ವೇತನ, ಭವಿಷ್ಯ ನಿಧಿ ನೀಡದೆ ದಬ್ಟಾಳಿಕೆ
Team Udayavani, Sep 14, 2019, 2:29 PM IST
ಕೊರಟಗೆರೆ ತಾಲೂಕು ಕಸಬಾ ಹೋಬಳಿ ಬಜ್ಜನಹಳ್ಳಿ ಬಳಿಯ ಗಾರ್ಮೆಂಟ್ಸ್ ಎದುರು ಭವಿಷ್ಯನಿಧಿ ಮತ್ತು ಸಂಬಳಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕೊರಟಗೆರೆ: ಎರಡು ತಿಂಗಳ ವೇತನ ಮತ್ತು 1 ವರ್ಷದ ವಿಶೇಷ ಭತ್ಯೆ ಜೊತೆ ಭವಿಷ್ಯ ನಿಧಿ ನೀಡದೆ ದಬ್ಟಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗಾರ್ಮೆಂಟ್ಸ್ ಎದುರು 300ಕ್ಕೂ ಹೆಚ್ಚು ಕಾರ್ಮಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು. ಕಸಬಾ ಹೋಬಳಿ ಬಜ್ಜನಹಳ್ಳಿ ಬಳಲಿಯ ಬಳಿಯ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಕಳೆದ ಎರಡು ತಿಂಗಳ ಸಂಬಳ ಮತ್ತು 1 ವರ್ಷದಿಂದ ಭವಿಷ್ಯನಿಧಿ ನೀಡದೆ ಮಾಲೀಕರು ದಬ್ಟಾಳಿಕೆ ನಡೆ ಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಾರ್ಮೆಂಟ್ಸ್ ಲೆಕ್ಕಾಧಿಕಾರಿ ರಾಘವೇಂದ್ರ ರಾಜಅರಸ್ ಮಾತನಾಡಿ, ಕಂಪನಿ ಪ್ರಾರಂಭ ಆದಾಗ 1600 ಕಾರ್ಮಿಕರಿದ್ದರು. ಈಗ ಕೇವಲ 300 ಕಾರ್ಮಿಕರಿದ್ದಾರೆ. ಐದು ಘಟಕದಲ್ಲಿ ನಾಲ್ಕು ಮುಚ್ಚಿದ್ದಾರೆ. ಈಗ ಗಾರ್ಮೆಂಟ್ಸ್ ಮಾತ್ರ ಉಳಿದಿದೆ. ನಮ್ಮ ಸಮಸ್ಯೆ ಹೇಳಿದರೆ ವರ್ಗಾವಣೆ ಅಥವಾ ಕೆಲಸದಿಂದ ವಜಾ ಮಾಡುತ್ತಾರೆ ಎಂದು ಕಿಡಿಕಾರಿದರು.
ಕಾರ್ಮಿಕ ಹರೀಶ್ ಮಾತನಾಡಿ, ಕಾರ್ಮಿಕರು ಪ್ರತಿಭಟನೆ ಮಾಡಿದಾಗ ಸಂಬಳ ಕೊಡುತ್ತಾರೆ. ಸಂಬಳದಿಂದ ಭವಿಷ್ಯನಿಧಿ ಕಡಿತ ಮಾಡಿ ಸರ್ಕಾರಕ್ಕೆ ಹಣ ಕಟ್ಟದೆ ನಿರ್ಲಕ್ಷ್ಯ ಮಾಡಿದ್ದಾರೆ. ನಮಗೆ ಎರಡು ತಿಂಗಳ ಸಂಬಳದ ಜೊತೆ ಒಂದು ವರ್ಷದ ಭವಿಷ್ಯನಿಧಿ ಬರಬೇಕಾಗಿದೆ ಎಂದು ಆಗ್ರಹಿಸಿದರು.
ಶಿವಮ್ಮ ಮಾತನಾಡಿ, ಆರು ವರ್ಷದಿಂದ ಗಾರ್ಮೆಂಟ್ಸ್ ನಂಬಿ ಜೀವನ ಮಾಡುತ್ತಿದ್ದೇನೆ. ಈಗ ಏಕಾಏಕಿ ಗಾರ್ಮೆಂಟ್ಸ್ ವಾಹನಗಳಿಗೆ ವಿಮೆ ಮತ್ತು ದಾಖಲೆ ಇಲ್ಲವೆಂದು ಕಂಪನಿ ವಾಹನ ನಿಲ್ಲಿಸಿದ್ದಾರೆ. ಸಮಸ್ಯೆ ಕೇಳುವ ಕಾರ್ಮಿಕ ಅಧಿಕಾರಿ ಮತ್ತು ಭವಿಷ್ಯನಿಧಿ ಅಧಿಕಾರಿಗಳು ನಾಪತ್ತೆಯಾಗಿ ದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರಾದ ರಾಕೇಶ್, ರಾಘವೇಂದ್ರ, ಈಶ್ವರ, ಸುರೇಶ್, ಲೊಕೇಶ್, ನಾಗರಾಜು, ಕೃಷ್ಣ, ಮೋಹನ, ಗೋಪಾಲ, ಅಂಬಿಕಾ, ಮಂಜುಳ, ಗಂಗಮ್ಮ, ರತ್ನಮ್ಮ, ಶಶಿ, ವೀರಕ್ಯಾತ, ಹರೀಶ, ರವಿಕುಮಾರ 300ಕ್ಕೂ ಹೆಚ್ಚು ಕಾರ್ಮಿಕರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.