ಸೋಂಬೇರಿ ಅಧಿಕಾರಿಗಳ ವಿರುದ್ಧ ಡಿಸಿ ಗರಂ

ಶಿರಸ್ತೇದಾರ್‌ಗೆ ಶೋಕಾಸ್‌ ನೋಟಿಸ್‌ ನೀಡಲು ಡಾ| ಬಗಾದಿ ಗೌತಮ್‌ ಸೂಚನೆ •ಕೈಗಾರಿಕಾ ಇಲಾಖೆ ಏಕಗವಾಕ್ಷಿ ಸಮಿತಿ ಸಭೆ

Team Udayavani, Sep 18, 2019, 6:27 PM IST

18-Sepctember-27

ಚಿಕ್ಕಮಗಳೂರು: ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಕೈಗಾರಿಕಾ ಇಲಾಖೆ ಏಕಗವಾಕ್ಷಿ ಸಮಿತಿ ಸಭೆ ನಡೆಸಿದರು.

ಚಿಕ್ಕಮಗಳೂರು: ಸೂಚಿಸಿದ್ದ ಕೆಲಸವನ್ನು ಮಾಡದ ಚಿಕ್ಕಮಗಳೂರು ಹಾಗೂ ತರೀಕೆರೆ ಕಂದಾಯ ಇಲಾಖೆ ಶಿರಸ್ತೇದಾರ್‌ರಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕೈಗಾರಿಕಾ ಇಲಾಖೆಯ ಏಕಗವಾಕ್ಷಿ ಸಮಿತಿ ಹಾಗೂ ಕೈಗಾರಿಕಾ ಸ್ಪಂದನ ಸಭೆಯಲ್ಲಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಶೋಕಾಸ್‌ ನೋಟಿಸ್‌ ಜಾರಿಗೊಳಿಸುವಂತೆ ಸೂಚಿಸಿ, ನೀಡಿದ ಕೆಲಸವನ್ನು 1 ವಾರದೊಳಗಾಗಿ ಮಾಡದಿದ್ದಲ್ಲಿ ಸೇವೆಯಿಂದ ಅಮಾನತು ಮಾಡುವುದಾಗಿ ಎಚ್ಚರಿಸಿದರು.

3 ತಿಂಗಳ ಹಿಂದೆ ನಡೆದಿದ್ದ ಸಮಿತಿ ಸಭೆಯಲ್ಲಿ ಮೆಸ್ಕಾಂ ಉಪವಿಭಾಗ ತೆರೆಯಲು ಚಿಕ್ಕಮಗಳೂರು ತಾಲೂಕಿನ ಗಾಣದಾಳು ಗ್ರಾಮದಲ್ಲಿ ಜಾಗ ಗುರುತಿಸಿ ಹಸ್ತಾಂತರಿಸಲು ಪ್ರಸ್ತಾವನೆ ಸಲ್ಲಿಸುವಂತೆ ತಹಶೀಲ್ದಾರರಿಗೆ ಸೂಚಿಸಲಾಗಿತ್ತು. ಆದರೆ, ಇಂದು ನಡೆದ ಸಭೆಗೆ ಆಗಮಿಸಿದ್ದ ಶಿರಸ್ತೇದಾರರು ಜಾಗ ಗೋಮಾಳ ಆಗಿರುವುದರಿಂದ ಹಸ್ತಾಂತರಿಸಲು ತಾಪಂ ಅನುಮತಿ ಬೇಕಿದೆ. ಹಾಗಾಗಿ, ಅಲ್ಲಿಗೆ ಪತ್ರ ಬರೆಯಲಾಗಿದೆ ಎಂಬ ಉತ್ತರ ನೀಡಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಗೋಮಾಳ ಹಸ್ತಾಂತರಿಸಲು ಯಾರೂ ಒಪ್ಪುವುದಿಲ್ಲ. ಈ ಬಗ್ಗೆ ಪತ್ರ ಬರೆಯಲು 3 ತಿಂಗಳು ಬೇಕೆ. ಗೋಮಾಳ ಬಿಟ್ಟು ಬೇರೆ ಜಾಗ ಗುರುತಿಸಿದ್ದೀರಾ ಎಂದು ಪ್ರಶ್ನಿಸಿದರು. 1 ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಿಮ್ಮನ್ನು ಸೇವೆಯಿಂದ ಅಮಾನತು ಮಾಡುವುದಾಗಿ ಎಚ್ಚರಿಸಿದರು.

ತರೀಕೆರೆ ತಾಲೂಕು ತಿಮ್ಮಾಪುರ ಗ್ರಾಮದಲ್ಲಿ ಕೈಗಾರಿಕಾ ವಸಾಹತು ತೆರೆಯಲು ಜಾಗ ಹಸ್ತಾಂತ ರಿಸುವ ಕುರಿತು ಜಿಲ್ಲಾಧಿಕಾರಿಗಳು ಪ್ರಶ್ನಿಸಿದಾಗ, ತರೀಕೆರೆ ಶಿರಸ್ತೇದಾರ್‌ ಪುಟ್ಟಸ್ವಾಮಿ, ತಹಶೀಲ್ದಾ ರರು ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಬರೆದ ಪತ್ರ ವನ್ನು ತೋರಿಸಿ ಆ ಜಾಗ ಅರಣ್ಯ ಪ್ರದೇಶದಂತೆಕಂಡು ಬರುತ್ತಿದೆ. ಆದ್ದರಿಂದ ಅದನ್ನು ಕೊಡಲು ಸಾಧ್ಯವಿಲ್ಲವೆಂದು ತಿಳಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ಧರಾಜು ಮಾತನಾಡಿ, ಸದರಿ ಪ್ರದೇಶದಲ್ಲಿ 350 ಎಕರೆ ಅರಣ್ಯ ಪ್ರದೇಶವಿದ್ದು, ಅದರೊಂದಿಗೆ 99 ಎಕರೆ ಜಾಗ ಸರ್ಕಾರಕ್ಕೆ ಸೇರಿದ್ದಾಗಿದೆ ಎಂದು ಪಹಣಿ ತೋರಿಸಿದರು. ಜಿಲ್ಲಾಧಿಕಾರಿ ಮಾತನಾಡಿ, ಪಹಣಿಯಲ್ಲಿಯೇ ಸರ್ಕಾರಿ ಜಾಗ ಎಂದಿದೆ. ಅದನ್ನು ನೀವೇಕೆ ಅರಣ್ಯ ಪ್ರದೇಶವೆಂದು ಹೇಳುತ್ತೀರಿ. ಕೂಡಲೆ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಿ, ಅದರ ಪ್ರತಿಯನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಕಳುಹಿಸಬೇಕೆಂದು ಅಪರ ಡಿಸಿಗೆ ಸೂಚಿಸಿದರು.

ಲಕ್ಯಾ ಹೋಬಳಿಯ ಹಳೆಲಕ್ಯಾ ಗ್ರಾಮದ ಸ.ನಂ. 124ರಲ್ಲಿ ಆಟೋಮೊಬೈಲ್ ಕಾಂಪ್ಲೆಕ್ಸ್‌ ತೆರೆಯಲು 6.05 ಎಕರೆ ಜಾಗವನ್ನು ಕೆಎಸ್‌ಎಸ್‌ಐ ಡಿಸಿಗೆ ಹಸ್ತಾಂತರಿಸಲು ಪ್ರಸ್ತಾವನೆ ಸಲ್ಲಿಸಲಾಗಿ ದೆಯೇ ಎಂದು ಪ್ರಶ್ನಿಸಿದಾಗ, ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿದ್ದು, ಈಗ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿದೆ ಎಂದು ಚಿಕ್ಕಮಗಳೂರು ಶಿರಸ್ತೇ ದಾರ್‌ ತಿಳಿಸಿದರು. ಕೂಡಲೆ ಉಪವಿಭಾಗಾಧಿಕಾರಿಗೆ ದೂರವಾಣಿ ಕರೆ ಮಾಡಿದ ಜಿಲ್ಲಾಧಿಕಾರಿ, ಪ್ರಸ್ತಾವನೆಯನ್ನು ಪರಿಶೀಲಿಸಿ ತಮಗೆ ಕೂಡಲೆ ಕಳುಹಿಸಬೇಕೆಂದು ಡಿಸಿ ಸೂಚಿಸಿದರು.

ಕಡೂರು ತಾಲೂಕು ಕಬ್ಬಳಿ ಗ್ರಾಮದಲ್ಲಿ ಕೈಗಾರಿಕಾ ವಸಾಹತು ತೆರೆಯುವ ಪ್ರಸ್ತಾವನೆ ಕುರಿತು ಪ್ರಶ್ನಿಸಿದಾಗ ಉತ್ತರಿಸಿದ ಅಪರ ಜಿಲ್ಲಾಧಿಕಾರಿ ಡಾ|ಕುಮಾರ್‌, ಗ್ರಾಮದ ಸ.ನಂ. 46ರಲ್ಲಿ 32-27 ಎಕರೆ ಜಾಗವಿದೆ. ದಾಖಲೆಗಳ ಪ್ರಕಾರ ಪಹಣಿಯಲ್ಲಿ ನೆಡುತೋಪು ಎಂದು ನಮೂದಾಗಿದೆ. ಆದರೂ, ಮುಂದೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಅರಣ್ಯ ಇಲಾಖೆಗೆ ಎನ್‌ಓಸಿ ನೀಡಲು ಪತ್ರ ಬರೆಯಲಾಗಿದೆ ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ದೂರವಾಣಿ ಕರೆ ಮಾಡಿದ ಡಿಸಿ, ಕೂಡಲೆ ಈ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷ ವಿಜಯ್‌ಕುಮಾರ್‌, ಸದಸ್ಯ ಮಹೇಂದ್ರ, ಚೇಂಬರ್‌ ಆಫ್‌ ಕಾಮರ್ಸ್‌ನ ಜಿಲ್ಲಾಧ್ಯಕ್ಷ ಪರಮೇಶ್ವರಪ್ಪ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.