“ಬಂದರು ಅಧ್ಯಯನಕ್ಕೆ 3 ರಾಜ್ಯಗಳಿಗೆ ತಂಡ’


Team Udayavani, Sep 17, 2019, 5:07 AM IST

u-37

ಮಂಗಳೂರು: ಬಂದರು, ಒಳನಾಡು ಮತ್ತು ಮೀನುಗಾರಿಕೆ ಯೋಜನೆ ಅನುಷ್ಠಾನ ಅಧ್ಯಯನಕ್ಕೆ ರಾಜ್ಯದ ತಜ್ಞರ ತಂಡವನ್ನು ಶೀಘ್ರದಲ್ಲೇ ಗುಜರಾತ್‌, ತ.ನಾಡು ಮತ್ತು ಕೇರಳಕ್ಕೆ ಕಳುಹಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸೋಮವಾರ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು. ತಂಡದ ವರದಿ ಆಧಾರದಲ್ಲಿ ರಾಜ್ಯ ಕರಾವಳಿ ಅಭಿ ವೃದ್ಧಿಗೆ ಉದ್ದೇಶಿಸಲಾಗಿದೆ ಎಂದರು. ರಾಜ್ಯದಲ್ಲಿ ಮೆರಿಟೈಂ ಬೋರ್ಡ್‌ ಅಸ್ತಿತ್ವಕ್ಕೆ ಬಂದಿದ್ದು, ಶೀಘ್ರವೇ ಅಧ್ಯಕ್ಷರು, ಅಧಿಕಾರಿಗಳನ್ನು ನೇಮಿಸ ಲಾಗುವುದು. ಕೇಂದ್ರ ನೆರವು ಮತ್ತು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಬಂದರುಗಳನ್ನು ಅಭಿವೃದ್ಧಿ ಪಡಿಸ ಲಾಗುವುದು ಎಂದರು.

ಬಂದರು ವಿಸ್ತರಣೆಗೆ ಹೆಚ್ಚುವರಿ ಅಗತ್ಯ
ಮಂಗಳೂರು ಮೀನುಗಾರಿಕೆ ಬಂದರಿನ 3ನೇ ಹಂತದ ವಿಸ್ತರಣೆ ಪೂರ್ಣಗೊಳಿಸಲು ಇನ್ನೂ 28 ಕೋ. ರೂ. ಅಗತ್ಯವಿದೆ ಎಂದು ಅಧಿಕಾರಿ ಗಳು ತಿಳಿಸಿದರು. 1 ಮತ್ತು 2ನೇ ಹಂತದ ಜೆಟ್ಟಿಯಲ್ಲಿ ಹೂಳು ತುಂಬಿ ದೋಣಿ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಈ ಕಾಮಗಾರಿ ತುರ್ತಾಗಿ ಆಗಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ತುರ್ತು ಕಾಮಗಾರಿಗಳಿಗೆ ಪ್ರಸ್ತಾಪನೆ ಸಲ್ಲಿಸಿ; ಅನುದಾನ ಬಿಡುಗಡೆಗೆ ಪ್ರಯತ್ನಿಸುವೆ ಎಂದರು.

ಬಂದರು ಇಲಾಖೆಯ ಸ.ಕಾ.ಪಾ. ಎಂಜಿನಿಯರ್‌ ಸುಜನ್‌ ರಾವ್‌ ಮಾತನಾಡಿ, ಸಾಗರಮಾಲಾ ಅಡಿ ಬೆಂಗ್ರೆಯಲ್ಲಿ 350 ಮೀ. ಉದ್ದದ ಬರ್ತ್‌ ನಿರ್ಮಾಣಕ್ಕೆ ಉದ್ದೇಶಿಸ ಲಾಗಿದೆ. ಒಟ್ಟು 65 ಕೋ. ರೂ.ಗಳಲ್ಲಿ 25 ಕೋ.ರೂ. ಕೇಂದ್ರ, 40 ಕೋ. ರೂ. ರಾಜ್ಯ ಸರಕಾರ ನೀಡಲಿದೆ. ಈಗಾಗಲೇ 25 ಕೋ. ರೂ. ಬಿಡುಗಡೆ ಆಗಿದೆ ಎಂದರು. ಬೆಂಗ್ರೆಯಲ್ಲಿ ಕೃತಕ ರೇವು ನಿರ್ಮಾಣಕ್ಕೆ 3.4 ಕೋ.ರೂ. ವೆಚ್ಚದ ಕಾಮಗಾರಿ ತಾಂತ್ರಿಕ ಮಂಜೂರಾತಿ ಹಂತದಲ್ಲಿದೆ. ಡಿಸೆಂಬರ್‌ನಲ್ಲಿ ಕಾಮಗಾರಿ ಆರಂಭಿಸ ಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಶಾಸಕರಾದ ಸಂಜೀವ ಮಠಂದೂರು, ರಾಜೇಶ್‌ ನಾಯ್ಕ, ಡಿಸಿ ಸಿಂಧೂ ಬಿ. ರೂಪೇಶ್‌ ಉಪಸ್ಥಿತರಿದ್ದರು.

ಕುಕ್ಕೆ ಕ್ಷೇತ್ರ: ಪ್ರಾಧಿಕಾರಕ್ಕೆ ಒಲವು
ಅಪರ ಜಿಲ್ಲಾಧಿಕಾರಿ ರೂಪಾ ಮಾತನಾಡಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಾಧಿಕಾರ ರಚಿಸುವುದು ಉತ್ತಮ. ಮುಖ್ಯಮಂತ್ರಿಯೇ ಅಧ್ಯಕ್ಷರಾಗಿದ್ದು, ಕೆಎಎಸ್‌ ದರ್ಜೆಯ ಅಧಿಕಾರಿಯನ್ನು ನೇಮಿಸಿದರೆ ಕಾಮಗಾರಿ ಅನುಷ್ಠಾನ ಸುಲಭವಾಗುತ್ತದೆ. ಹಣಕಾಸು ನಿರ್ವಹಣೆಯೂ ಸುಲಲಿತವಾಗುವುದು ಎಂದರು. ಈಗಾಗಲೇ ಆ ಚಿಂತನೆಯಿದ್ದು, ಮತ್ತೂಮ್ಮೆ ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದರು.

ಸಣ್ಣ ದೇಗುಲಗಳಿಗೆ ಸಹಕಾರ; ಅವಕಾಶವಿಲ್ಲ!
ಮುಜರಾಯಿ ಇಲಾಖೆ ಅಧಿಕಾರಿಗಳು ಮಾತನಾಡಿ, ಆರ್ಥಿಕವಾಗಿ ಸದೃಢ ಮುಜರಾಯಿ ದೇವಾಲಯಗಳಿಂದ ಸಣ್ಣ ದೇವಾಲಯಗಳಿಗೆ ದೇಣಿಗೆ ಅಥವಾ ಸಂಘ-ಸಂಸ್ಥೆಗಳಿಗೆ ನೆರವಿನ ಬೇಡಿಕೆ ಹೆಚ್ಚುತ್ತಿದ್ದು, ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಜಿಲ್ಲಾಧಿಕಾರಿ ಅನುಮತಿ ಪಡೆದು ನೀಡಲಾಗುತ್ತಿದೆ. ಸರಕಾರವೇ ಸೂಕ್ತ ಮಾರ್ಗಸೂಚಿ ರಚಿಸಿದರೆ ಅನುಕೂಲ ಎಂದರು.

ಟಾಪ್ ನ್ಯೂಸ್

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.