ಮರಳು ಅಕ್ರಮ ಸಾಗಣೆ ತಡೆಗೆ ಅಧಿಕಾರಿಗಳ ನೇಮಕ


Team Udayavani, Sep 18, 2019, 11:38 AM IST

Udayavani Kannada Newspaper

ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಯಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.

ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ರಚಿಸಲಾಗಿದೆ. ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು ಮತ್ತು ಹಾವೇರಿ ತಾಲೂಕಿನ ತುಂಗಭದ್ರಾ ನದಿ ದಡದಲ್ಲಿ ಬರುವ ಗ್ರಾಮಗಳಿಗೆ ಅನಿರೀಕ್ಷಿತ ದಾಳಿಗಳನ್ನು ನಡೆಸಿದ್ದಾಗಲೂ ಪೂರ್ಣ ಪ್ರಮಾಣದಲ್ಲಿ ಮರಳು ಅಕ್ರಮ ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಮೇಲುಸ್ತುವಾರಿಗೆ ನೇಮಿಸಲಾಗಿದೆ.

ಸೆ.15ರಿಂದ ಅಕ್ಟೋಬರ್‌ 30ರವರೆಗೆ 46 ದಿನಗಳ ಕಾಲ ಪ್ರತಿ ದಿನ ಒಬ್ಬ ಅಧಿಕಾರಿಯಂತೆ ಉಸ್ತುವಾರಿಗೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಈ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ನೇಮಕಗೊಂಡ ಅಧಿಕಾರಿಗಳು ದಿನದ 24 ಗಂಟೆ ತುಂಗಭದ್ರಾ ನದಿದಡದ ಎಲ್ಲ ಗ್ರಾಮಗಳಿಗೆ ಭೇಟಿ ನೀಡುವುದು. ಸಾರ್ವಜನಿಕ ದೂರುಗಳನ್ನು ಸ್ವೀಕರಿಸುವುದು.

ಅಬಕಾರಿ ಉಪ ಆಯುಕ್ತರು, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಯೋಜನಾ ಅನುಷ್ಠಾನ ಅಭಿಯಂತರರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪ ನಿರ್ದೇಶಕರು, ಡಿಡಿಪಿಐ, ಕೃಷಿ ಜಂಟಿ ನಿರ್ದೇಶಕರು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಜಿಲ್ಲಾ ನೋಂದಣಿ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಡಾ.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಕಾರ ಸಂಘಗಳ ಉಪ ನಿಬಂಧಕರು, ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌, ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿರ್ವಾಹಕ ಇಂಜಿನಿಯರ್‌, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ, ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ, ಭೂ ಮಾಪನ ಇಲಾಖೆ ಹಾಗೂ ರೇಷ್ಮೆ ಇಲಾಖೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಗೃಹಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಜಿಪಂ ಯೋಜನಾ ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಉಪ ಕೃಷಿ ನಿರ್ದೇಶಕರು, ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕರು, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ಪರಿಸರ ಅಧಿಕಾರಿ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಜಿಲ್ಲಾ ಅಂಗವಿಕಲರ ಕಲ್ಯಾಣಾಕಾರಿ, ಆಹಾರ ಸುರಕ್ಷತೆ ಇಲಾಖೆ ಅಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ, ಪಪೂ ಶಿಕ್ಷಣ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಉಪನಿರ್ದೇಶಕರು ಪ್ರತಿದಿನ ಒಬ್ಬರಂತೆ ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.