“ಶಿವಗಾಮಿ’ ಲುಕ್ನಲ್ಲಿ ರಮ್ಯಾಕೃಷ್ಣ
ಇಂದು ಚಿತ್ರದ ಲಿರಿಕಲ್ ಹಾಡು ಬಿಡುಗಡೆ
Team Udayavani, Sep 15, 2019, 3:00 AM IST
“ಬಾಹುಬಲಿ’ ಚಿತ್ರವನ್ನು ನೋಡಿದವರು “ಶಿವಗಾಮಿ’ ಪಾತ್ರವನ್ನು ಮರೆಯಲಾರರು. “ಬಾಹುಬಲಿ’ ಚಿತ್ರದಲ್ಲಿ ಮೋಡಿ ಮಾಡಿದ್ದ “ಶಿವಗಾಮಿ’ ಹೆಸರಿನಲ್ಲಿ ಈಗ ಚಿತ್ರವೊಂದು ತೆರೆಗೆ ಬರುತ್ತಿದೆ. “ಬಾಹುಬಲಿ’ ಚಿತ್ರದಲ್ಲಿ “ಶಿವಗಾಮಿ’ಯಾಗಿ ಮಿಂಚಿದ್ದ ಬಹುಭಾಷಾ ನಟಿ ರಮ್ಯಾಕೃಷ್ಣ ಅವರೆ “ಶಿವಗಾಮಿ’ ಚಿತ್ರದಲ್ಲೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ “ಶಿವಗಾಮಿ’ಯ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿರುವ ಚಿತ್ರತಂಡ, ಸೆ. 15ರಂದು “ಶಿವಗಾಮಿ’ಯ ನಾಯಕಿ ರಮ್ಯಾಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಮೊದಲ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಲು ಪ್ಲಾನ್ ಹಾಕಿಕೊಂಡಿದೆ.
“ಶ್ರೀವಿಘ್ನೇಶ್ ಕಾರ್ತಿಕ್ ಸಿನಿಮಾಸ್’ ಬ್ಯಾನರ್ನಲ್ಲಿ ಜಿ. ಶ್ರೀಧರ್ ನಿರ್ಮಿಸುತ್ತಿರುವ “ಶಿವಗಾಮಿ’ ಚಿತ್ರಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಅನುಭವ ಪಡೆದಿರುವ ಮಧು ಮಿಣಕನಗುರ್ಕಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಕನ್ನಡ, ತೆಲುಗು, ತುಳು, ಮಲೆಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ “ಶಿವಗಾಮಿ’ ಚಿತ್ರ ತೆರೆಗೆ ಬರುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ “ಶಿವಗಾಮಿ’ ಚಿತ್ರದ ಪೋಸ್ಟರ್ ಗಮನ ಸೆಳೆಯುತ್ತಿದ್ದು, ಇಂದು ಚಿತ್ರದ “ಆಡುವೆ ನಾನು ರತಿ ಶಿವಗಾಮಿ…’ ಎಂಬ ಹಾಡಿನ ಲಿರಿಕಲ್ ಆದಿತ್ಯ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.
ಡಾ. ವಿ ನಾಗೇಂದ್ರಪ್ರಸಾದ್ ಬರೆದಿರುವ ಈ ಹಾಡನ್ನು ಅನುರಾಧ ಭಟ್ ಹಾಡಿದ್ದಾರೆ. ವೀರ ಸಮರ್ಥ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಬಾಲ್ ರೆಡ್ಡಿ ಅವರ ಛಾಯಾಗ್ರಹಣದೆ. ಕೆ.ಎಂ ಪ್ರಕಾಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು, ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಮ್ಯಕೃಷ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರವೀಣ್ ತೇಜ್ (ಸಿಂಪಲಾಗ್ ಇನ್ನೊಂದ್ ಲವ್ ಸ್ಟೋರಿ), ಪಾಯಲ್, ರಕಾಳೆ, ಮಧು (ಗೋಲಿಸೋಡ), ಅವಿನಾಶ್, ರೋಲರ್ ರಘು, ಮಧುಮಣಿ, ಮಿಮಿಕ್ರಿ ರಿತೇಶ್, ಕುರಿಬಾಂಡ್ ರಂಗ, ಸಿದ್ದರಾಜ್ ಕಲ್ಯಾಣಕರ್, ಗುರುರಾಜ ಹೊಸಕೋಟೆ, ಅನಂತವೇಲು, ಆಲಿಸಾ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್