ಜನರಿಗೆ ನೀರಿನ ಬರ: ಹೋಟೆಲ್ ಗೆ ಭರಪೂರ!

ಮೊಳಕಾಲ್ಮೂರು ಪಪಂ ನೀರಗಂಟಿಗಳ ವಿರುದ್ಧ ಆಕ್ರೋಶ•ನೀರು ವ್ಯರ್ಥವಾಗುತ್ತಿದ್ದರೂ ಗಮನ ನೀಡುವವರಿಲ್ಲ

Team Udayavani, Sep 15, 2019, 12:39 PM IST

15-Sepctember-11

ಮೊಳಕಾಲ್ಮೂರು: ಜನರು ದುಬಾರಿ ಹಣ ತೆತ್ತು ಟ್ಯಾಂಕರ್‌ ನೀರು ಪಡೆದರು.

ಮೊಳಕಾಲ್ಮೂರು: ಸತತ ಬರ, ಮಳೆ ವೈಫಲ್ಯದಿಂದಾಗಿ ಪಟ್ಟಣದ ಜನರು ಹನಿ ನೀರಿಗೂ ಪರದಾಡುವಂತಾಗಿದೆ. ಜನರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕಾದ ಪಟ್ಟಣ ಪಂಚಾಯತ್‌, ಕೆಲವು ಹೋಟೆಲ್ಗಳಿಗೆ ಭರಪೂರ ನೀರು ಸರಬರಾಜು ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಪಟ್ಟಣದ ಎಲ್ಲಾ 16 ವಾರ್ಡ್‌ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಜನರಿಗೆ ಸುಮಾರು 15-20 ದಿನಗಳಾದರೂ ಹನಿ ನೀರು ಬಿಡದ ಪಟ್ಟಣ ಪಂಚಾಯತ್‌, ಹಲವಾರು ಬಾರಿ ಪಟ್ಟಣದ ಬಸ್‌ನಿಲ್ದಾಣದ ಹೋಟೆಲ್ ಸೇರಿದಂತೆ ಕೆಲವು ಹೋಟೆಲ್ಗಳಿಗೆ ಮಾತ್ರ ನೀರು ಪೂರೈಕೆ ಮಾಡುತ್ತಿದೆ. ಅದು ಕೂಡ ನೀರನ್ನು ನದಿಯಂತೆ ಹರಿಸಿ ವ್ಯರ್ಥಗೊಳಿಸಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಸಾರ್ವಜನಿಕರು ನೀರಿಗಾಗಿ ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಟ್ಟಣ ಪಂಚಾಯತ್‌ ನೀರಗಂಟಿಗಳು ನೀರು ಬಿಡಲು ತಡವಾದಲ್ಲಿ ಆಂಧ್ರದಿಂದ ಆಮದಾಗುವ ಶುದ್ದ ಕುಡಿಯುವ ನೀರಿಗೆ ಒಂದು ಕೊಡಕ್ಕೆ 20 ರೂ. ಕೊಟ್ಟು ಕುಡಿಯುವ ನೀರು ಪಡೆಯಬೇಕಾಗಿದೆ. ಬಳಕೆಗಾಗಿ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ 500-600 ರೂ. ತೆತ್ತು ನೀರಿನ ದಾಹ ತಣಿಸಿಕೊಳ್ಳುವಂತಾಗಿದೆ.

ಪಟ್ಟಣ ಪಂಚಾಯತ್‌ ನೀರಗಂಟಿಗಳು 15-20 ದಿನಗಳಿಗೊಮ್ಮೆ ಒಂದು ಲೈನ್‌ಗೆ ಕೇವಲ ಅರ್ಧ ಇಲ್ಲವೇ ಮುಕ್ಕಾಲು ಗಂಟೆ ಕಾಲ ಮಾತ್ರ ಅಲ್ಪ ಪ್ರಮಾಣದಲ್ಲಿ ನೀರು ಬಿಡುತ್ತಿದ್ದಾರೆ. ನಿಗದಿಪಡಿಸಿದ ಸಮಯದಲ್ಲಿ ಅಲ್ಪ ಪ್ರಮಾಣದ ನೀರು ಬಿಟ್ಟು ಬಂದ್‌ ಮಾಡುತ್ತಾರೆ. ಆದರೆ ಬಸ್‌ ನಿಲ್ದಾಣದ ಹೋಟೆಲ್ ಹಾಗೂ ಹಲವಾರು ಸಂಪ್‌ಗ್ಳಿಗೆ ಹೆಚ್ಚಾಗಿ ನೀರು ಹರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಪಟ್ಟಣಕ್ಕೆ ರಂಗಯ್ಯನದುರ್ಗ ಜಲಾಶಯದಿಂದ ಸರಬರಾಜು ಮಾಡುವ ಮೋಟಾರ್‌ ಪಂಪ್‌ ಕೆಟ್ಟುಹೋಗಿದೆ ಎಂದು ತಿಳಿಸಿ ಸುಮಾರು 15-20 ದಿನಗಳಾದರೂ ಹನಿ ನೀರು ಬಿಟ್ಟಿಲ್ಲ. ಆದರೆ ಬಸ್‌ನಿಲ್ದಾಣದ ಹೋಟೆಲ್ನ ಸಂಪ್‌ಗೆ ರಾತ್ರಿಪೂರ್ತಿ ನೀರು ಹರಿಸಲಾಗಿದೆ. ಇದರಿಂದ ಸಂಪ್‌ ಭರ್ತಿಯಾಗಿ ಬಸ್‌ನಿಲ್ದಾಣದಿಂದ ಮೊಬಾರಕ್‌ ಮೊಹಲ್ಲಾದವರೆಗೂ ನೀರು ವ್ಯರ್ಥವಾಗಿ ಹರಿದು ಹೋಗಿದೆ. ಇದು ಜನರನ್ನು ಕೆರಳಿಸಿದೆ.

ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಹೊಸದಾಗಿ ಬಂದಿರುವ ಪಪಂ ಮುಖ್ಯಾಧಿಕಾರಿಗೆ ಈ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಸಮರ್ಪಕ ನೀರು ಪೂರೈಕೆಗೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮುಂದಾಗಬೇಕು ಎಂಬುದು ನಾಗರಿಕರ ಒತ್ತಾಯ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.