ಪರಿಹಾರ ನೀಡಿ ಕಾಮಗಾರಿ ಆರಂಭಿಸಿ


Team Udayavani, Sep 15, 2019, 2:18 PM IST

rn-tdy-2

ರಾಮನಗರದ ವಿಜಯಪುರ, ಜಯಪುರ ಗ್ರಾಮಸ್ಥರು ಪರಿಹಾರ ನೀಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ ಮಾಡಿದರು.

ರಾಮನಗರ: ಸುಮಾರು 2-3 ಕಿಮೀ ದೂರದಿಂದ ಬಿಂದಿಗೆಯಲ್ಲಿ ನೀರು ತಂದು ಪೋಷಿಸಿ ಮಾವಿನ ಮರಗಳನ್ನು ಬೆಳೆಸಿದ್ದೇವೆ. ರಾಕ್ಷಸ ಗಾತ್ರದ ಯಂತ್ರಗಳನ್ನು ತಂದು ಒಮ್ಮೆಗೆ ನೂರಕ್ಕೂ ಹೆಚ್ಚು ಮರಗಳನ್ನು ನೆಲಕ್ಕುರುಳಿಸಿದ್ದಾರೆ. ನಮ್ಮ ಕಣ್ಣೀರ ಕಥೆ ಕೇಳ್ಳೋರೇ ಇಲ್ಲ. ಅತ್ತ ಪರಿಹಾರವೂ ಇಲ್ಲ. ಇತ್ತ ಬದುಕು ಕಟ್ಟಿ ಕೊಟ್ಟಿದ್ದ ಮರಗಳು ಇಲ್ಲ – ಹೀಗೆ ಅಲವತ್ತುಕೊಂಡಿದ್ದು ವಿಜಯಪುರ ಗ್ರಾಮದ ಶಾರದಮ್ಮ.

ಶನಿವಾರ ಬೆಳಗ್ಗೆ ತಾಲೂಕಿನ ಜಯಪುರ, ವಿಜಯಪುರ ಗ್ರಾಮಗಳ ರೈತರು ಜಯಪುರ ಗೇಟ್ ಬಳಿ ಇರುವ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆಯ ಕಾಮಗಾರಿಯ ಗುತ್ತಿಗೆದಾರ ಸಂಸ್ಥೆ ದಿಲೀಪ್‌ ಬಿಲ್ಡ್ಕಾನ್‌ನ ಕ್ಯಾಂಪ್‌ ಸೈಟ್‌ಗೆ ಮುತ್ತಿಗೆ ಹಾಕಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮ ನೋವು ಅರ್ಥವಾಗಲೇ ಇಲ್ಲ: ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಾಮನಗರ ಬೈಪಾಸ್‌ ನಿರ್ಮಾಣಕ್ಕೆ ಯಾವುದೇ ಮುನ್ಸೂಚನೆ ನೀಡಿಲ್ಲ. ನೋಟಿಸ್‌ ಜಾರಿ ಮಾಡದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾವಿನ ಮರಗಳನ್ನು ಕತ್ತರಿಸಿ ಹಾಕಿದ್ದನ್ನು ಖಂಡಿಸಿ, ಸರ್ವೇ ನಡೆಸಿ ಪರಿಹಾರ ನೀಡಿದ ನಂತರವಷ್ಟೇ ಕಾಮಗಾರಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಕಣ್ಣೆದುರಿಗೆ ಉರುಳುತ್ತಿದ್ದ ಮರಗಳನ್ನು ಕಂಡು ಸಹಿಸಲಾಗದೇ ಗೋಗೆರೆದು ಮನವಿ ಮಾಡಿದರು ಗುತ್ತಿಗೆದಾರ ಸಂಸ್ಥೆಯ ಎಂಜಿನಿಯರ್‌ಗಳಿಗೆ, ಸಿಬ್ಬಂದಿಗೆ ನಮ್ಮ ನೋವು ಅರ್ಥವಾಗಲೇ ಇಲ್ಲ. ಪರಿಹಾರ ಕೊಡುವ ತನಕವಾದರು ಮರಗಳನ್ನು ಉಳಿಸಿ ಎಂದು ಕಣ್ಣೀರಿಟ್ಟರೂ ಅವರ ಮನಸ್ಸು ಕರಗಲಿಲ್ಲ ಎಂದು ಆರೋಪಿಸಿದರು.

ನೋಟೀಸು ಇಲ್ಲ, ಪರಿಹಾರವೂ ಇಲ್ಲ!: ಕ್ಯಾಂಪ್‌ ಸೈಟ್‌ಗೆ ಮುತ್ತಿಗೆ ಹಾಕಿದ್ದ ರೈತರು, ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿಗಳು ಸ್ಥಳಕ್ಕೆ ಬರುವ ವರೆಗೂ ಕದಲುವುದಿಲ್ಲ ಎಂದು ಧರಣಿ ಕುಳಿತರು.

ಸೈಟ್ನಿಂದ ಒಂದೇ ಒಂದು ವಾಹನವೂ ಆಚೆಗೆ ತೆರಳದಂತೆ ನಿಷೇಧವೊಡ್ಡಿದರು. ತಮಗಾಗಿರುವ ಅನ್ಯಾಯಕ್ಕೆ ಪರಿಹಾರ ದೊರಕಿಸಿಕೊಡಬೇಕು. ಸರ್ವೇ ಮುಂತಾದ ಕಾರ್ಯಗಳನ್ನು ನಡೆಸಿದ ನಂತರವೇ ಕಾಮಗಾರಿ ಆರಂಭಿಸಬೇಕು ಎಂದು ಪಟ್ಟು ಹಿಡಿದು ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಡಳಿತ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಹರಿಹಾಯ್ದರು.

ಕಾನೂನು ಪಾಲಿಸದವರ ವಿರುದ್ಧ ಕ್ರಮಕ್ಕೆ ಆಗ್ರಹ: ಯಾವುದೇ ನೋಟಿಸ್‌ ಜಾರಿ ಮಾಡದೇ ಪ್ರಾಧಿಕಾರ ತಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಹೊರಟಿದ್ದು ಅಕ್ಷಮ್ಯ ಒಂದೆಡೆಯಾದರೆ, ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿಯ ದೌರ್ಜನ್ಯ ಇನ್ನೊಂದೆಡೆ. 6 (1) ನೋಟಿಫಿಕೇಷನ್‌ ಆಗದೇ ಪ್ರಾಧಿಕಾರ ತಮ್ಮ ಭೂಮಿಯ ಮೇಲೆ ಕಾಲಿಡುವಂತೆಯೂ ಇಲ್ಲ. ಕಾನೂನು ಪಾಲಿಸದ ಪ್ರಾಧಿಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಕಳೆದ ವಾರ ಪ್ರಾಧಿಕಾರದ ಯೋಜನಾಧಿಕಾರಿಗಳನ್ನು ಭೇಟಿ ಮಾಡಿದಾಗ ಸರ್ವೇ ಮಾಡಿದ ನಂತರವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದರು. ಆದರೆ, ಶುಕ್ರವಾರ ಏಕಾಏಕಿ ಯಂತ್ರಗಳನ್ನು ತಂದು ತೊಂದರೆ ಕೊಟ್ಟಿದ್ದಾರೆ. ತಮಗಾಗಿರುವ ಅನ್ಯಾಯಕ್ಕೆ ನ್ಯಾಯ ದೊರೆಯುವವರೆಗೂ ಕ್ಯಾಂಪ್‌ ಸೈಟ್ನಿಂದ ಒಂದೇ ಒಂದು ವಾಹನವನ್ನು ಹೊರಗೆ ಬಿಡೋಲ್ಲ ಎಂದು ಪಟ್ಟು ಹಿಡಿದರು.

ಯಾವ ರೈತರ ಎಷ್ಟು ಭೂಮೀ ಸ್ವಾಧೀನವಾಗಬೇಕಾಗಿದೆ. ಎಷ್ಟು ಮರಗಳು ಕತ್ತರಿಸಬೇಕಾಗಿದೆ ಎಂಬುದನ್ನು ಸರ್ವೇ ಮಾಡಿ ದಾಖಲೆ ಮಾಡಿಕೊಂಡು, ಪರಿಹಾರ ಕೊಟ್ಟು ನಂತರ ಕಾಮಗಾರಿ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನವೆಂಬರ್‌ನಲ್ಲಿ ಕಾಮಗಾರಿ ಆರಂಭ: ಪ್ರತಿಭಟನೆಯ ವಿಷಯ ತಿಳಿದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಯೋಜನಾಧಿಕಾರಿ ಶ್ರೀಧರ್‌ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಆಲಿಸಿದರು. ಅಕ್ಟೋಬರ್‌ 15ರೊಳಗೆ ಸಲ್ಲ ಬೇಕಾದ ಪರಿಹಾರದ ಮೊತ್ತವನ್ನು ಸಲ್ಲಿಸಿದ ನಂತರ ನವೆಂಬರ್‌ನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ವೆಂಕಟಸ್ವಾಮಿ, ಶ್ರೀನಿವಾಸ್‌ (ವಾಸು), ಪುಟ್ಟಸ್ವಾಮೀ ಗೌಡ, ವೆಂಕಟೇಶ್‌, ಚಿಕ್ಕವೆಂಕಟಪ್ಪ, ಬೋರೇಗೌಡ, ಶಿವಮಾದೇಗೌಡ, ತಮ್ಮಯ್ಯ, ಈರಪ್ಪ, ವೆಂಕಟಸ್ವಾಮಿ, ಸಿದ್ದಲಿಂಗಯ್ಯ, ಆನಂದ, ಮಂಚೇಗೌಡ, ಚಿಕ್ಕಮಾಧು, ಶಾರದಮ್ಮ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.