ನೆರೆ ಪರಿಹಾರ ಆಗ್ರಹಿಸಿ ಬಾರಕೋಲು ಚಳವಳಿ
Team Udayavani, Sep 17, 2019, 11:37 AM IST
ಬೆಳಗಾವಿ: ನೆರೆ ಸಂತ್ರಸ್ತರಿಗಾಗಿ ಪರಿಹಾರ ಕಲ್ಪಿಸುವಂತೆ ರೈತ ಮಹಿಳೆಯರಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲಗೊಂಡಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ವಿನೂತನ ಪ್ರತಿಭಟನೆ ಅಹೋರಾತ್ರಿ ಮುಂದುವರೆದಿದೆ. ನಗರದ ಆರ್ಟಿಒ ವೃತ್ತದಿಂದ ಪ್ರತಿಭಟನೆ ನಡೆಸುತ್ತ ಚನ್ನಮ್ಮ ವೃತ್ತದಲ್ಲಿ ಸೇರಿ ಮಾನವ ಸರಪಳಿ ನಿರ್ಮಿಸಿದ ರೈತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ನಡು ರಸ್ತೆಯಲ್ಲಿಯೇ ಅಡುಗೆ ಮಾಡಲು ಕಟ್ಟಿಗೆ ಹೂಡಿ ಒಲೆ ಹೊತ್ತಿಸಲು ಯತ್ನಿಸಿದರು. ಆಗ ಪೊಲೀಸರು ಇದಕ್ಕೆ ತಡೆಯೊಡ್ಡಿದರು. ಬಳಿಕ ತಾವು ಕಟ್ಟಿಕೊಂಡು ತಂದಿದ್ದ ಬುತ್ತಿಯನ್ನು ಬಿಚ್ಚಿ ಅಲ್ಲಿಯೇ ಊಟ ಮಾಡಿದರು.
ರೈತರು ಬಾರಕೋಲುಗಳನ್ನು ರಸ್ತೆ ಮೇಲೆ ಬಾರಿಸುತ್ತ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ನೆರೆ ಸಂತ್ರಸ್ತತರಿಗೆ ಪರಿಹಾರ ಒದಗಿಸಬೇಕು. ಬೆಳೆ ಹಾನಿಯಾದ ಎಕರೆಗೆ 1.50 ಲಕ್ಷ ರೂ. ಪರಿಹಾರ ನೀಡಬೇಕು. ಸಾವಿಗೀಡಾದ ಹಸು, ಎತ್ತು, ಎಮ್ಮೆಗೆ 80 ಸಾವಿರ ರೂ., ಆಡು, ಕುರಿಗೆ 25 ಸಾವಿರ ರೂ. ನೀಡಬೇಕು. ಸಂಪೂರ್ಣ ಹಾನಿಯಾದ ಮನೆಗಳಿಗೆ ಮನೆಗಳಿಗೆ 15 ಲಕ್ಷ ರೂ. ಭಾಗಶಃ ಮನೆ ಹಾನಿಯಾದವರಿಗೆ 10 ಲಕ್ಷ ರೂ. ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಚನ್ನಮ್ಮ ವೃತ್ತದಲ್ಲಿ ಬಹಳ ಹೊತ್ತು ಪ್ರತಿಭಟನೆ ನಡೆಸುತ್ತ ಮಾನವ ಸರಪಳಿ ನಿರ್ಮಿಸಿದ್ದರಿಂದ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಸುಮಾರು ಹೊತ್ತು ರಸ್ತೆ ಮೇಲೆ ರೈತರು ಪ್ರತಿಭಟನೆ ನಡೆಸುತ್ತಿದ್ದರಿಂದ ಜನಸಂಚಾರಕ್ಕೆ ಅಡಚಣೆ ಉಂಟಾಯಿತು. ಪೊಲೀಸರು ಮನವೊಲಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಜೋರಾಗಿ ಮಳೆ ಶುರುವಾದಾಗ ರೈತರು ಓಡೋಡಿ ಕಂಪೌಂಡ್ ಹಾರಿ ಜಿಲ್ಲಾಧಿಕಾರಿ ಕಚೇರಿಯತ್ತ ಧಾವಿಸಿದರು. ಅಲ್ಲಿಯೇ ಸುಮಾರು 15-20 ರೈತರು ಘೋಷಣೆ ಕೂಗುತ್ತ ಧರಣಿ ನಡೆಸಿದರು. ಇನ್ನುಳಿದ ರೈತರು ಕಚೇರಿಯ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ ರೈತರು ಒಲೆ ಹೊತ್ತಿಸಿ ಅಡುಗೆ ತಯಾರಿಸಿದರು. ರಾಜ್ಯದಲ್ಲಿ ಬಿಜೆಪಿಯ 25 ಸಂಸದರು ಇದ್ದರೂ ನೆರೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರು, ಸಂತ್ರಸ್ತರ ಬಗ್ಗೆ ಕರುಣೆ ತೋರುತ್ತಿಲ್ಲ ಎಂದು ಆರೋಪಿಸಿ ರಾಜ್ಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ