ಭಿನ್ನಾಭಿಪ್ರಾಯ ಬಗೆಹರಿಸದಿದ್ರೆ ಜೆಡಿಎಸ್ಗೆ ಭವಿಷ್ಯ ಇಲ್ಲ
Team Udayavani, Sep 14, 2019, 3:05 AM IST
ಧಾರವಾಡ: ವರಿಷ್ಠರು ಕುಳಿತು ಪಕ್ಷದಲ್ಲಿನ ಭಿನ್ನಾಭಿಪ್ರಾಯ ಬಗೆಹರಿಸದಿದ್ದರೆ ಜೆಡಿಎಸ್ಗೆ ಭವಿಷ್ಯವೇ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಶಮನಗೊಳಿಸಲು ವರಿಷ್ಠರು ಚಿತ್ತಹರಿಸ ಬೇಕು. ಸಮ್ಮಿಶ್ರ ಸರ್ಕಾರವಿದ್ದಾಗ ಪಕ್ಷದವರಿಗೆ ಆದ್ಯತೆ ನೀಡಿಲ್ಲ ಎಂಬ ನೋವು ಇತ್ತು. ಆಗಿನ ಅತೃಪ್ತಿ ಈಗ ಸ್ಫೋಟಗೊಂಡಿದೆ. ಸದ್ಯ ಜಿ.ಟಿ. ದೇವೇಗೌಡರ ಹೇಳಿಕೆ ಗಳನ್ನು ಗಮನಿಸಿದರೆ ಅವರು ಪಕ್ಷದಲ್ಲಿ ಉಳಿಯುತ್ತಾರೆ ಎಂಬ ವಿಶ್ವಾಸವಿಲ್ಲ ಎಂದರು.
ಸರ್ಕಾರ ಇದ್ದಾಗ ನಮ್ಮನ್ನೆಲ್ಲ ಸರಿಯಾಗಿ ನೋಡಿಲ್ಲ ಎಂದು ಅನೇಕ ಜನ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನಗೂ ಸಾಕಷ್ಟು ನೋವಾಗಿದೆ. ಆದರೆ ನಾನು ಪಕ್ಷದ ಶಿಸ್ತು ಅಳವಡಿಸಿಕೊಂಡಿ ರುವ ಕಾರಣ ಎಲ್ಲೂ ಹೇಳಿಕೊಂಡಿಲ್ಲ. ಜಿ.ಟಿ.ಡಿ. ಎಲ್ಲಿಗೆ ಹೋಗುತ್ತಾರೆ ಎಂಬುದು ಗೊತ್ತಿಲ್ಲ. ಆದರೆ ಅವರು ಪಕ್ಷದಲ್ಲಂತೂ ಇರುವುದಿಲ್ಲ. ಅವರಿಗೆ ಮೊದಲಿನಿಂದಲೂ ಅಸಮಾಧಾನವಿತ್ತು. ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಅವರು ಹೇಳಿದ್ದು ನನಗೂ ಸರಿ ಅನಿಸಿತ್ತು. ಅಸಮಾಧಾನಿತರ ಜೊತೆ ಪಕ್ಷದ ವರಿಷ್ಠರು ಮಾತನಾಡುವುದು ಅವರ ಧರ್ಮ. ಹೀಗಾಗಿ ಜಿಟಿಡಿ ಅವರೊಂದಿಗೂ ಮಾತನಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ