ನೋಡುತ್ತಲೇ ಕಲಿತು ಚಿತ್ರಕಲೆಯಲ್ಲಿ ಮಿಂಚಿದ ಮಕ್ಕಳು


Team Udayavani, Sep 15, 2019, 5:20 AM IST

as-17

ಡಗನ್ನೂರು: ಎಲ್ಲ ವಿದ್ಯೆಗಳಿಗೂ ಗುರು ಇರುತ್ತಾನೆ. ಆದರೆ ಕೆಲವೊಂದು ವಿದ್ಯೆಗಳು ಪ್ರತಿಭೆಯಿಂದ ಅನಾವರಣಗೊಳ್ಳುತ್ತವೆ ಎನ್ನುವ ಮಾತು ಕುಂಬ್ರದಲ್ಲಿರುವ ಕರ್ನಾಟಕ ಇಸ್ಲಾಮಿಕ್‌ ಅಕಾಡೆಮಿಯ 10ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸ್ವಯಂ ಪ್ರತಿಭೆಯಿಂದ ಚಿತ್ರಕಲೆಯಲ್ಲಿ ಮಿಂಚುತ್ತಿರುವುದನ್ನು ಗಮನಿಸಿದರೆ ಸತ್ಯವೆಂದು ತೋರುತ್ತದೆ.

ಹತ್ತು ವಿದ್ಯಾರ್ಥಿಗಳೂ ಚಿತ್ರಕಲೆಯಲ್ಲಿ ಪರಿಣತಿ ಹೊಂದಿದ್ದಾರೆ. ಅವರ ಪೈಕಿ ಪ್ರಥಮ ಪದವಿ ವಿದ್ಯಾರ್ಥಿ ಸುಹೈಲ್ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿ ತಪ್ಸೀರ್‌ ಕಲೆಯಲ್ಲಿ ನೈಪುಣ್ಯ ಸಾಧಿಸಿದ್ದಾರೆ. ಇವರಿಬ್ಬರೂ ನೂರಾರು ಚಿತ್ರಗಳನ್ನು ಬಿಡಿಸಿದ್ದಾರೆ. ವಿಶ್ವನಾಯಕರು, ರಾಷ್ಟ್ರದ ನಾಯಕರು, ಧಾರ್ಮಿಕ ಪಂಡಿತರು, ಪ್ರಕೃತಿ ಹೀಗೆ ಹಲವು ಬಗೆಯ ಚಿತ್ರಗಳನ್ನು ರಚಿಸಿದ್ದಾರೆ. ಅದೂ ಹವ್ಯಾಸಕ್ಕಾಗಿ. ಕಲೆಯಲ್ಲಿ ಪರಿಣತಿ ಇದ್ದರೂ ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿಲ್ಲ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಕುಂಬ್ರದ ಕರ್ನಾಟಕ ಇಸ್ಲಾಮಿಕ್‌ ಅಕಾಡೆಮಿಯಲ್ಲಿವೆ 10ಕ್ಕೂ ಹೆಚ್ಚು ಪ್ರತಿಭೆಗಳು

ಗಣ್ಯರ ಚಿತ್ರಗಳು
ರಾಜಕೀಯ ಸ್ಥಿತಿಗತಿ, ರಾಜಕೀಯ ನಾಯಕರ ಹೇಳಿಕೆಗಳು, ಸಂಘಟನೆಗಳ ವಿವಿಧ ಹೋರಾಟಗಳು ಮುಂತಾದ ವಿಷಯಗಳನ್ನು ಇಟ್ಟುಕೊಂಡು ಕ್ಷಣಮಾತ್ರದಲ್ಲಿ ವ್ಯಂಗ್ಯ ಕಾಟೂìನ್‌ಗಳನ್ನು ಈ ವಿದ್ಯಾರ್ಥಿಗಳು ರಚಿಸುತ್ತಾರೆ. ನೆಲ್ಸನ್‌ ಮಂಡೇಲಾ, ಮದರ್‌ ತೆರೇಸಾ, ಮೊಘಲ್‌ ಚಕ್ರವರ್ತಿ ಅಕ್ಬರ್‌, ಅಬ್ರಾಹಂ ಲಿಂಕನ್‌, ಮಾಜಿ ಪ್ರಧಾನಿ ಇಂದಿರಾಗಾಂಧಿ, ಜೋಕರ್‌, ಲಿಯೋನಲ್‌ ಮೆಸ್ಸಿ, ಇತ್ತೀಚೆಗೆ ನಿಧನರಾದ ಖ್ಯಾತ ಮುಸ್ಲಿಂ ವಿದ್ವಾಂಸ ಅತ್ತಿಪಟ್ಟೆ ಉಸ್ತಾದ್‌ ಸಹಿತ ಹಲವು ಗಣ್ಯ ವ್ಯಕ್ತಿಗಳ ಕ್ಯಾರಿಕೇಚರ್‌ಗಳನ್ನು ಚಿತ್ತಾಕರ್ಷಕವಾಗಿ ಬಿಡಿಸಿ ಜನಮೆಚ್ಚುಗೆ ಗಳಿಸಿದ್ದಾರೆ.

ಸಾಹಸವೇ ಸರಿ
ಯಾವುದೇ ಚಿತ್ರ ಅಥವಾ ಫೋಟೋವನ್ನು ಅವರಿಗೆ ನೀಡಿದರೆ ಸಾಕು, ಕೆಲವೇ ನಿಮಿಷದಲ್ಲಿ ಆ ಚಿತ್ರವನ್ನು ಯಥಾಪ್ರಕಾರ ಬಿಡಿಸುವ ಕಲೆ ಸುಹೈಲ್‌ ಮತ್ತು ತಪ್ಸಿರ್‌ ಅವರಿಗೆ ಸಿದ್ಧಿಸಿದೆ. ಅವರು ಯಾವುದೇ ಚಿತ್ರಕಲಾ ತರಗತಿಗೆ ಹೋಗಿಲ್ಲ. ಬಿಡುವಿನ ಸಮಯದಲ್ಲಿ ಚಿತ್ರಕಲೆಯನ್ನು ಅಭ್ಯಾಸ ಮಾಡಿದ್ದು ಕೇವಲ ಆಸಕ್ತಿಯ ಫ‌ಲವಾಗಿ. ವ್ಯಕ್ತಿಗಳ ರೇಖಾ ಚಿತ್ರ ಬಿಡಿಸುವ ಕಲೆಯಂತೂ ಅದ್ಭುತ ಎನಿಸುವಷ್ಟು ಒಲಿದಿದೆ.

ಈ ಮಕ್ಕಳಿಗೆ ಅರೇಬಿಕ್‌ ಕಲೆಯೂ ಕರಗತ
ಅರೇಬಿಕ್‌ ಪದಗಳನ್ನು ಜೋಡಿಸಿ, ಚಿತ್ರದಂತೆ ಬಿಡಿಸುವ ಕಲೆ ಅತ್ಯಂತ ಕಠಿನ. ಆದರೂ ಅರೇಬಿಕ್‌ ಭಾಷೆಗಳಲ್ಲಿರುವ ಕೆಲವೊಂದು ಸಾಹಿತ್ಯವನ್ನು ಅಕ್ಷರ ಜೋಡಣೆಯ ಮೂಲಕ ಚಿತ್ರ ರೂಪಕ್ಕೆ ತರುವ ಕಾಲಿಯೋಗ್ರಫಿಯ ಅನೇಕ ಮಾದರಿಗಳು ಇವರಲ್ಲಿವೆ. ಸಂಸ್ಥೆಗೆ ಭೇಟಿ ನೀಡುವ ಗಣ್ಯ ವ್ಯಕ್ತಿಗಳ ಚಿತ್ರ ಬಿಡಿಸಿ, ಅದನ್ನೇ ಅವರಿಗೆ ಗಿಫ್ಟ್ ಕೊಡುವ ಹವ್ಯಾಸವನ್ನು ಈ ಇಬ್ಬರೂ ಬೆಳೆಸಿಕೊಂಡಿದ್ದಾರೆ.

ದಿನೇಶ್‌ ಪೇರಾಲು

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.