ಭಯ ಬೇಡ ಮೈಸೂರು ದಸರೆಗೆ ಬನ್ನಿ


Team Udayavani, Sep 18, 2019, 3:00 AM IST

bhaya-beda

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ವೀಕ್ಷಣೆಗಾಗಿ ಮೈಸೂರಿಗೆ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಸಣ್ಣ ತೊಂದರೆಯೂ ಉಂಟಾಗದಂತೆ ಭದ್ರತೆ ದೃಷ್ಟಿಯಿಂದ ಏನೇನು ಕ್ರಮ ಕೈಗೊಳ್ಳಬೇಕೋ ಎಲ್ಲವನ್ನೂ ಸರ್ಕಾರ ಕೈಗೊಳ್ಳಲಿದ್ದು, ಪಕ್ಷಾತೀತವಾಗಿ ಎಲ್ಲರ ಸಹಕಾರದೊಂದಿಗೆ ದಸರಾ ಯಶಸ್ಸಿಗೆ ಶ್ರಮಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘ ಮಂಗಳವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಕಳೆದ 20 ದಿನಗಳಿಂದ ಮೈಸೂರಿನಲ್ಲಿ ದಸರಾ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಾರಂಪರಿಕ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಆಚರಿಸುವ ಮೂಲಕ ಮೈಸೂರಿಗೆ ಬರುವ ಪ್ರವಾಸಿಗರ ಮನಗೆಲ್ಲುವ ಮೂಲಕ ಮೈಸೂರಿನ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಲು ಪ್ರಯತ್ನ ನಡೆಸಿರುವುದಾಗಿ ಹೇಳಿದರು. ಮೈಸೂರಿನ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿಲ್ಲ. ರಸ್ತೆ ಗುಂಡಿ ಮುಚ್ಚಲು ಟೆಂಡರ್‌ ಆಗಿದ್ದು, ಮಳೆ ನಿಂತ ಕೂಡಲೇ ಗುಂಡಿಗಳನ್ನು ಮುಚ್ಚಲಾಗುವುದು ಎಂದರು.

ವ್ಯಾಪಕ ಪ್ರಚಾರ: ದಸರಾ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗಿದೆ. ಮೈಸೂರಿಗೆ ಬಂದು ಹೋಗುವ 15 ರಿಂದ 18 ರೈಲುಗಳಿಗೆ, ಕೆಎಸ್ಸಾರ್ಟಿಸಿಯ 2ಸಾವಿರಕ್ಕೂ ಹೆಚ್ಚು ಬಸ್‌ಗಳಿಗೆ ದಸರಾ ಪ್ರಚಾರ ಫ‌ಲಕಗಳನ್ನು ಅಳವಡಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ಹೋರ್ಡಿಂಗ್ಸ್‌ ಗಳನ್ನು ಅಳವಡಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಾಡಹಬ್ಬ ದಸರೆಗೆ ಜನರನ್ನು ಆಹ್ವಾನಿಸುವ ಸಂದೇಶವನ್ನು ಬಸ್‌, ರೈಲು ನಿಲ್ದಾಣಗಳಲ್ಲಿ ಭಿತ್ತರಿಸುವ ಮೂಲಕ ವ್ಯವಸ್ಥಿತವಾಗಿ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಬಿಗಿ ಭದ್ರತೆ: ದಸರಾ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿರುವ ಮಾಹಿತಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಭದ್ರತೆ ಬಿಗಿಗೊಳಿಸಿ, ತಪಾಸಣೆಯನ್ನು ಹೆಚ್ಚಿಸಿದ್ದಾರೆ. ಆದರೆ, ಮೈಸೂರಿಗೆ ಯಾವುದೇ ಭೀತಿ ಇಲ್ಲ. ಈ ಬಗ್ಗೆ ಜನತೆಗೆ ಗೊಂದಲಬೇಡ. ಈ ಸಂಬಂಧ ಈಗಾಗಲೇ ರಾಜ್ಯದ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರೊಂದಿಗೂ ಮಾತನಾಡಿ ದಸರೆಗೆ ಬರುವ ಜನತೆಗೆ ಭಯ-ಭೀತಿ ಮೂಡದಂತೆ ಏನೇನು ಕ್ರಮಬೇಕೋ ಎಲ್ಲವನ್ನೂ ಮಾಡುತ್ತೇವೆ ಎಂದು ಅಭಯ ನೀಡಿದರು.

ಜವಾಬ್ದಾರಿ ಹಂಚಿಕೆ: ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡ ಅವರು ಸೇರಿದಂತೆ ಪಕ್ಷಾತೀತವಾಗಿ ಜಿಲ್ಲೆಯ ಎಲ್ಲಾ ಪಕ್ಷದ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರುಗಳಿಗೇ ದಸರಾ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದೇವೆ. ಹೀಗಾಗಿ ಎಲ್ಲರೂ ತಂಡವಾಗಿ ಕೆಲಸ ಮಾಡುತ್ತಿದ್ದೇವೆ.

ಗೊಂದಲ ನಿವಾರಣೆ: ಪ್ರತಿ ವರ್ಷ ಪಾಸ್‌ಗಳಿಗಾಗಿ ಗೊಂದಲ ಏರ್ಪಡುವ ಮಾಹಿತಿ ಇದೆ. ಒಂದೇ ಪಾಸನ್ನು ನಾಲ್ಕು ನಾಲ್ಕು ಜನರಿಗೆ ಕೊಟ್ಟು ಗೊಂದಲ ಸೃಷ್ಟಿಮಾಡುತ್ತ ಇದ್ದಿದ್ದೂ ಇದೆ. ಇದೇ ಕಾರಣಕ್ಕೆ ದಸರಾ ಗೋಲ್ಡ್‌ಕಾರ್ಡ್‌ ಅನ್ನು 2500ದೊಳಗೆ ಮಿತಿಗೊಳಿಸಲು ನಿರ್ಧರಿಸಲಾಗಿದೆ. ಜತೆಗೆ ರಾತ್ರಿ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಸಂದರ್ಭದಲ್ಲಿ ಅಧಿಕಾರಿಗಳೇ ತುಂಬಿರುತ್ತಾರೆ ಎಂಬ ಅಪವಾದ ಹೋಗಲಾಡಿಸಲು ಹಿಂದಿನ ದಿನ ನಡೆಯುವ ಪಂಜಿನ ಕವಾಯತು ತಾಲೀಮಿಗೆ ಅಧಿಕಾರಿಗಳು ಮತ್ತು ಅವರ ಕುಟುಂಬ ವರ್ಗದವರು ವೀಕ್ಷಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

ವಾಹನಗಳಿಗೆ ಪ್ರವೇಶ ತೆರಿಗೆ ಕಡಿತ: ದಸರಾ ಸಂದರ್ಭದಲ್ಲಿ ಒಂದು ತಿಂಗಳ ಕಾಲ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಲಾಗುತ್ತದೆ. ಈ ಬಾರಿ ಮೈಸೂರಿನ ಜೊತೆಗೆ ಸುತ್ತಮುತ್ತಲಿನ ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೂ ಪ್ರವಾಸಿಗರು ಹೋಗಿ ಬರಲಿ ಎಂಬ ಕಾರಣಕ್ಕೆ ಆ ಜಿಲ್ಲೆಗಳಿಗೂ ಪ್ರವೇಶ ತೆರಿಗೆ ವಿನಾಯಿತಿ ನೀಡಲು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಸಚಿವ ವಿ.ಸೋಮಣ್ಣ ತಿಳಿಸಿದರು.

ತೆಪ್ಪೋತ್ಸವದವರೆಗೆ ದೀಪಾಲಂಕಾರ: ನಾಡಹಬ್ಬ ದಸರೆಗೆ ವಿದ್ಯುತ್‌ ದೀಪಾಲಂಕಾರದಿಂದ ಮೈಸೂರು ಝಗಮಗಿಸುತ್ತದೆ. ಆದರೆ, ಪ್ರತಿ ವರ್ಷ ಜಂಬೂಸವಾರಿ ಮುಗಿದ ಮರು ದಿನವೇ ದೀಪಾಲಂಕಾರ ಸ್ಥಗಿತಗೊಳಿಸುವುದರಿಂದ ಆ ನಂತರ ಮೈಸೂರಿಗೆ ಬರುವ ಪ್ರವಾಸಿಗರಿಗೆ ನಿರಾಸೆಯಾಗುತ್ತದೆ. ಇದಕ್ಕಾಗಿ ಜಂಬೂಸವಾರಿ ಮುಗಿದ ನಂತರ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯುವ ಅ.17ರವರೆಗೂ ದೀಪಾಲಂಕಾರ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.