ಅಪಾಯದಲ್ಲಿದೆ ಕಾಗಿಣಾ ಸೇತುವೆ

ಭಾರಿ ವಾಹನಗಳ ಭಾರ ತಾಳದೆ ಕಳೆದುಕೊಂಡಿದೆ ಶಕ್ತಿ •ಮುರಿದು ಬಿದ್ದಿವೆ ರಕ್ಷಣಾ ಕಂಬಗಳು

Team Udayavani, Sep 16, 2019, 11:08 AM IST

Sepctember-1

ಮಡಿವಾಳಪ್ಪ ಹೇರೂರ
ವಾಡಿ:
ಕಾಗಿಣಾ ನದಿಗೆ ನಿರ್ಮಿಸಲಾಗಿರುವ ಸೇತುವೆ ಈಗ ಅಪಾಯದ ಅಂಚಿನಲ್ಲಿದೆ. ವಾಹನಗಳ ನಿರಂತರ ಅಪಘಾತ ಘಟನೆಗಳಿಗೆ ತುತ್ತಾಗಿ ಸೇತುವೆ ಮೇಲಿನ ಸುರಕ್ಷಾ ಕಂಬಗಳು ಪುಡಿಪುಡಿಯಾಗಿವೆ. ಸೇತುವೆಯತ್ತ ಬರುವ ವಾಹನಗಳಿಗೆ ಸ್ವಾಗತ ಕೋರಲು ಹೆಜ್ಜೆ-ಹೆಜ್ಜೆಗೂ ಕಂದಕಗಳು ಸೃಷ್ಟಿಯಾಗಿವೆ. ಇಕ್ಕಟ್ಟಾದ ಸೇತುವೆ ಮೇಲೆ ಹಲವಾತು ದುರ್ಘ‌ಟನೆಗಳಿಗೆ ಸಂಭವಿಸಿವೆ.

ಕಲಬುರಗಿ-ಯಾದಗಿರಿ ನಡುವಿನ ರಾಜ್ಯ ಹೆದ್ದಾರಿ ಈಗ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆಯಾಗಿದೆ. ಕೇಂದ್ರ ಮಾಜಿ ಸಚಿವ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಇಚ್ಛಾಶಕ್ತಿಯಿಂದ ಸಾರಿಗೆ ಸೌಲಭ್ಯ ಹಿಂದೆಂದಿಗಿಂತಲೂ ಉತ್ತಮವಾಗಿದೆ. ಬಸ್‌ ಸಂಚಾರವೇ ಇಲ್ಲವಾಗಿದ್ದ ಈ ರಸ್ತೆಯಲ್ಲೀಗ ಪ್ರತಿ 15 ನಿಮಿಷಕ್ಕೊಂದು ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳು ಹಾಗೂ ಪ್ರತಿ ನಿಮಿಷಕ್ಕೊಂದು ಸಿಮೆಂಟ್ ಲಾರಿ ಸಾಗುವುದನ್ನು ಕಾಣಬಹುದಾಗಿದೆ.

ರಸ್ತೆ ಅಭಿವೃದ್ಧಿಯಾಗಿದೆ ಆದರೆ ಶಿಥಿಲ ಸೇತುವೆ ಅಪಾಯ ಆಹ್ವಾನಿಸುತ್ತಿದ್ದರೂ ಯಾರೂ ಕೇಳುವವರು ಇಲ್ಲದಂತಾಗಿದೆ.

ವಾಡಿ ಮತ್ತು ಶಹಾಬಾದ ನಗರಗಳ ಮಧ್ಯೆ ಸಂಪರ್ಕ ಕೊಂಡಿಯಾಗಿರುವ ಕಾಗಿಣಾ ಸೇತುವೆ ಶಿಥಿಲಾವಸ್ಥೆಗೆ ತಲುಪಿದೆ. ವಾಡಿ ಎಸಿಸಿ ಕಂಪನಿ, ಚಿತ್ತಾಪುರದ ಒರಿಯಂಟ್ ಸಿಮೆಂಟ್ ಘಟಕ ಹಾಗೂ ಸುಮಾರು 400ಕ್ಕೂ ಹೆಚ್ಚು ಕಲ್ಲು ಗಣಿಗಳು ಕಾರ್ಯನಿರ್ವಹಿಸುತ್ತಿವೆ. ಸಿಮೆಂಟ್ ಸೇರಿದಂತೆ ಪರ್ಷಿ ಕಲ್ಲುಗಳು ಹೊರ ರಾಜ್ಯಗಳಿಗೆ ರಫ್ತಾಗುತ್ತವೆ. ಗೂಡ್ಸ್‌ ಲಾರಿಗಳ ಓಡಾಟಕ್ಕೇನು ಲೆಕ್ಕವಿಲ್ಲ. ಭಾರಿ ವಾಹನಗಳ ಭಾರ ತಾಳದೆ ಕಾಗಿಣಾ ಸೇತುವೆ ತನ್ನ ಶಕ್ತಿ ಸಾಮರ್ಥ್ಯ ಕಳೆದುಕೊಂಡಿರುವ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.

ಭಾರಿ ವಾಹನಗಳ ಡಿಕ್ಕಿಯಿಂದ ಸೇತುವೆ ಮೇಲೆ ಎರಡೂ ಬದಿಯಲ್ಲಿ ಅಳವಡಿಸಲಾಗಿರುವ ಕಾಂಕ್ರಿಟ್ ರಕ್ಷಣಾ ಗೋಡೆಗಳು ಮುರಿದು ಬಿದ್ದಿವೆ. ಜೀವ ಕೈಯಲ್ಲಿ ಹಿಡಿದುಕೊಂಡು ಸೇತುವೆ ದಾಟಬೇಕಾದ ಭೀತಿ ಎದುರಾಗಿದೆ.

ಇತ್ತ ಚಿತ್ತ ಹರಿಸುವರೇ ಸಂಸದ ಜಾಧವ
ಗ್ರಾಮೀಣ ರಸ್ತೆಯಂತಿದ್ದ ಹದಗೆಟ್ಟ ಕಲಬುರಗಿ-ಗುತ್ತಿ ನಡುವಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸಿರುವ ಮಾಜಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಕಿರಿದಾದ, ಯಮಸ್ವರೂಪಿ ಕಾಗಿಣಾ ಸೇತುವೆ ಅಗಲೀಕರಣ ಮಾಡಿಸುವಲ್ಲಿ ಮರೆತಂತೆ ಕಾಣುತ್ತಿದೆ. ಈಗ ಸಂಸದ ಡಾ| ಉಮೇಶ ಜಾಧವ ಕಾಗಿಣಾ ಸೇತುವೆ ಅಗಲೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವರೇ ಎಂಬ ಪ್ರಶ್ನೆ ಎದುರಾಗಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.