ಕೆವೈಸಿ ದೃಢೀಕರಣ: ಪಡಿತರ ವಿತರಣೆಗೆ ನಾನಾ ಸಮಸ್ಯೆಗಳು

ಮುಗಿಯದ ಸರ್ವರ್‌ ಗೋಳು ,ದೃಢೀಕರಣಕ್ಕೆ 2 ತಿಂಗಳ ಕಾಲಮಿತಿ

Team Udayavani, Sep 17, 2019, 5:29 AM IST

KYC

ಸಾಂದರ್ಭಿಕ ಚಿತ್ರ

ಉಡುಪಿ: ಆಹಾರ ನಾಗರಿಕ ಇಲಾಖೆಯ ಕೆವೈಸಿ ದೃಢೀಕರಣಕ್ಕೆ ಆದೇಶ ನೀಡುತ್ತಿದಂತೆ ಸರ್ವರ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಸಾರ್ವ ಜನಿಕರು ಪಡಿತರ ಪಡೆದುಕೊಳ್ಳಲು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಕಳೆದ ಮೂರು ದಿನದಿಂದ ಸರ್ವರ್‌ ಪದೇ ಪದೇ ಸಂಪರ್ಕವನ್ನು ಕಡಿದುಕೊಳ್ಳುತ್ತಿದ್ದು, ಇದರಿಂದಾಗಿ ಸಿಬಂದಿ ಗಂಟೆಗೆ ಮೂರು ಜನರಿಗೆ ಪಡಿತರ ವಿತರಿಸುವುದೇ ದೊಡ್ಡ ಸವಾಲಿನ ಕೆಲಸವಾಗಿದೆ.

ಕಾರಣವೇನು?
ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್‌ ಪದ್ಧತಿ ಅಳವಡಿಸಿ ವರ್ಷ ಕಳೆದಿದೆ. ಅಂದಿನಿಂದ ಇಂದಿನ ವರೆಗೆ ಪಡಿತರ ವಿತರಣೆಯಲ್ಲಿ ಒಂದಲ್ಲ ಒಂದು ಸಮಸ್ಯೆಯಾಗುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಕಾಡುತ್ತಿರುವ ಸರ್ವರ್‌ ಸಮಸ್ಯೆಗೆ ಇನ್ನೂ ಮುಕ್ತಿ ದೊರಕಿಲ್ಲ. ಇದೀಗ ಪಡಿತರ ಸಾಮಗ್ರಿ ವಿತರಣೆಯಾಗುವ ವೆಬ್‌ಸೈಟ್‌ನಲ್ಲಿ ಕೆವೈಸಿ ತಂತ್ರಾಂಶ ಅಳವಡಿಸಿದ ಬಳಿಕ ಸರ್ವರ್‌ ಪದೇ ಪದೇ ತನ್ನ ಸಂಪರ್ಕ ಕಳೆದುಕೊಳ್ಳುತ್ತಿದೆ. ವಿವಿಧ ಭಾಗದಲ್ಲಿ ಕೆವೈಸಿ ದೃಢೀಕರಣವಾಗುತ್ತಿರುವುದರಿಂದ ಪಡಿತರ ವಿತರಣೆ ಸಮಸ್ಯೆಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅಡಕತ್ತರಿಯಲ್ಲಿ ಸಿಬಂದಿ
ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಕೆವೈಸಿ ದೃಢೀಕರಣ ಪ್ರಾರಂಭವಾಗಿಲ್ಲ. ಕೆವೈಸಿ ದೃಢೀಕರಣ ಪಡಿತರ ಅಂಗಡಿಗಳು ಮಾಡಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ನೆಟವರ್ಕ್‌ ಸಮಸ್ಯೆಯಿಂದ ಕೆವೈಸಿ ದೃಢೀಕರಣ ತಡವಾದರೂ ಸಿಬಂದಿಗಳು ಸಾರ್ವಜನಿಕರಿಂದ ಬೈಗುಳ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ನವೆಂಬರ್‌ ಅಂತ್ಯಕ್ಕೆ ಇ- ಕೆವೈಸಿ
ಆಹಾರ ಇಲಾಖೆಯ ನೂತನ ನಿರ್ದೇಶನದಂತೆ ಪಡಿತರ ಚೀಟಿಯ ಇ -ಕೆವೈಸಿ ದೃಢೀಕರಣ ಮತ್ತೆ ಪ್ರಾರಂಭಿಸಿದೆ. ಹಿಂದೆ ಜೂನ್‌ನಲ್ಲಿ ಕೆವೈಸಿ ಧೃಡೀಕರಣಕ್ಕೆ ಆದೇಶ ನೀಡಿದರೂ ವಿವಿಧ ಕಾರಣದಿಂದ ನೋಂದಾವಣಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಎಪಿಎಲ್‌, ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರು ನವೆಂಬರ್‌ ತಿಂಗಳಿನ ಒಳಗೆ ನೋಂದಾಯಿಸಲು ಗಡುವು ನೀಡಿದೆ. ಈ ಬಾರಿ ಕೆವೈಸಿ ದೃಢೀಕರಣ ಮಾಡದಿರುವವರ ಪಡಿತರ ಸಾಮಗ್ರಿ ತಡೆಹಿಡಿಯಲಾಗುತ್ತದೆ.

ಸರ್ವರ್‌ ಸಮಸ್ಯೆಯಿಲ್ಲ!
ಸರ್ವರ್‌ನಲ್ಲಿ ಯಾವುದೇ ಸಮಸ್ಯೆಯಿಲ್ಲ. ಪಡಿತರ ವಿತರಣೆ ವೆಬ್‌ಸೈಟ್‌ನಲ್ಲಿ ಅನುಸರಿಸ ಬೇಕಾದ ನಿಯಮಗಳ ಸಿಬಂದಿಗೆ ಸ್ಪಷ್ಟವಾಗಿ ಮಾಹಿತಿ ನೀಡಲಾಗಿದೆ. ಅವುಗಳನ್ನು ಅನುಸರಿ ಸಿದರೆ ಸರ್ವರ್‌ ಸಮಸ್ಯೆ ಎದುರಾಗುವುದಿಲ್ಲ.
-ಸುನಂದಾ, ಸಹಾಯಕ ನಿರ್ದೇಶಕಿ ಆಹಾರ, ನಾಗರಿಕ ಪೂರೈಕೆ ಇಲಾಖೆ. ದ.ಕ.

ಕೆವೈಸಿ ದೃಢೀಕರಣ: ಸಮಸ್ಯೆಗಳಿಗೆ ಕಾರಣ
ಕೆವೈಸಿ ದೃಢೀಕರಣ ಹಾಗೂ ಪಡಿತರ ವಿತರಣೆ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು Any desk ಮೂಲಕ ಸರಿಪಡಿಸಲಾಗುತ್ತಿದೆ.
-ಕಿರಣ್‌, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿಬಂದಿ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.