“ಕಬ್ಜ’ ಮಾಡಲು ಹೊರಟ ಉಪ್ಪಿ-ಚಂದ್ರು ಜೋಡಿ

ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌

Team Udayavani, Sep 15, 2019, 3:02 AM IST

Kabza–first-look

ನಿರ್ದೇಶಕ ಆರ್‌.ಚಂದ್ರು ಹಾಗೂ ಉಪೇಂದ್ರ ಅವರ ಕಾಂಬಿನೇಶನ್‌ನಲ್ಲಿ ಮೂರನೇ ಸಿನಿಮಾ ಬರುತ್ತಿರುವ ವಿಚಾರವನ್ನು ನೀವು ಇದೇ ಬಾಲ್ಕನಿಯಲ್ಲಿ ಓದಿದ್ದೀರಿ. ಆಗ ಆ ಚಿತ್ರಕ್ಕೆ ಟೈಟಲ್‌ ಆಗಿರಲಿಲ್ಲ. ಈಗ ಚಿತ್ರಕ್ಕೆ ಟೈಟಲ್‌ ಫಿಕ್ಸ್‌ ಆಗಿದೆ. ಅದು “ಕಬ್ಜ’. ಹೌದು, ಉಪೇಂದ್ರ ಹಾಗೂ ಆರ್‌.ಚಂದ್ರು ಕಾಂಬಿನೇಶನ್‌ ಸಿನಿಮಾಕ್ಕೆ “ಕಬ್ಜ’ ಎಂಬ ಶೀರ್ಷಿಕೆ ಇಡಲಾಗಿದೆ. ಶೀರ್ಷಿಕೆ ಕೇಳಿದ ಮೇಲೆ ಇದೊಂದು ಆ್ಯಕ್ಷನ್‌ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಭೂಗತ ಜಗತ್ತಿನಲ್ಲಿ ಈ ಪದ ಹೆಚ್ಚು ಬಳಕೆಯಲ್ಲಿರುವುದರಿಂದ ನಿರ್ದೇಶಕ ಚಂದ್ರು, ಚಿತ್ರಕ್ಕೆ “ಕಬ್ಜ’ ಎಂಬ ಶೀರ್ಷಿಕೆ ಇಟ್ಟಿದ್ದಾರೆ. ಯಾರಧ್ದೋ ಜಾಗ ಅಥವಾ ವಸ್ತುವನ್ನು ಅತಿಕ್ರಮಣ ಮಾಡಿಕೊಳ್ಳುವುದಕ್ಕೆ ಕಬ್ಜ ಎಂಬ ಪದವೂ ಬಳಕೆಯಲ್ಲಿದೆ. ಚಂದ್ರು ಈಗ “ಕಬ್ಜ’ ಇಟ್ಟುಕೊಂಡು ರೌಡಿಸಂ ಹಿನ್ನೆಲೆಯಲ್ಲಿ ಕಥೆ ಹೇಳಲು ಹೊರಟಿದ್ದಾರೆ. ಚಿತ್ರದ ಫ‌ಸ್ಟ್‌ಲುಕ್‌ ಕೂಡಾ ಬಿಡುಗಡೆ ಮಾಡಿದ್ದು, ಕೈಯಲ್ಲಿ ಲಾಂಗ್‌ ಹಿಡಿದಿರುವ ಉಪೇಂದ್ರ ಗೆಟಪ್‌ ಇದು ಪಕ್ಕಾ ಆ್ಯಕ್ಷನ್‌ ಸಿನಿಮಾ ಎನ್ನುವಂತಿದೆ.

ಜೊತೆಗೆ ಉಪೇಂದ್ರ ಅವರ ಕಾಸ್ಟ್ಯೂಮ್‌ ಕೂಡಾ 80ರ ದಶಕವನ್ನು ಸೂಚಿಸುತ್ತಿದ್ದು, ಬೆಲ್‌ ಬಾಟಮ್‌ ಪ್ಯಾಂಟ್‌, ದೊಡ್ಡ ಕಾಲರ್‌ ಶರ್ಟ್‌ ಮೂಲಕ ಇದೊಂದು ರೆಟ್ರೋ ಸ್ಟೈಲ್‌ ಸಿನಿಮಾ ಎಂಬುದನ್ನೂ ತೋರಿಸುವಂತಿದೆ. ಈ ಹಿಂದೆ “ಐ ಲವ್‌ ಯು’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಷ್ಟೇ ಬಿಡುಗಡೆ ಮಾಡಿದ್ದ ಚಂದ್ರು, ಈ ಬಾರಿ ಬರೋಬ್ಬರಿ ಏಳು ಭಾಷೆಗಳಲ್ಲಿ ತಮ್ಮ ಹೊಸ ಸಿನಿಮಾವನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ, ಮರಾಠಿ ಭಾಷೆಗಳಲ್ಲಿ ಈ ಚಿತ್ರವನ್ನು ಏಕಕಾಲಕ್ಕೆ ಬಿಡುಗಡೆಯಾಗಲಿದೆ.

ಈ ಮೂಲಕ ಚಂದ್ರು ಪ್ಯಾನ್‌ ಇಂಡಿಯಾದತ್ತ ಮುಖ ಮಾಡಿದ್ದಾರೆ. “ಐ ಲವ್‌ ಯು’ ಚಿತ್ರದ ನೂರನೇ ದಿನದ ಕಾರ್ಯಕ್ರಮದಲ್ಲಿ ಚಂದ್ರು, ತಮ್ಮ ಹೊಸ ಸಿನಿಮಾದ ಟೈಟಲ್‌ ಹಾಗೂ ಫ‌ಸ್ಟ್‌ಲುಕ್‌ ಲಾಂಚ್‌ ಮಾಡಿದ್ದಾರೆ. ಈ ವರ್ಷದ ಹಿಟ್‌ ಸಿನಿಮಾಗಳ ಸಾಲಿನಲ್ಲಿ ಉಪೇಂದ್ರ ನಾಯಕರಾಗಿರುವ “ಐ ಲವ್‌ ಯು’ ಚಿತ್ರ ಕೂಡಾ ಸೇರುತ್ತದೆ. ಆರ್‌.ಚಂದ್ರು, ನಿರ್ಮಿಸಿ, ನಿರ್ದೇಶಿಸಿದ ಈ ಚಿತ್ರ ಉಪೇಂದ್ರ ಅಭಿಮಾನಿಗಳಿಗೆ ಇಷ್ಟವಾಗುವ ಮೂಲಕ ಹಿಟ್‌ಲಿಸ್ಟ್‌ ಸೇರಿತ್ತು.

ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರ ಬಿಝಿನೆಸ್‌ ವಿಷಯದಲ್ಲೂ ನಿರ್ಮಾಪಕರಿಗೆ ದೊಡ್ಡ ಲಾಭವನ್ನೇ ತಂದುಕೊಟ್ಟಿದೆ. ದೊಡ್ಡ ಗ್ಯಾಪ್‌ನ ಬಳಿಕ ಬಂದ ಉಪೇಂದ್ರ ಅವರಿಗೂ “ಐ ಲವ್‌ ಯು’ ಯಶಸ್ಸಿನ ಖುಷಿ ಕೊಟ್ಟಿದ್ದು ಸುಳ್ಳಲ್ಲ. ಈಗ ಈ ಜೋಡಿ ಮೂರನೇ ಸಿನಿಮಾಕ್ಕೆ ಜೊತೆಯಾಗಿದೆ. “ಕಬ್ಜ’ ಕೂಡಾ ಬಿಗ್‌ಬಜೆಟ್‌ ಚಿತ್ರವಾಗಿದ್ದು, ಪ್ಯಾನ್‌ ಇಂಡಿಯಾ ಮಟ್ಟಕ್ಕೆ ಚಿತ್ರ ಮಾಡಲು ಚಂದ್ರು ಸಿದ್ಧತೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.