ಉನ್ನತ ವ್ಯಾಸಂಗಕ್ಕೆ ಕೌಶಲ್ಯ ಅಗತ್ಯ


Team Udayavani, Sep 16, 2019, 3:35 PM IST

tk-tdy-1

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು.

ತುಮಕೂರು: ಸ್ಪರ್ಧಾತ್ಮಕ ಯುಗದಲ್ಲಿ ಸಾಂಪ್ರದಾಯಿಕ ಶಿಕ್ಷಣ ಉನ್ನತ ವ್ಯಾಸಂಗದ ನೆರವಿಗೆ ಬರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದರಷ್ಟೇ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ನಗರದ ಸಿದ್ಧಗಂಗಾ ಮಠದ ಉದ್ದಾನೇಶ್ವರ ಸಮು ದಾಯ ಭವನದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ, ಹಾಗೂ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಅರ್ಥ ಮಾಡಿಕೊಂಡು ಓದಲು ಕಲಿಸಿ: ಸಾಂಪ್ರದಾ ಯಿಕ ಶಿಕ್ಷಣದಲ್ಲಿ ಉತ್ತಮ ಅಂಕಗಳಿಸಿದವರು, ಸಿಇಟಿ, ಕಾಮೆಡ್‌-ಕೆ, ನೀಟ್‌ನಂತಹ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಆಗುವುದಿಲ್ಲ. ಶಿಕ್ಷಣದೊಂದಿಗೆ ಕೌಶಲ್ಯವೂ ಮುಖ್ಯ. ಮಕ್ಕಳು ಅಂಕಗಳಿಗೆ ಓದುವುದು ಬಿಟ್ಟು, ಅರ್ಥ ಮಾಡಿಕೊಂಡು ಓದುವುದನ್ನು ಕಲಿಸ ಬೇಕು. ಶಿಕ್ಷಕರೂ ಮಕ್ಕಳಿಗೆ ಅರ್ಥೈಸುವ ಶಕ್ತಿ ಬೆಳೆಸಿದಾಗ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸ ಬಹುದು ಹೊರತು, ಹೆಚ್ಚು ಅಂಕ ಗಳಿಸುವುದರಿಂದಲ್ಲ ಎಂದು ಕಿವಿಮಾತು ಹೇಳಿದರು.

ಅಂಕ ಪಡೆದುಕೊಳ್ಳುವುದಷ್ಟೇ ಪ್ರತಿಭೆ ಅಲ್ಲ. ಮಕ್ಕಳಿಗಿಂತ ಶಿಕ್ಷಕರು ಹೆಚ್ಚಾಗಿ ಓದಬೇಕಿದೆ. ಏನೂ ತಯಾರಿ ಮಾಡಿಕೊಳ್ಳದೇ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೋರುವ ಗುಣ ಬಿಎಂಶ್ರೀಯವರಲ್ಲಿತ್ತು. ಅಂತಹ ಮನೋಭಾವನೆ ಇಂದಿನ ಶಿಕ್ಷಕರಲ್ಲಿ ಇಲ್ಲ. ವಿದ್ಯಾರ್ಥಿ ಗಳ ಬುದ್ಧಿಮತ್ತೆಗೆ ಅಡ್ಡಿಯಾಗಲಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದ‌ು ಹೇಳಿದರು.ವಿದ್ಯಾರ್ಥಿ ಗಳಲ್ಲಿ ಪ್ರಶ್ನಿಸುವ ಮನೋಭಾವ ದೊಂದಿಗೆ, ಮಕ್ಕಳಲ್ಲಿ ಕನಸು ಕಟ್ಟುವ ಕೆಲಸ ಶಿಕ್ಷಕರು ಮಾಡಬೇಕಿದೆ. ಮಗು ವಿನ ಅಭಿರುಚಿ ಗಮನಿಸಿ ಅದಕ್ಕೆ ತಕ್ಕಂತೆ ಬೆಳೆಸುವು ದರಿಂದ ಮಾತ್ರ ಮಕ್ಕಳು ದೇಶದ ಆಸ್ತಿಯಾಗಿ ರೂಪು ಗೊಳ್ಳುತ್ತಾರೆ ಎಂಬುದನ್ನು ಪೋಷ ಕರು ಮತ್ತು ಶಿಕ್ಷ ಕರು ಅರಿಯುವುದು ಅವಶ್ಯಕ ಎಂದು ಹೇಳಿದರು.

ಒತ್ತಡದಲ್ಲಿ ಮಕ್ಕಳ ನಿರ್ಲಕ್ಷಿಸದಿರಿ: ಮಕ್ಕಳಿಗೆ ಪೋಷ ಕರ ಪ್ರೀತಿ ಮತ್ತು ಪ್ರೋತ್ಸಾಹ ಅವಶ್ಯಕವಾಗಿದ್ದು, ಮಕ್ಕಳೊಂದಿಗೆ ಪೋಷಕರು ಸಮಯ ಕಳೆಯಬೇಕು. ಅವರಿಗೆ ಪ್ರೋತ್ಸಾಹ ನೀಡಬೇಕು. ಧಾರವಾಹಿ ಮತ್ತು ಕೆಲಸದ ಒತ್ತಡದಲ್ಲಿ ಮಕ್ಕಳನ್ನು ನಿರ್ಲಕ್ಷಿಸಬಾರದು. ಮಕ್ಕಳ ಭಾರವನ್ನೆಲ್ಲ ಶಿಕ್ಷಕರಿಗೆ ವಹಿಸುವುದು ಬಿಟ್ಟು ಪೋಷಕರು ಶಿಕ್ಷಣದ ಕಡೆ ಗಮನಹರಿಸಬೇಕು ಎಂದು ನುಡಿದರು.

ಮಕ್ಕಳು ಶಿಕ್ಷಕರನ್ನು ಅನುಕರಣೆ ಮಾಡುವುದರಿಂದ ಶಿಕ್ಷಕರು ಉತ್ತಮ ನಡವಳಿಕೆ ತೋರಬೇಕು. ಅವರಲ್ಲಿ ಭವಿಷ್ಯ ಕಟ್ಟಿಕೊಳ್ಳುವ ಶಕ್ತಿ ಹಾಗೂ ದಾರಿ ಶಿಕ್ಷಕರು ತೋರಬೇಕು. ಮಕ್ಕಳ ತಪ್ಪುಗಳನ್ನು ಶಿಕ್ಷಕರು ಅವರಿಗೆ ತಿಳಿಸಿ ಪ್ರೀತಿಯಿಂದ ತಿದ್ದಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಜೆ.ಬಿ. ಜ್ಯೋತಿಗಣೇಶ್‌, ಮಾಧುಸ್ವಾಮಿ ಮತ್ತು ಸುರೇಶ್‌ ಕುಮಾರ್‌ ಅವರಿಂದ ಶಿಕ್ಷಕರ ಸಮಸ್ಯೆಗೆ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದರು.

ಬಿಜೆಪಿ ಮುಖಂಡ ಪಿ.ಆರ್‌. ಬಸವರಾಜು ಮಾತ ನಾಡಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮಾಡುವ ಮೂಲಕ ಅವರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸುವುದು ಉತ್ತಮ ಕೆಲಸ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಎಚ್. ಹುಚ್ಚಯ್ಯ, ಬಾಪೂಜಿ ಶಿಕ್ಷಣ ಸಂಸ್ಥೆಯ ಎಂ.ಬಸವಯ್ಯ, ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವೃಷಭೇಂದ್ರ ಸ್ವಾಮಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್‌, ಮಾಧ್ಯಮಿಕ ಶಿಕ್ಷಕರ ಸಂಘದ ಮುಖಂಡ ರಾದ ಕೆ.ಎಸ್‌. ಉಮಾಮಹೇಶ್‌, ಜೆ.ಎಸ್‌. ರೇಣುಕಾ ನಂದ್‌, ಟಿ.ಎಂ. ರಾಘವೇಂದ್ರ, ಎಚ್. ಶಿವರಾಮು ಕೆ.ಎಸ್‌. ಸಿದ್ದಲಿಂಗಪ್ಪ, ದೇವರಾಜಯ್ಯ, ಕೃಷ್ಣಮೂರ್ತಿ, ಮಂಜುನಾಥ್‌, ಮಾದಾಪುರ ಶಿವಪ್ಪ, ಟಿ. ತ್ರಿವೇಣಿ, ಎಚ್. ಶಿವರಾಮು, ಅಮರಾವತಿ ದ್ರೇಹಾಚಾರ್‌, ಕೆ. ಪ್ರಕಾಶ್‌ ಇತರರಿದ್ದರು. ಶಿಕ್ಷಕರಿಗೆ ಸನ್ಮಾನ ಹಾಗೂ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.