ಇಂದಿನಿಂದ ದಕ್ಷಿಣ ಕನ್ನಡದಲ್ಲಿ ದಸರಾ ಕ್ರೀಡಾಕೂಟ

ಖಾಲಿ ಹುದ್ದೆಗಳ ಇಲಾಖೆಯಿಂದ ಆಯೋಜನೆ!

Team Udayavani, Sep 14, 2019, 5:35 AM IST

es-41

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ಕ್ರೀಡಾಕೂಟ ಸೆ.14ರಿಂದ ಆರಂಭವಾಗುತ್ತಿದೆ. ಆದರೆ ಕೂಟ ಆಯೋಜಿಸುವ ಯುವ ಸಬಲೀಕರಣ-ಕ್ರೀಡಾ ಇಲಾಖೆಯ ಜಿಲ್ಲಾ ವಿಭಾಗದಲ್ಲಿ ಉಪನಿರ್ದೇಶಕರದ್ದೂ ಸೇರಿಸಿ ಹುದ್ದೆಗಳೆಲ್ಲ ಖಾಲಿ!

ಇಲಾಖೆ ತಾ. ಮಟ್ಟದಲ್ಲಿ ದಸರಾ ಕ್ರೀಡಾಕೂಟಗಳನ್ನು ನಡೆಸುತ್ತದೆ. ತಾ. ಮಟ್ಟದಲ್ಲಿ ಅಧಿಕಾರಿಗಳು ಇಲ್ಲದಿದ್ದರೂ ಶಿಕ್ಷಣ ಇಲಾಖೆಯಿಂದ ನೇಮಕಗೊಂಡಿ ರುವ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಒಬ್ಬರೇಓಡಾಡಿ ಸಂಯೋಜಿಸಬೇಕಿದೆ. ಜತೆಗೆ ಅವರಿಗೆ ತಮ್ಮ ಶಾಲೆಯ ಜವಾಬ್ದಾರಿಯೂ ಇರುತ್ತದೆ.

ಮಂಗಳೂರು, ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಸೆ. 14ರಂದು ತಾ. ಮಟ್ಟದ ಕ್ರೀಡಾಕೂಟ ನಡೆಯಲಿದೆ. ಪುತ್ತೂರು ಮತ್ತು ಸುಳ್ಯದಲ್ಲಿ ಸೆ. 15ರಂದು ನಡೆಯುತ್ತದೆ. ಆದರೆ ಕ್ರೀಡಾಂಗಣ ಹೊಂದಿಸುವ ದೃಷ್ಟಿಯಿಂದ ಸುಳ್ಯದಲ್ಲಿ ಫ‌ುಟ್ಬಾಲ್‌ ಸ್ಪರ್ಧೆ ಮಾತ್ರ ಸೆ. 14ರಂದೇ ನಡೆಯಲಿದೆ.

ದಸರಾ ಕ್ರೀಡಾಕೂಟಗಳಿದ್ದಾಗ ಮಾಹಿತಿ ಹೆಚ್ಚು ಜನರಿಗೆ ತಲುಪಬೇಕು. ಸಿಬಂದಿಯಿದ್ದಾಗ ಮಾತ್ರ ಇದೆಲ್ಲ ಸಾಧ್ಯ. ಸರಕಾರ ಕೂಡ ಕೊನೆ ಗಳಿಗೆಯಲ್ಲಿ ಆದೇಶ ಹೊರಡಿಸುವುದರಿಂದ ಕ್ರೀಡಾಕೂಟ ಸುಸೂತ್ರ ನಿರ್ವಹಣೆಗೆ ಕಷ್ಟವಾಗುತ್ತಿದೆ.

ಹುದ್ದೆಗಳೆಲ್ಲ ಖಾಲಿ
ದಸರಾ ಕ್ರೀಡಾಕೂಟ ಸಹಿತ ಯುವಕ/ಯುವತಿ ಮಂಡಲಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸಬೇಕಾದ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಮಂಜೂರಾಗಿರುವ ಉಪನಿರ್ದೇಶಕರು, ದ್ವಿತೀಯ ದರ್ಜೆ ಸಹಾಯಕ, ಅಧೀಕ್ಷಕರು ಮತ್ತು ಅಟೆಂಡರ್‌ (ಗ್ರೂಪ್‌ ಡಿ) – ಎಲ್ಲವೂ ಖಾಲಿ ಇವೆ.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿರುವ ಪ್ರದೀಪ್‌ ಡಿ’ಸೋಜಾ ಪ್ರಸ್ತುತ ಉಪನಿರ್ದೇ ಶಕ ಹುದ್ದೆಯನ್ನು ಹೆಚ್ಚುವರಿ ಯಾಗಿ ನಿರ್ವ ಹಿಸುತ್ತಿದ್ದಾರೆ. ಉಳಿದಂತೆ ಮಂಗಳಾ ಸ್ಟೇಡಿಯಂ ಕಮಿಟಿಯ ಬಾಡಿಗೆಯ ಮೂಲಕ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಿಸಿ ಕೆಲಸ ನಿರ್ವಹಿಸಲಾಗುತ್ತಿದೆ.

ದೈಹಿಕ ಶಿಕ್ಷಣ ಶಿಕ್ಷಕರಿಗೆ ಜವಾಬ್ದಾರಿ
ತಾಲೂಕುಗಳಲ್ಲಿ ಇಲಾಖೆಯ ಜವಾಬ್ದಾರಿ ನಿರ್ವ ಹಿಸಲು ಪ್ರತಿ ತಾಲೂಕಿನಿಂದ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಲಾಗಿದ್ದು, ಅವರು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಹುದ್ದೆಯನ್ನು ನಿರ್ವಹಿಸಬೇಕಿದೆ. 1994ಕ್ಕೆ ಮೊದಲು ಈ ಹುದ್ದೆಗಳಿಗೆ ಪ್ರತ್ಯೇಕ ಸಿಬಂದಿ ಇದ್ದರು, ಬಳಿಕ ಸರಕಾರ ಆ ಹುದ್ದೆಯನ್ನು ತೆಗೆದು ಹಾಕಿತ್ತು.

ಮಂಗಳೂರು ತಾಲೂಕಿನಲ್ಲಿ ಲಿಲ್ಲಿ ಪಾಸ್‌, ಪುತ್ತೂರಿನಲ್ಲಿ ಮಾಮಚ್ಚನ್‌, ಸುಳ್ಯದಲ್ಲಿ ದೇವರಾಜ್‌ ಮುತ್ಲಾಜೆ, ಬಂಟ್ವಾಳದಲ್ಲಿ ನವೀನ್‌ ಪಿ.ಎಸ್‌. ಮತ್ತು ಬೆಳ್ತಂಗಡಿಯಲ್ಲಿ ಪ್ರಭಾಕರ ನಾರಾವಿ ಅವರು ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ.

ತೊಂದರೆಯಾಗದಂತೆ ನಿರ್ವಹಣೆ
ಸೆ. 14ರಂದು ಜಿಲ್ಲೆಯಲ್ಲಿ ದಸರಾ ಕ್ರೀಡಾಕೂಟ ಆರಂಭವಾಗಲಿದ್ದು, ಹುದ್ದೆಗಳು ಖಾಲಿಯಿದ್ದರೂ ನಿರ್ವಹಿಸಲಾಗುತ್ತಿದೆ. ತಾಲೂಕು ಮಟ್ಟದ ಅಧಿಕಾರಿ ಹುದ್ದೆಗಳನ್ನು ನಿಯೋಜಿತ ದೈಹಿಕ ಶಿಕ್ಷಣ ಶಿಕ್ಷಕರು ನಿರ್ವಹಿಸುತ್ತಿದ್ದಾರೆ.
– ಪ್ರದೀಪ್‌ ಡಿ’ಸೋಜಾ
ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.