ನೆರೆ ಪರಿಹಾರದಲ್ಲಿ ತಾರತಮ್ಯಕ್ಕೆ ಆಕ್ರೋಶ


Team Udayavani, Sep 14, 2019, 11:02 AM IST

bk-tdy-4

ಬಾಗಲಕೋಟೆ: ಸುದ್ದಿಗೋಷ್ಠಿಯಲ್ಲಿ ನಾಗರಾಜ ಹೊಂಗಲ್ ಮಾತನಾಡಿದರು.

ಬಾಗಲಕೋಟೆ: ಯೋಜನಾಬಾಧಿತ ಪ್ರದೇಶ ವ್ಯಾಪ್ತಿಯಲ್ಲಿ ಮನೆ ಮುಳುಗಡೆಗೊಂಡು, ಪರಿಹಾರ ಪಡೆದವರಿಗೆ ನೆರೆ ಪರಿಹಾರ ನೀಡಲು ಅವಕಾಶವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದು, ಒಂದು ವೇಳೆ ಯೋಜನಾಬಾಧಿತರಿಗೆ ನೆರೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿವಿಧ ಸಂಘಟನೆಗಳ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಪಂ ಉಪಾಧ್ಯಕ್ಷ, ರೈತ ಸಂಘದ ಮುಖಂಡ ಮುತ್ತಪ್ಪ ಕೋಮಾರ, ಸಾಮಾಜಿಕ ಹೋರಾಟಗಾರ ನಾಗರಾಜ್‌ ಹೊಂಗಲ್, ಕರವೇ ಅಧ್ಯಕ್ಷ ರಮೇಶ ಬದ್ನೂರ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಮೊದಲು, ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ನಿಯಮಗಳ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಸಂತ್ರಸ್ತರಲ್ಲಿ ತಾರತಮ್ಯ ಬೇಡ: ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿ ಪ್ರವಾಹದಿಂದ ಜಿಲ್ಲೆಯ 195 ಹಳ್ಳಿಗಳು ಮುಳುಗಡೆಗೊಂಡಿವೆ. ಇದರಲ್ಲಿ 98 ಹಳ್ಳಿಗಳು ಯುಕೆಪಿ, ಆಸರೆ ಹಾಗೂ ನಾರಾಯಣಪುರ ಡ್ಯಾಂ ಹಿನ್ನೀರ ವ್ಯಾಪ್ತಿಯಲ್ಲಿ ಈ ಹಿಂದೆಯೇ ಮುಳುಗಡೆಗೊಂಡಿದ್ದು, ಮನೆಗಳಿಗೆ ಪರಿಹಾರ ಕೊಡಲಾಗಿದೆ. ಆದರೂ ಜನರು ಅಲ್ಲೇ ವಾಸಿಸುತ್ತಿದ್ದು ಅವರಿಗೆ ಸದ್ಯ ಪರಿಹಾರ ಕೊಡಲ್ಲ ಎನ್ನುತ್ತಿದ್ದಾರೆ. ಜನರು, ಮುಳುಗಡೆಗೊಂಡ ಗ್ರಾಮದಲ್ಲೇ ಮಜಾ ಮಾಡಲು ವಾಸಿಸುತ್ತಿಲ್ಲ. ಅವರ ಮನೆ ಮುಳುಗಿದ್ದು, ಹೊಲಗಳು ಸ್ವಾಧೀನಗೊಂಡಿಲ್ಲ. ಹೀಗಾಗಿ ಕೃಷಿಯನ್ನೇ ನಂಬಿ ಜೀವನ ನಡೆಸುವ ಜನರು, ಮೂಲ ಗ್ರಾಮದಿಂದ ದೂರ ಇರುವ ಪುನರ್‌ವಸತಿ ಕೇಂದ್ರಗಳಿಗೆ ಹೋಗಿಲ್ಲ. ಈಗ ಪ್ರವಾಹ ಬಂದಾಗ ಅವರ ಮನೆ, ಬೆಳೆ ಎಲ್ಲವೂ ಮುಳುಗಿದೆ. ಅವರನ್ನು ಪರಿಹಾರದಿಂದ ವಂಚಿತರನ್ನಾಗಿ ಮಾಡಬಾರದು. ಎಲ್ಲಾ ಸಂತ್ರಸ್ತರನ್ನು ಒಂದೇ ರೀತಿ ಪರಿಗಣಿಸಿ ಪರಿಹಾರ ನೀಡಬೇಕು. ಒಂದು ವೇಳೆ ತಾರತಮ್ಯ ಮಾಡಿದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ವಾಸ್ತವದ ಪರಿಹಾರ ಕೊಡಿ: ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್‌ ಹಾಗೂ ರಾಜ್ಯದ ಎಸ್‌ಡಿಆರ್‌ಎಫ್‌ ನಿಯಮಗಳ ಪ್ರಕಾರ ಪರಿಹಾರ ನೀಡಿದರೆ, ಜಿಲ್ಲೆಯ ಯಾವ ರೈತರು, ಸಣ್ಣಪುಟ್ಟ ವ್ಯಾಪಾರಸ್ಥರು ಬದುಕುವುದಿಲ್ಲ. 15ರಿಂದ 20 ಎಕರೆ, ಕೆಲವು ದೊಡ್ಡ ರೈತರ ಬೆಳೆಹಾನಿಯಾಗಿದ್ದರೂ ಅವರಿಗೆ ನಿಯಮಗಳ ಪ್ರಕಾರ ಕೇವಲ 2 ಹೆಕ್ಟೇರ್‌ಗೆ ಪರಿಹಾರ ನೀಡುವುದಾಗಿ ಹೇಳುತ್ತಿದ್ದಾರೆ. ಅದೂ ಒಂದು ಹೆಕ್ಟೇರ್‌ಗೆ ಕೇವಲ 5 ಸಾವಿರ ಪರಿಹಾರ ನೀಡಲು ಈಗಿರುವ ನಿಯಮಗಳಲ್ಲಿ ಅವಕಾಶವಿದೆ. ಈ ಪರಿಹಾರ ಯಾವುದಕ್ಕೂ ಸಾಕಾಗಲ್ಲ. ವಾಸ್ತವದಲ್ಲಿ ಎಷ್ಟು ಹಾನಿಯಾಗಿದೆಯೋ ಅಷ್ಟು ಪರಿಹಾರ ಕೊಡಬೇಕು. ಒಂದು ಎಕರೆ ಕಬ್ಬು ಬೆಳೆಲು ಗರಿಷ್ಠ 1.50 ಲಕ್ಷ ಖರ್ಚಾಗುತ್ತದೆ. ಆದರೆ, ರೈತರು ಕೇಳುತ್ತಿರುವ 1 ಲಕ್ಷ ಪರಿಹಾರ ಮಾತ್ರ. ಈ ಪರಿಹಾರ ನೀಡಲೇಬೇಕು ಎಂದು ಆಗ್ರಹಿಸಿದರು.

ಬಹಿರಂಗ ಅಧಿವೇಶನ: ನೆರೆ ಸಂತ್ರಸ್ತರ ಹಲವು ಸಮಸ್ಯೆಗಳ ಕುರಿತು ಬಹಿರಂಗ ಅಧಿವೇಶನದಲ್ಲಿ ಚರ್ಚಿಸಿ, ಸರ್ಕಾರಕ್ಕೆ ಹಕ್ಕೋತ್ತಾಯ ಸಲ್ಲಿಸಲು ನಿರ್ಧರಿಸಲಾಗಿದೆ. ಸೆ.15ರಂದು ಕಾಳಿದಾಸ ಕಾಲೇಜು ಆವರಣದಲ್ಲಿ ನಡೆಯುವ ಅಧಿವೇಶನಕ್ಕೆ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಜಿಲ್ಲೆಯ ಸಂಸದ ಪಿ.ಸಿ. ಗದ್ದಿಗೌಡರ ಅವರಿಗೆ ಆಹ್ವಾನ ನೀಡಲಾಗಿದೆ. ನೆರೆ ಪೀಡಿತ 8 ಜಿಲ್ಲೆಗಳ ಜನಪ್ರತಿನಿಧಿಗಳು, ಸಂತ್ರಸ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ರೈತ ಸಂಘದ ಚಾಮರಸ ಮಾಲಿಪಾಟೀಲ, ಭಾರತೀಯ ಕಿಸಾನ್‌ ಸಂಘದ ವಿ.ಜಿ. ರೇವಡಿಗಾರ, ಸಂತ್ರಸ್ತರ ಹೋರಾಟ ಸಮಿತಿಯ ಪ್ರಕಾಶ ಅಂತರಗೊಂಡ, ನಭಿ ಅನಗವಾಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.