ಅ.16ರಂದು ರೈತರಿಂದ ಬೆಂಗಳೂರು ಚಲೋ


Team Udayavani, Sep 18, 2019, 11:19 AM IST

gadaga-tdy-1

ನರಗುಂದ: ನವಿಲುತೀರ್ಥ ಜಲಾಶಯದಲ್ಲಿ ರೈತ ಸೇನಾ ಕರ್ನಾಟಕ ಕಾರ್ಯಕ್ರಮದಲ್ಲಿ ಸೇರಿದ್ದ ಅಪಾರ ಸಂಖ್ಯೆಯ ಮಹದಾಯಿ ರೈತ ಮಹಿಳೆಯರು.

ನರಗುಂದ: ಮಹದಾಯಿ ನ್ಯಾಯಾಧಿಕರಣ ಹಂಚಿಕೆ ಮಾಡಿದ ನೀರು ಪಡೆಯಲು ಗೆಜೆಟ್ ನೋಟಿಫಿಕೇಶನ್‌ ಹೊರಡಿಸಲು ರಾಜ್ಯಪಾಲರ ಮಧ್ಯೆ ಪ್ರವೇಶಕ್ಕೆ ಆಗ್ರಹಿಸಿ ಮುಂದೂಡಲಾಗಿದ್ದ ಬೆಂಗಳೂರು ಚಲೋ ಅ. 16ರಂದು ಕೈಗೊಳ್ಳಲು ಮಹದಾಯಿ ಹೋರಾಟಗಾರರು ಮುನವಳ್ಳಿ ನವಿಲುತೀರ್ಥ ಜಲಾಶಯದಲ್ಲಿ ಘೋಷಿಸಿದ್ದಾರೆ.

ಮಂಗಳವಾರ ಭರ್ತಿಯಾದ ಜಲಾಶಯಕ್ಕೆ ಬಾಗಿನ ಅರ್ಪಿಸಲು ಎಲ್ಲ ಮಹದಾಯಿ ಹೋರಾಟಗಾರರು ತೆರಳಿದ ಸಂದರ್ಭದಲ್ಲಿ ಅಲ್ಲಿನ ಗುರುಕುಮಾರೇಶ್ವರ‌ ಒಡಕಿಹೊಳಿಮಠ ಆವರಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಎರಡು ನಿರ್ಣಯ ಪ್ರಕಟಿಸಿದರು. ನ್ಯಾಯಾಧಿಕರಣ ಹಂಚಿಕೆ ಮಾಡಿದ ನದಿ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್‌ ಹೊರಡಿಸಲು ರಾಜ್ಯಪಾಲರ ಮಧ್ಯೆ ಪ್ರವೇಶಕ್ಕೆ ಒತ್ತಾಯಿಸಿ ಅ. 16ರಂದು ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಅಚ್ಚುಕಟ್ಟು ಪ್ರದೇಶದ ಎಲ್ಲ ಹೋರಾಟಗಾರರು ಬೆಂಗಳೂರು ಚಲೋ ನಡೆಸಿ ರಾಜಭವನ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ.

ಗೆಜೆಟ್ ನೋಟಿಫಿಕೇಶನ್‌ಗೆ ಮಧ್ಯೆ ಪ್ರವೇಶಕ್ಕೆ ರಾಜ್ಯಪಾಲರು ಭರವಸೆ ನೀಡಬೇಕು. ಇಲ್ಲದಿದ್ದರೆ ನೀವು ಹೋರಾಟ ಮಾಡಿದ ತಪ್ಪಿಗೆ ವಿಷ ಕುಡಿಯಿರಿ ಎಂದು ಆದೇಶ ನೀಡುವರೆಗೆ ಬೆಂಗಳೂರಿನಲ್ಲಿ ಧರಣಿ ನಡೆಸುವ ನಿರ್ಣಯ ಕೈಗೊಂಡಿದ್ದೇವೆಂದು ಸೊಬರದಮಠ ಸ್ವಾಮೀಜಿ ಪ್ರಕಟಿಸಿದರು.

ಹುಬ್ಬಳ್ಳಿ-ಧಾರವಾಡ ಜನರ ಸಹಕಾರ ಪಡೆಯಲು ಸೆ. 25ರಂದು ಹುಬ್ಬಳ್ಳಿಯಲ್ಲಿ ಅಲ್ಲಿನ ಜನರೊಂದಿಗೆ ರಾಜ್ಯಪಾಲರಿಗೆ ಪತ್ರ ಚಳವಳಿ ನಡೆಸಲು ಎರಡನೇ ನಿರ್ಣಯ ಕೈಗೊಳ್ಳಲಾಗಿದೆ ಎಂದು ವೀರೇಶ ಸೊಬರದಮಠ ಸ್ವಾಮೀಜಿ ಪ್ರಕಟಿಸಿದರು.

ಹಂಚಿಕೆಯಾದ ನೀರು ಸದ್ಬಳಕೆಗೆ ಯಾವುದೇ ಅಡೆತಡೆಯಿಲ್ಲ. ಗೋವಾದ ಆಕ್ಷೇಪಣೆಯೂ ಇಲ್ಲ. ಯಾವ ತಕರಾರು ಇಲ್ಲ. ಎಲ್ಲವೂ ಕಟ್ಟು ಕಥೆಗಳಾಗಿವೆ. ಇಡೀ ಜೀವ ಸಂಕುಲಕ್ಕೆ ಕುಡಿಯುವ ನೀರಿಗಾಗಿ ನಾವು ಹೋರಾಟ ಮಾಡುತ್ತ ಬಂದಿದ್ದೇವೆ. ಯಾವುದೇ ಪಕ್ಷ, ರಾಜಕಾರಣಿಗಳ ಬಗ್ಗೆ ಮಾತನಾಡುವ ಹಕ್ಕು ನಮಗಿಲ್ಲ.ನ್ಯಾಯದೇವತೆ ಹಂಚಿಕೆ ಮಾಡಿದ ನೀರನ್ನು ನಾವು ನ್ಯಾಯಯುತವಾಗಿ ಪಡೆದುಕೊಳ್ಳಲು ರಾಜ್ಯಪಾಲರ ಮಧ್ಯೆ ಪ್ರವೇಶಕ್ಕೆ ಒತ್ತಾಯಿಸಲಿದ್ದೇವೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಕಿಲ್ಲಾ ತೋರಗಲ್ಲ ಗಚ್ಚಿನ ಹಿರೇಮಠದ ಶ್ರೀ ಚನ್ನಮಲ್ಲ ಶಿವಾಚಾರ್ಯರು ಮಾತನಾಡಿ, ರೈತರ ಗೋಳು ಯಾರಿಗೂ ಕೇಳುತ್ತಿಲ್ಲ. ರೈತರು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಮನೆಗೊಬ್ಬ ಹೋರಾಟಗಾರರು ಹುಟ್ಟಿಕೊಂಡಾಗ ಎಂತಹ ಸರ್ಕಾರಗಳೂ ತಲೆಬಾಗುತ್ತವೆ ಎಂದು ಕರೆ ನೀಡಿದರು.

ಹುಕ್ಕೇರಿ ವಿರಕ್ತಮಠದ ಶಿವಬಸವ ಸ್ವಾಮೀಜಿ, ಬ್ಯಾಹಟ್ಟಿಯ ಮರುಳಸಿದ್ಧ ಶಿವಾಚಾರ್ಯರು, ಸವದತ್ತಿ ಮಲ್ಲಿಕಾರ್ಜುನ ಸ್ವಾಮೀಜಿ, ರೇಣುಕ ಶಿವಯೋಗಿ ಶಿವಾಚಾರ್ಯರು, ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ, ಸವದತ್ತಿ ಶಿವಬಸವ ಸ್ವಾಮೀಜಿ, ಮಂಜಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಲಿಂಗರಾಜ ಸರದೇಸಾಯಿ, ರೈತ ಸೇನಾ ಕರ್ನಾಟಕ ಸವದತ್ತಿ ತಾಲೂಕಾಧ್ಯಕ್ಷ ಪಂಚಪ್ಪ ಹಣಸಿ ಮುಂತಾದವರು ವೇದಿಕೆಯಲ್ಲಿದ್ದರು.

ಗಂಡುಮೆಟ್ಟಿದ ನಾಡಿನಲ್ಲಿ ಹುಟ್ಟಿದ ರೈತರು ವಿಷ ಸೇವಿಸುವಂತ ಕೆಲಸ ಬೇಡ. ನೀವೆಲ್ಲ ದಿಟ್ಟತನದಿಂದ ಹೋರಾಟ ಮಾಡಿ ನಿಮ್ಮ ಹಕ್ಕು ಪಡೆಯಬೇಕು. ನಿಮ್ಮೊಂದಿಗೆ ನಾವಿದ್ದೇವೆ ಎಂದು ಶ್ರೀಗಳು ರೈತರಿಗೆ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.