊತ್ತದ ಅನುದಾನ ಬಿಡುಗಡೆಯಾಗಿದೆ.

ಬಿಡುಗಡೆಯಾಗಿರುವ ಅಧಿಕೃತ ಜ್ಞಾಪನದಲ್ಲಿ ಸಿಇಒ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದಡಿ (ಕೆಟಿಪಿಪಿ) ಹಣ ಬಳಕೆ ಮಾಡಬೇಕು ಮತ್ತು ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹ ಮಾಡಿಟ್ಟುಕೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಅನುಮಾನಗಳಿಗೆ ಕಾರಣ: ಸ್ವಚ್ಛ ಭಾರತ ಮಿಷನ್‌ ಅಡಿಯಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನವನ್ನು ಜಿಲ್ಲಾ ಪಂಚಾಯ್ತಿಗಳು ಕೈಗೆತ್ತಿಕೊಳ್ಳಬೇಕು. ಗ್ರಾಪಂಗಳಲ್ಲಿರುವ ಸ್ವಚ್ಛ ಭಾರತ ಮಿಷನ್‌ ಯೋಜನೆಯ ಲೆಕ್ಕ ಖಾತೆಗೆ ಹಣ ವರ್ಗಾವಣೆ ಆಗಬೇಕಿತ್ತು ಎಂಬುದು ಸಾರ್ವಜನಿಕರ ವಾದ. ಆದರೆ ಸಿಇಒ ಅವರು ವರ್ಗ 1ರ ಲೆಕ್ಕ ಖಾತೆಗೆ ಜಮೆ ಮಾಡಿದ್ದು ಏಕೆ ಎಂದು ಪ್ರಶ್ನಿಸಲಾಗಿದ್ದು, ಇದು ಅನುಮಾನಗಳಿಗೆ ಕಾರಣ ಎನ್ನಲಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.