ರಾಜ್ಯದಲ್ಲಿ 10ಸಾವಿರ ಡೆಂಗ್ಯೂ ಪ್ರಕರಣ ಪತ್ತೆ; ಬೆಂಗಳೂರು ನಂ. ವನ್


Team Udayavani, Sep 13, 2019, 5:00 PM IST

Dengue-Feaver

ಮಣಿಪಾಲ : ಮಳೆಗಾಲ ಬಂತೆಂದೆರೆ ಕಾಯಿಲೆಗಳ ಮಹಾಪರ್ವ ಆರಂಭವಾಗುತ್ತದೆ. ವಾತಾವರಣದಲ್ಲಿ  ಏರುಪೇರಿನ ಲಕ್ಷಣಗಳು ಸಾಮಾನ್ಯವಾದರೂ ಅದರ ಪ್ರಭಾವ ಮನುಷ್ಯನ ಆರೋಗ್ಯ ಮೇಲೆ ಭೀಕರವಾದದ್ದು. ಕೆಮ್ಮು- ನೆಗಡಿ, ಶೀತ ದಂತಹ ಸಣ್ಣ ಪುಟ್ಟ ಕಾಯಿಲೆಗಳು ರೋಗಿಗಳನ್ನು ಹೈರಾಣ ಮಾಡಿದ್ದರೆ, ಡೆಂಗ್ಯೂನಂತಹ ಮಹಾಮಾರಿ ಪ್ರಾಣಕ್ಕೆ ಕುತ್ತು ತರುತ್ತದೆ. ಈ ವರ್ಷ ಡೆಂಗ್ಯೂಗೆ ತುತ್ತಾದವರ ಸಂಖ್ಯೆ ಅಧಿಕವಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ.

ಈ ನಿಟ್ಟಿನಲ್ಲಿ ಕರ್ನಾಟದಲ್ಲಿ  ಎಷ್ಟು  ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ? ಯಾವ ಜಿಲ್ಲೆಯಲ್ಲಿ  ಹೆಚ್ಚಿದೆ? ಹರಡುವಿಕೆಗೆ ಕಾರಣಗಳೇನು ? ಈ ಎಲ್ಲಾ  ಅಂಕಿ-ಅಂಶಗಳು ಇಲ್ಲಿವೆ…

ಹತ್ತು ಸಾವಿರ ಪ್ರಕರಣಗಳು ಪತ್ತೆ:

ಹೌದು ಕಳೆದ ಬಾರಿಗೆ ಹೋಲಿಸಿದರೆ ಡೆಂಗ್ಯೂ ರೋಗ ಕಾಣಿಸಿಕೊಂಡವರ ಸಂಖ್ಯೆಯಲ್ಲಿ  ಶೇ. 138 ರಷ್ಟು  ಏರಿಕೆಯಾಗಿದ್ದು, ಎಂಟು ತಿಂಗಳಲ್ಲಿ  ಕರ್ನಾಟಕದೆಲ್ಲೆಡೆ ಸುಮಾರು  10.5 ಸಾವಿರ ಮಂದಿ ಡೆಂಗ್ಯೂ ಜ್ವರದಿಂದ ಬಳಲಿದ್ದಾರೆ.

ಶೇ. 61 ರಷ್ಟು ಏರಿಕೆ:

ರಾಜಧಾನಿ ಬೆಂಗಳೂರಿನಲ್ಲಿ  ಡೆಂಗ್ಯೂ ಜ್ವರಕ್ಕೆ ತುತ್ತಾದವರ ಸಂಖ್ಯೆ ಹೆಚ್ಚಿದ್ದು. ಕಳೆದ ಬಾರಿಗಿಂತ ಶೇ. 61 ರಷ್ಟು  ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಂಕಿ—ಅಂಶ ವಿವರಿಸಿದೆ.

6,515 ಪ್ರಕರಣಗಳು:

ಕೇವಲ ಬೆಂಗಳೂರು ನಗರದಲ್ಲಿಯೇ ಸುಮಾರು 6,515ರಷ್ಟು  ಜನರು ಈ ಮಹಾಮಾರಿ ಕಾಯಿಲೆಗೆ ತುತ್ತಾಗಿದ್ದಾರೆ.

ಸೆಪ್ಟೆಂಬರ್‌ 9ರವರೆಗೆ ಬೆಂಗಳೂರಿನಲ್ಲಿ  ಡೆಂಗ್ಯೂ ಜ್ವರಕ್ಕೆ ಬಲಿಯಾದವರ ಸಂಖ್ಯೆ ಆರು ಮಂದಿ .

2018 ನೇ ಸಾಲಿನಲ್ಲಿ  ಒಟ್ಟು  ರಾಜಧಾನಿಯಲ್ಲಿ 4(4.4) ಸಾವಿರ ಪ್ರಕರಣಗಳು ದಾಖಲಾಗಿದ್ದವು.

ದಕ್ಷಿಣ ಕರ್ನಾಟಕದಲ್ಲಿ  ಎಷ್ಟು ?

ಬೆಂಗಳೂರಿನ ನಂತರ ಹೆಚ್ಚು  ಪ್ರಕರಣಗಳು ಪತ್ತೆಯಾಗಿರುವುದು  ಕರಾವಳಿಯಲ್ಲಿ, ಈವರೆಗೆ 948 ಪ್ರಕರಣಗಳು ದಾಖಲಾಗಿದೆ.

ಹರಡುವ ರೀತಿ ಹೇಗೆ ?

ಸೊಳ್ಳೆಯಿಂದ ಈ ಕಾಯಿಲೆ ಹರಡುತ್ತಿದ್ದು, ಸೋಂಕಿನ ರೂಪ ಪಡೆದುಕೊಳ್ಳುತ್ತದೆ. ಸೊಳ್ಳೆ ಕಚ್ಚಿದ 5-7 ದಿವಸಗಳ ನಂತರ ಈ ರೋಗದ ಪ್ರಾಥಮಿಕ ಲಕ್ಷಣಗಳು ಕಂಡುಬರುತ್ತದೆ.

ತಡೆಗಟ್ಟುವಿಕೆ ಕ್ರಮಗಳು

ಮನೆಯೊಳಗೆ ಅಥವಾ ಮೇಲ್ಛಾವಣಿಯ ನೀರಿನ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರನ್ನು ಖಾಲಿ ಮಾಡಿ ಪುನಃ ಭರ್ತಿ ಮಾಡಿ ಭದ್ರವಾದ ಮುಚ್ಚಳಿಕೆಯಿಂದ ಮುಚ್ಚಬೇಕು. ಮನೆಯ ಒಳಗೆ ಹಾಗೂ ಹೊರಗೆ ಯಾವುದೇ ಕಾರಣಕ್ಕೂ ನೀರು ನಿಲ್ಲದಂತೆ ಎಚ್ಚರವಹಿಸುವುದು. ಒಡೆದ ಬಾಟಲಿ, ಟಿನ್‌, ಟಯರು ಇತ್ಯಾದಿಗಳಲ್ಲಿ ನೀರು ಸಂಗ್ರಹ ವಾಗದಂತೆ ನೋಡಿಕೊಳ್ಳಬೇಕು. ವಾತಾವರಣ ಸ್ವಚ್ಛವಾಗಿರಬೇಕು ಆಗ ಇಂತಹ ಸಾಂಕ್ರಾಮಿಕ ರೋಗವನ್ನು  ತಡೆಗಟ್ಟಬಹುದು.

ಹೆಚ್ಚು ಪ್ರಕರಣ ದಾಖಲಾದ ರಾಜ್ಯಗಳು

ಕರ್ನಾಟಕ

ತಮಿಳು ನಾಡು

ತೆಲಂಗಾಣ

ಕೇರಳ

ಟಾಪ್ ನ್ಯೂಸ್

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

air india

Air India; ಕೊನೆಗೂ ಸಿಬಂದಿಗೆ ವೇತನ ಹೆಚ್ಚಳ; ಪೈಲಟ್‌ಗಳಿಗೆ ಕಾರ್ಯಕ್ಷಮತೆಯ ಗುರಿ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Sonia gandhi

Delhi; ಪ್ರಜಾಪ್ರಭುತ್ವ,ಸಂವಿಧಾನ ಉಳಿಸಲು ಇದು ಬಹಳ ಮುಖ್ಯ ಚುನಾವಣೆ:ಸೋನಿಯಾ

heavy rain in Dharwad

Dharwad ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ: ಮನೆಗಳಿಗೆ ನುಗ್ಗಿದ ನೀರು

akhilesh

Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

SIT: ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ 2ನೇ ಬಾರಿ ನೋಟಿಸ್‌

SIT: ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ 2ನೇ ಬಾರಿ ನೋಟಿಸ್‌

1-asasa

Bengaluru ನಗರದ ರಸ್ತೆಗಳಲ್ಲಿ 5500 ಗುಂಡಿಗಳು!: ಕೂಡಲೇ ಮುಚ್ಚುವಂತೆ ಆದೇಶ

ಜೋಶಿ

Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

rape

Court; ನಿರಂತರ ರೇಪ್ ಮಾಡಿ ಮಲ ಮಗಳನ್ನು ಗರ್ಭಿಣಿಯಾಗಿಸಿದವನಿಗೆ ಜೀವಾವಧಿ ಶಿಕ್ಷೆ

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

air india

Air India; ಕೊನೆಗೂ ಸಿಬಂದಿಗೆ ವೇತನ ಹೆಚ್ಚಳ; ಪೈಲಟ್‌ಗಳಿಗೆ ಕಾರ್ಯಕ್ಷಮತೆಯ ಗುರಿ

Shimoga: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು

Shimoga: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.