ಸಾಹಿತ್ಯ ಸಾಮಾಜಿಕ ಬದಲಾವಣೆಗೆ ಅಸ್ತ್ರ


Team Udayavani, Sep 18, 2019, 1:49 PM IST

rn-tdy-1

ಮಾಗಡಿ ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ನಡೆದ ಗುಡಿಸಲ ಬೆಳಕು ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವನ್ನು ಸಾಹಿತಿ ಡಾ.ಸಿದ್ದಲಿಂಗಯ್ಯ ಉದ್ಘಾಟಿಸಿದರು.

ಮಾಗಡಿ: ಸಾಮಾಜಿಕ ಬದಲಾವಣೆಗೆ ಸಾಹಿತ್ಯ, ಕಾವ್ಯ ಅಸ್ತ್ರವಿದ್ದಂತೆ, ಅದನ್ನು ಬಳಸಿಕೊಂಡು ಸಮಾಜದಲ್ಲಿ ಸಮಾನತೆಗೆ ಶ್ರಮಿಸಬೇಕಿದೆ ಎಂದು ಸಾಹಿತಿ ನಾಡೋಜ ಡಾ.ಸಿದ್ದಲಿಂಗಯ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ತೋಟದ ಮನೆ ಗಿರೀಶ್‌ ಅವರ ಗುಡಿಸಲ ಬೆಳಕು ಎಂಬ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಲ್ಯ ಗ್ರಾಮ ಬೌದ್ಧರ ವಿಶ್ವವಿದ್ಯಾಲಯವಾಗಿತ್ತು. ಕಲ್ಯದ ಕಲಿಗಣನಾಥ ಗುಹಾಂತರ ದೇವಾಲಯದಲ್ಲಿ ಬುದ್ಧನ ಶಿರಸ್ಸಿದೆ. ಕಲ್ಯ ಬಗ್ಗೆ ಸಂಪೂರ್ಣವಾಗಿ ಸಂಶೋಧನೆಯಾಗಬೇಕು. ಸಂಸ್ಕೃತಿ ಪಂಡಿತತ್ತೋಮರ ಪರಂಪರೆ ಮಾಗಡಿಯಲ್ಲಿದೆ. ಭೌಗೋಳಿಕವಾಗಿ ಬೆಟ್ಟಗುಡ್ಡಗಳಿಂದ ಕೂಡಿರುವ ಸುಂದರವಾದ ಕಾನನ ಪ್ರದೇಶವಾಗಿದ್ದು, ಸಹಜವಾಗಿ ಮಾಗಡಿಯ ನೆಲ, ಜಲ, ಭಾಷೆ, ಸಂಸ್ಕೃತಿ, ನಾಟಕಗಳು ಕವಿ ಹೃದಯವನ್ನು ಮಿಡಿಯುತ್ತವೆ ಎಂದು ಹೇಳಿದರು.

ಮಾಗಡಿ ಸಂಸ್ಕೃತಿಯ ತೊಟ್ಟಿಲು: ಮಾಗಡಿ ಸೀಮೆಯಲ್ಲಿ ಸಾಹಿತಿಗಳು, ಸಂಸ್ಕೃತ ಪಂಡಿತರು, ಸಂಗೀತಗಾರರು, ನಾಟಕಕಾರರು ಕವಿಗಳಿಗೇನು ಕೊರತೆಯಿಲ್ಲ. ಮಾಗಡಿ ಒಂದು ಸಾಂಸ್ಕೃತಿ ತೊಟ್ಟಿಲ್ಲಿದ್ದಂತೆ, ಅನೇಕ ಶ್ರೇಷ್ಟರನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪಕ ಹೆಬ್ಬಳಲಿನ ಎಚ್.ವಿ.ನಂಜುಂಡಯ್ಯ, 64 ಭಾಷೆಯನ್ನು ಒಂದೇ ಭಾಷೆಗೆ ತುರ್ಜುಮೆ ಮಾಡಿರುವ ಸಿರುಬು ವಲಯ ಕರಲಮಂಗಲದ ಶ್ರೀಕಂಠಯ್ಯ, ನಾರಸಂದ್ರದ ಬಸವಪ್ಪ ಶಾಸ್ತ್ರಿ, ಸಾತನೂರಿನ ಅಭಿನವ ಕಾಳಿದಾಸ ಪುಂಡರೀಕ ವಿಠಲ, ತಂಬೂರಿ, ವೀಣೆ ಸಂಗೀತ ವಿದ್ವಾನ್‌ ಶ್ರೀನಿವಾಸಚಾರ್ಯ ಇನ್ನೂ ಅನೇಕರು ಮಾಗಡಿಯವರು ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದರು.

ಸಮಾನತೆಯೇ ನಿಜವಾದ ಧರ್ಮ: ತೋಟದ ಮನೆ ಗಿರೀಶ್‌ ಅವರು ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ತಾವು ಬಾಲ್ಯದಲ್ಲಿ ಅನುಭವಿಸಿದ ಶೋಷಣೆಯಿಂದ ಹೊರಬಂದ ರೀತಿಯನ್ನು ತಮ್ಮ ಸಮರ್ಥವಾಗಿ ರಚಿಸಿದ್ದಾರೆ. ಕಲ್ಲಿನ ಮೂರ್ತಿಯನ್ನು ಪೂಜಿಸುವುದಕ್ಕಿಂತ ಮಾನವರನ್ನು ಸಮಾನತೆಯಿಂದ ನೋಡುವುದೇ ನಿಜವಾದ ಧರ್ಮ. ಯುವ ಕವಿಗಳು ಮೊದಲು ಪಂಪ, ಲಕ್ಷ್ಮೀಶ, ಕುಮಾರವ್ಯಾಸ, ಬಿಎಂಶ್ರೀ, ಕುವೆಂಪು, ದಾ.ರಾ.ಬೇಂದ್ರೆ, ದಾಸ ಸಾಹಿತ್ಯ, ವಚನ ಸಾಹಿತ್ಯವನ್ನು ಅಧ್ಯಯನ ಮಾಡಬೇಕು. ಗ್ರಾಮೀಣ ಮೂಲದ ಜನಪದಗಳಾದ ಕೋಲಾಟ, ರಾಗಿ ಬೀಸುವ ಪದ, ಗೀಗೀ ಪದ, ಕಂಸಾಳೆ ನೃತ್ಯ, ಸೋಮನ ಕುಣಿತ, ಪಠದ ಕುಣಿತ, ಜವಳಿ ಕುಣಿತ, ನಾಟಕಗಳು, ಗ್ರಾಮ ದೇವತೆ ಉತ್ಸವ ತಮಟ, ವಾಧ್ಯ ಇವುಗಳನ್ನು ಜೀವಂತಗೊಳಿಸಬೇಕು ಎಂದು ತಿಳಿಸಿದರು.

ಸಮಾಜಮುಖೀ ಚಿಂತನೆ ರೂಪಿಸಿಕೊಳ್ಳಿ: ಸಾಹಿತಿ ಎಲ್.ಎನ್‌.ಮುಕುಂದರಾಜ್‌ ಮಾತನಾಡಿ, ಮಾನವರಾದವರು ದೇವಸ್ಥಾನದ ಬಳಿ ದೇವರ ದರ್ಶನಕ್ಕಾಗಿ ಸಾಲುಗಟ್ಟಿ ನಿಲ್ಲುವ ಬದಲಾಗಿ ಗ್ರಂಥಾಲಯದೊಳಗೆ ಪ್ರವೇಶಿಸಿ ಸಾಹಿತ್ಯವನ್ನು ಓದುವ ಹವ್ಯಾಸವನ್ನು ಜನರು ಬೆಳೆಸಿಕೊಳ್ಳಬೇಕು. ಇದರಿಂದ ದೇಶ ಪ್ರಗತಿ ಸಾಧಿಸುತ್ತದೆ. ರಾಜಕಾರಣಿಗಳು, ಅಧಿಕಾರಿಗಳು ಸಾಂಸ್ಕೃತಿಕವಾಗಿ ಬದುಕುವಂತ ವಾತಾವರಣ ರೂಢಿಸಿಕೊಳ್ಳಬೇಕು. ಸಮಾಜಮುಖೀ ಚಿಂತನೆಗಳು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜು, ಬೆಸ್ಕಾಂ ನೌಕರರ ಸಂಘದ ರಾಜ್ಯಾದ್ಯಕ್ಷ ಟಿ.ಆರ್‌.ರಾಮಕೃಷ್ಣಯ್ಯ, ಸಿ.ಬಿ.ಅಶೋಕ್‌, ಚಿಕ್ಕವೀರಯ್ಯ, ಕಡಬಗೆರೆ ಮುನಿರಾಜು, ಗುಡಿಸಲು ಬೆಳಕು ಸಂಕಲನಕಾರ ತೋಟದ ಮನೆ ಗಿರೀಶ್‌ ಮಾತನಾಡಿದರು.

ಈ ವೇಳೆಯಲ್ಲಿ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಜಿ.ಶಿವರಾಮಯ್ಯ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್‌, ಸದಸ್ಯ ನಾರಾಯಣಪ್ಪ, ಜಿಪಂ ಮಾಜಿ ಅಧ್ಯಕ್ಷ ಧನಂಜಯ, ಪುರಸಭಾ ಮಾಜಿ ಅಧ್ಯಕ್ಷರಾದ ಎಚ್.ಜೆ.ಪುರುಷೋತ್ತಮ್‌, ರಂಗಹನುಮಯ್ಯ, ತಮ್ಮಣ್ಣಗೌಡ, ಸೀಗೇಕುಪ್ಪೆ ಶಿವಣ್ಣ, ಕಾಂತರಾಜು, ಸೀಬೇಗೌಡ, ಬೆಸ್ಕಾಂ ಹರೀಶ್‌, ಕೆಂಪೇಗೌಡ, ರಂಗಸ್ವಾಮಿ, ಶಿವರಾಮು, ಜಯರಾಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.