ಮಕ್ಕಳಿಗೆ ಸಂಸ್ಕೃತಿ-ಸಂಸ್ಕಾರ ಕಲಿಸಿ


Team Udayavani, Sep 16, 2019, 3:00 AM IST

makkalige

ಚಿಕ್ಕಬಳ್ಳಾಪುರ: ಇಂದಿನ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವ ಕೆಲಸ ಆಗಬೇಕಿದೆ. ಪೋಷಕರು ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚನೆ ಮಾಡಬೇಕು. ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಲು ಪಣ ತೊಡಬೇಕೆಂದು ನಿಡುಮಾಮಿಡಿ ಮಾನವ ಧರ್ಮ ಪೀಠದ ಆಡಳಿತಾಧಿಕಾರಿ ಡಾ.ಕೆ.ಶಿವಜ್ಯೋತಿ ತಿಳಿಸಿದರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಭಾನುವಾರ ಯಶ್ವಂತ್‌ ಅಕಾಡೆಮಿ ಆಫ್ ಕಲ್ಚರಲ್‌ ಫಿಲಂ ಸೈನ್ಸ್‌ ಆಂಡ್‌ ರೀಸರ್ಚ್‌ ಇನ್ಸ್‌ಟ್ಯೂಟ್‌ ಹಾಗೂ ಯಶ್ವಂತ್‌ ಸ್ಕೂಲ್‌ ಆಫ್ ಡ್ಯಾನ್ಸ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕೃಷ್ಣ, ರಾಧೆಯರ ವೇಷಭೂಷಣ ಸ್ಪರ್ಧೆ ಹಾಗೂ ಹಿರಿಯ ಕಲಾವಿದರಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಕೃಷ್ಣನ ಬಗ್ಗೆ ಬೆಳಕು ಚೆಲ್ಲಲಿ: ನಮ್ಮ ದೇಶಿಯ ಪರಂಪರೆಯ ಭಾಗವಾಗಿರುವ ಕಲೆ, ಸಂಸ್ಕೃತಿಯನ್ನು ಮರೆಯುತ್ತಿರುವ ಪರಿಣಾಮ ಇಂದು ಜನರಲ್ಲಿ ಸಮಾಧಾನ ಇಲ್ಲವಾಗಿದೆ. ಸಮಾಧಾನವನ್ನು ಹಣ ಕೊಟ್ಟು ನೋಡುವ ಪರಿಸ್ಥಿತಿ ಇಂದು ಸಮಾಜದಲ್ಲಿ ನಿರ್ಮಾಣವಾಗಿದೆ. ಸತ್ಯ, ಧರ್ಮ, ನ್ಯಾಯದ ಪರವಾಗಿ ಹೋರಾಡಿದ ಶ್ರೀಕೃಷ್ಣನ ಜೀವನ ಬಗ್ಗೆ ಇಂದಿನ ವಿದ್ಯಾರ್ಥಿ, ಯುವ ಪೀಳಿಗೆಯಲ್ಲಿ ಬೆಳಕು ಚೆಲ್ಲುವ ಅಗತ್ಯವಿದೆ ಎಂದರು.

ಸಮಸ್ಯೆಗಳಿಗೆ ನಮ್ಮಲ್ಲಿಯೇ ಪರಿಹಾರ: ಬದುಕಿನಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಬೇಕು. ದೇವರ ಮೇಲೆ ನಂಬಿಕೆ, ಭಕ್ತಿ, ಶ್ರದ್ಧೆ ಇರಬೇಕು. ಅದು ಮೌಡ್ಯದಿಂದ ಕೂಡಿಬಾರದು. ಸಮಸ್ಯೆಗಳಿಗೆ ನಮ್ಮಲ್ಲಿಯೇ ಪರಿಹಾರ ಇರುತ್ತದೆ. ಅದನ್ನು ಹುಡುಕುವ ಕೆಲಸ ಮಾಡಬೇಕು. ಪ್ರತಿಯೊಬ್ಬರು ತಾಯಿ ಹೃದಯವನ್ನು ಹೊಂದಬೇಕೆಂದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಮನುಷ್ಯನನ್ನು ಒತ್ತಡದಿಂದ ಪಾರು ಮಾಡಿ ಮನಸ್ಸನ್ನು ಹಗುರಗೊಳಿಸುತ್ತವೆ. ಇದರಿಂದ ಮನುಷ್ಯ ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.

ಸಂಸ್ಕಾರ ಬೆಳೆಸಿ: ಸಹಾಯಕ ಚಿತ್ರ ನಿರ್ದೇಶಕ ಕೃಷ್ಣ ಮಾತನಾಡಿ, ಕಲಾವಿದರು ಕೇವಲ ಮನೆಗೆ ಸೀಮಿತ ಆಗಬಾರದು. ಇಂತಹ ವೇದಿಕೆಗಳನ್ನು ಬಳಸಿಕೊಂಡು ಪ್ರತಿಭೆ ಪ್ರದರ್ಶಿಸಬೇಕು. ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಸಾಂಸ್ಕೃತಿಕವಾಗಿ ಬೆಳೆದರೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಇದರಿಂದ ಅವರ ಭವಿಷ್ಯ ಕೂಡ ಉಜ್ವಲಗೊಳ್ಳುತ್ತದೆ ಎಂದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಂಸ್ಕೃತಿಕ ರಂಗದಲ್ಲಿಯು ಸಾಕಷ್ಟು ಪೈಪೋಟಿ ಇದೆ. ಆದರೆ ಪ್ರತಿಭೆ ಇದ್ದವರಿಗೆ ಅವಕಾಶಗಳು ಸಿಗುತ್ತವೆ. ಆದ್ದರಿಂದ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಪೋಷಕರ ಬೆಂಬಲ, ಸಹಕಾರ ಮುಖ್ಯ ಎಂದರು.

ಪ್ರತಿಭೆ ಪ್ರೋತ್ಸಾಹಿಸಿ: ಕೆಪಿಸಿಸಿ ಮಹಿಳಾ ವಿಭಾಗದ ನಾಯಕಿ ಮಮತ ಮೂರ್ತಿ ಮಾತನಾಡಿ, ಮಕ್ಕಳನ್ನು ಇಂದು ಎಲ್ಲಾ ತರದಲ್ಲಿ ಬೆಳೆಸಬೇಕು. ಅವರಿಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಅವರನ್ನು ತೊಡಗಿಸಿ ಪ್ರೋತ್ಸಾಹಿಸಿದರೆ ಉತ್ತಮ ಕಲಾವಿದರಾಗಿ ರೂಪುಗೊಳ್ಳುತ್ತಾರೆ. ಸಾಂಸ್ಕೃತಿಕವಾಗಿ ಬೆಳೆದವರು ಇಂದು ಉನ್ನತ ಅವಕಾಶಗಳನ್ನು ಪಡೆದುಕೊಂಡು ತಮ್ಮ ಬದುಕನ್ನು ಸಾರ್ಥಕಪಡಿಸಿಕೊಂಡಿದ್ದಾರೆ. ಮಕ್ಕಳ ಪ್ರತಿಭೆ ಗುರುತಿಸುವ ಕೆಲಸ ಆಗಬೇಕೆಂದರು.

ಈ ಸಂದರ್ಭದಲ್ಲಿ ಯಶ್ವಂತ್‌ ಅಕಾಡೆಮಿ ಆಫ್ ಕಲ್ಚರಲ್‌ ಫಿಲಂ ಸೈನ್ಸ್‌ ಆಂಡ್‌ ರೀಸರ್ಚ್‌ ಇನ್ಸ್‌ಟ್ಯೂಟ್‌ ಹಾಗೂ ಯಶ್ವಂತ್‌ ಸ್ಕೂಲ್‌ ಆಫ್ ಡ್ಯಾನ್ಸ್‌ ಅಧ್ಯಕ್ಷ ಶ್ರೀನಿವಾಸ್‌, ಕಾರ್ಯದರ್ಶಿ ರಾಮಲಕ್ಷ್ಮಮ್ಮ, ನಿರ್ದೇಶಕರಾದ ಎನ್‌.ನಾರಾಯಣಸ್ವಾಮಿ, ಮುಖಂಡರಾದ ಗೋವಿಂದಪ್ಪ, ಮುನಿಸ್ವಾಮಿ, ನಸರುದ್ದೀನ್‌, ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಗಮನ ಸೆಳೆದ ಕೃಷ್ಣ-ರಾಧೆಯರು: ಕಾರ್ಯಕ್ರಮದಲ್ಲಿ ನೂರಾರು ಪುಟಾಣಿ ಮಕ್ಕಳು ಶ್ರೀ ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಪ್ರತಿಭೆ ಪ್ರದರ್ಶಿಸಿ ಗಮನ ಸೆಳೆದರು. ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಈ ವೇಳೆ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರನ್ನು ಗುರುತಿಸಿ ಯಶ್ವಂತ್‌ ಅಕಾಡೆಮಿ ಆಫ್ ಕಲ್ಚರಲ್‌ ಫಿಲಂ ಸೈನ್ಸ್‌ ಅಂಡ್‌ ರಿಸರ್ಚ್‌ ಇನ್ಸ್‌ಟ್ಯೂಟ್‌ ಹಾಗೂ ಯಶ್ವಂತ್‌ ಸ್ಕೂಲ್‌ ಆಫ್ ಡ್ಯಾನ್ಸ್‌ ವತಿಯಿಂದ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.