ಕಾರಜೋಳ ಎದುರು ಸಾಲು ಸಾಲು ಸವಾಲು

•ನೆರೆ-ಬರದ ಮಧ್ಯೆ ಯುಕೆಪಿ ಸಮಸ್ಯೆ•ಹಾರಿಕೆ ಉತ್ತರ ಕೊಡದೇ ನಿಭಾಯಿಸಬೇಕಿದೆ ಜವಾಬ್ದಾರಿ

Team Udayavani, Sep 17, 2019, 11:26 AM IST

bk-tdy-1

ಬಾಗಲಕೋಟೆ: ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ, ಬಿಜೆಪಿಯ ಹಿರಿಯ ದಲಿತ ನಾಯಕ ಗೋವಿಂದ ಕಾರಜೋಳರಿಗೆ ರಾಜ್ಯದ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿದ್ದು, ಇದೀಗ ಜಿಲ್ಲೆಯ ಉಸ್ತುವಾರಿ ಸಚಿವರ ಹೊಣೆಯನ್ನೂ ವಹಿಸಲಾಗಿದೆ. ಹೀಗಾಗಿ ಕಾರಜೋಳರ ಎದುರು ಸಾಲು ಸಾಲು ಸವಾಲುಗಳಿದ್ದು, ಹೀಗಾಗಿ ಅವರು ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲಿ ಎಂಬುದು ಅವರ ಅಭಿಮಾನಿಗಳ ಒತ್ತಾಸೆ.

ಹಿಂದೆ ಇದೇ ಕಾರಜೋಳರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ಭೀಕರ ಪ್ರವಾಹ ಎದುರಾಗಿತ್ತು. ಇದೀಗ ಅವರೇ ಉಸ್ತುವಾರಿಯಾಗಿದ್ದು, ಪುನಃ ದೊಡ್ಡ ಮಟ್ಟದ ಪ್ರವಾಹ ಬಂದಿದೆ. ಈ ಬಾರಿ ಬರೋಬ್ಬರಿ 195 ಹಳ್ಳಿಗಳು, ಅಕ್ಷರಶಃ ಮುಳುಗಿದ್ದು, ಜನರು ಪುನರ್‌ ಬದುಕು ಕಟ್ಟಿಕೊಳ್ಳಲು ಹೈರಾಣಾಗುತ್ತಿದ್ದಾರೆ. ಇದೆಲ್ಲದರ ಮಧ್ಯೆ ಹತ್ತು ಹಲವು ಸಮಸ್ಯೆಗಳಿಗೆ ಜಿಲ್ಲೆಯಲ್ಲಿವೆ. ಕನಿಷ್ಠ ಮೂಲ ಸೌಲಭ್ಯಗಳಿಲ್ಲದ ಆಸರೆ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಬೇಕಿದೆ. ನೆರೆ-ಬರದಿಂದ ನಲುಗಿದ ಜಿಲ್ಲೆಯ ಜನರ ಬದುಕು, ಮೇಲಕ್ಕೆತ್ತುವ ದೊಡ್ಡ ಹೊಣೆಗಾರಿಕೆ ಗೋವಿಂದ ಕಾರಜೋಳ ಅವರ ಮೇಲಿದೆ.

ಹೇಳಿದ್ದೇ ಮಾಡಿದರೆ ಸಾಕು: ವಿರೋಧ ಪಕ್ಷದಲ್ಲಿದ್ದಾಗ ಹೋರಾಟ ಮಾಡಿ, ಒತ್ತಾಯಿಸುವುದು ಸರಳ. ಅಧಿಕಾರ ಸಿಕ್ಕಾಗ ಆ ಹೋರಾಟ-ಒತ್ತಾಯ ಮರೆಯದೇ, ತಾವೇ ಸರ್ಕಾರಕ್ಕೆ ಕೊಟ್ಟ ಸಲಹೆಯಂತೆ ನಡೆದುಕೊಳ್ಳಬೇಕು ಎಂಬುದು ಹಲವರ ಅಭಿಪ್ರಾಯ. ಕಾಂಗ್ರೆಸ್‌ ಮತ್ತು ಮೈತ್ರಿ ಸರ್ಕಾರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಭೂಮಿ ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆ ನೀರಾವರಿಗೆ 40ಲಕ್ಷ, ಖುಷ್ಕಿ ಭೂಮಿಗೆ 25ಲಕ್ಷ ಪರಿಹಾರ ಕೊಡಬೇಕೆಂದು ಇದೇ ಕಾರಜೋಳರು ಡಿಸಿ ಕಚೇರಿ ಎದುರು ಹೋರಾಟ ಮಾಡಿದ್ದರು. ಆಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಖಂಡಿತಾ ನಾವು ರೈತರಿಗೆ ಈ ಪರಿಹಾರ ಕೊಡುತ್ತೇವೆಂದು ಹೇಳಿದ್ದರು.

ನೀವೇ ಹೇಳಿದ್ದು ನಡೆಸಿಕೊಡಿ: ಪ್ರಮುಖವಾಗಿ ಮಹದಾಯಿ ನದಿ ಜೋಡಣೆ ಯೋಜನೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಧ್ವನಿಯಲ್ಲಿ ಕೂಗಿದ್ದರು. ಈಗ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ ವಿಳಂಬ ಮಾಡದೇ ಮಹದಾಯಿ ನದಿ ಜೋಡಣೆ ಕೈಗೊಂಡರೆ, ಬಾದಾಮಿ ತಾಲೂಕಿನ ಕುಡಿಯುವ ನೀರಿನ ಬವಣೆ ನೀಗುತ್ತದೆ ಎಂಬುದು ಹಲವರ ಅಭಿಪ್ರಾಯ.

98 ಗ್ರಾಮಸ್ಥರ ಕೈ ಬಿಡದಿರಿ: ಕಳೆದ ತಿಂಗಳು ಜಿಲ್ಲೆಗೆ ಅಪ್ಪಳಿಸಿದ ಪ್ರವಾಹದಿಂದ 195 ಗ್ರಾಮಗಳ ಜನರು, ತೀವ್ರ ಸಂಕಷ್ಟದಲ್ಲಿದ್ದಾರೆ. ಇದರಲ್ಲಿ 40 ಗ್ರಾಮಗಳು ಆಸರೆ ಯೋಜನೆಯಡಿ, 46 ಗ್ರಾಮಗಳು ಯುಕೆಪಿಯಡಿ ಹಾಗೂ 12 ಗ್ರಾಮಗಳು ನಾರಾಯಣಪುರ ಹಿನ್ನೀರಿನಡಿ ಪರಿಹಾರ ಪಡೆದ ಗ್ರಾಮಗಳಾಗಿವೆ. ಹೀಗಾಗಿ ನೆರೆ ಪೀಡಿತ 195 ಗ್ರಾಮಗಳಲ್ಲಿ ಈಗ ಮನೆ ಹಾನಿ ಅಥವಾ ಬೆಳೆ ಹಾನಿಗೆ ಪರಿಹಾರ ನೀಡಲು 98 ಗ್ರಾಮ ಕೈಬಿಡಲಾಗಿದೆ. ಒಂದು ವೇಳೆ ಕೈಬಿಟ್ಟರೆ, ಆ ಗ್ರಾಮಗಳ ಜನರ ಬದುಕು ಶೋಚನೀಯವಾಗಲಿದೆ. ಮಾನವೀಯ ನೆಲೆಯಲ್ಲಿ ಪ್ರವಾಹದಿಂದ ಹಾನಿಯಾದ ಎಲ್ಲಾ ಗ್ರಾಮಗಳ ಜನರಿಗೆ ಪರಿಹಾರ ನೀಡಿ, ಇನ್ನುಮುಂದೆ ಮುಳುಗಡೆ ಗ್ರಾಮಗಳಲ್ಲಿ ಜನರು ವಾಸಿಸಿದರೆ, ಮುಂದೆ ಯಾವುದೇ ಪ್ರವಾಹ ಅಥವಾ ಸರ್ಕಾರಿ ಸೌಲಭ್ಯಗಳನ್ನು ಅಂತಹ ಗ್ರಾಮಸ್ಥರಿಗೆ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಬೇಕಿದೆ. ಆಗ ಜನರು ಹೊಸ ಗ್ರಾಮಗಳತ್ತ ಮುಖ ಮಾಡುತ್ತಾರೆ. ಇಲ್ಲದಿದ್ದರೆ ನೆರೆ ಸಂತ್ರಸ್ತರು ನದಿ ಪ್ರವಾಹಕ್ಕೆ ಒಮ್ಮೆ ಮುಳುಗಿದರೆ, ಸರ್ಕಾರವೂ ಕೈ ಹಿಡಿಯದಿದ್ದರೆ ಅವರ ಬದುಕು ಮತ್ತೆ ಮುಳುಗಲಿದೆ ಎಂಬುದು ನೆರೆ ಸಂತ್ರಸ್ತರ ಅಳಲು.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.