ಇ.ಡಿ.ಪರ ವಕೀಲರು ಗೈರು; ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Team Udayavani, Sep 18, 2019, 4:09 PM IST
ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ರೋಸ್ ಅವೆನ್ಯೂ ಕೋರ್ಟ್ ಗುರುವಾರಕ್ಕೆ ಮುಂದೂಡಿಕೆ.
ಇ.ಡಿ. ಪರ ವಕೀಲರಾದ ಕೆಎಂ ನಟರಾಜ್ ಅವರು ಗೈರು ಹಾಜರಾದ ಹಿನ್ನೆಲೆಯಲ್ಲಿ ವಿಚಾರಣೆ ನಾಳೆಗೆ ಮುಂದೂಡುವಂತೆ ಇಡಿ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜಡ್ಜ್ ಅಜಯ್ ಕುಮಾರ್ ಕುಹರ್ ಅವರು ವಿಚಾರಣೆ ನಾಳೆಗೆ ಮುಂದೂಡಿದರು.
ರಕ್ತದೊತ್ತಡದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಇಂದು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರಾಗಿರಲಿಲ್ಲವಾಗಿತ್ತು. ಡಿಕೆಶಿ ಪರ ವಕೀಲರಾದ ಅಭಿಷೇಕ ಮನು ಸಿಂಘ್ವಿ ವಾದ ಮಂಡಿಸಿದ್ದರು.
ಡಿಕೆಶಿ ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ ಚುನಾವಣಾ ಆಯೋಗಕ್ಕೆ ನೀಡಿದ ಅಫಿಡವಿತ್ ನಲ್ಲಿ ಸಲ್ಲಿಸಿರುವುದನ್ನು ಮಾತ್ರ ಇ.ಡಿ.ವೈಭವೀಕರಣ ಮಾಡುತ್ತಿದೆ. ತಪ್ಪು ಅಫಿಡವಿತ್ ನೀಡಿದ್ದರೆ ಅನರ್ಹರಾಗುತ್ತಾರೆ. ಘೋಷಣೆಯಾದ ಆಸ್ತಿ ಅಕ್ರಮ ಹೇಗಾಗುತ್ತೆ ಎಂದು ಡಿಕೆಶಿ ಪರ ವಕೀಲರಾದ ಸಿಂಘ್ವಿ ವಾದ ಮಂಡಿಸಿದ್ದರು.
ಶರ್ಮಾ ಟ್ರಾನ್ಸ್ ಪೋರ್ಟ್ 50ವರ್ಷ ಹಳೆಯದ್ದು, ಡಿಕೆಶಿ ಒಕ್ಕಲಿಗ ಸಮುದಾಯಕ್ಕೆ ಸೇರಿದವರು, ಒಕ್ಕಲಿಗರು ಸಾಕಷ್ಟು ಜಮೀನು ಹೊಂದಿರುತ್ತಾರೆ. ಈ ಸಮುದಾಯ ಕೃಷಿಯನ್ನು ನಂಬಿ ಬದುಕುತ್ತದೆ. ಡಿಕೆಶಿಗೆ ವಂಶಪಾರಂಪರ್ಯವಾಗಿ ಆಸ್ತಿ ಬಂದಿದೆ. ಕೃಷಿ ಜಮೀನು ನಗರೀಕರಣದ ಬಳಿಕ ಮೌಲ್ಯ ಗಣನೀಯವಾಗಿ ಏರಿಕೆಯಾಗುತ್ತದೆ. ಜಮೀನಿನ ಮೌಲ್ಯ ಏರಿದ್ದನ್ನೇ ಅಕ್ರಮ ಎನ್ನಲಾಗುತ್ತಿದೆ. ಡಿಕೆಶಿಯನ್ನು ನ್ಯಾಯಾಂಗ ಬಂಧನದಲ್ಲಿಟ್ಟುಕೊಳ್ಳುವುದರಲ್ಲಿ ಅರ್ಥವಿದೆಯೇ?ಎಂದು ಸಿಂಘ್ವಿ ವಾದಿಸಿದ್ದರು.
800 ಕೋಟಿ ರೂ.ಮೌಲ್ಯದ ಆಸ್ತಿ ಸಿಕ್ಕಿದೆ ತನಿಖೆಯಾಗಬೇಕು ಅಂತ ಹೇಳುತ್ತಾರೆ. 800 ಕೋಟಿ ರೂಪಾಯಿ ಆಸ್ತಿ ಘೋಷಣೆಯಾಗಿದೆ. ಅಕ್ರಮ ಹಣ ವರ್ಗಾವಣೆ ಎಂದರೇನು? ಎಂದು ಪ್ರಶ್ನಿಸಿದರು.
ಏತನ್ಮಧ್ಯೆ ಇ.ಡಿ ಪರ ವಕೀಲರು ಗೈರುಹಾಜರಾಗಿದ್ದು, ವಿಚಾರಣೆ ಮುಂದೂಡುವಂತೆ ಇ.ಡಿ ಪರ ಕಿರಿಯ ವಕೀಲರು ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ