ಅವ್ಯವಸ್ಥೆಯ ಆಗರವಾಗಿದೆ ಕಳಿಹಿತ್ಲು ಬಂದರು

ಅಭಿವೃದ್ಧಿ ಮೂಲಕ ಹಸನಾಗಬೇಕಿದೆ ಮೀನುಗಾರರ ಬದುಕು

Team Udayavani, Sep 19, 2019, 5:37 AM IST

1709BDRE1B

ಬೈಂದೂರು: ತಾಲೂಕಿನ ಪ್ರಮುಖ ಬಂದರು ಪ್ರದೇಶಗಳಲ್ಲಿ ಒಂದಾಗಿರುವ ಕಳಿಹಿತ್ಲು ಬಂದರು ಇಲಾಖೆಯ ನಿರ್ಲಕ್ಷ್ಯ ಹಾಗೂ ಜನ ಪ್ರತಿನಿಧಿಗಳ ನಿರಾಸ‌ಕ್ತಿ ಪರಿಣಾಮ ಅವ್ಯವಸ್ಥೆಯ ಆಗರವಾಗಿದೆ.

200ಕ್ಕೂ ಅಧಿಕ ದೋಣಿಗಳಿಗೆ ಆಶ್ರಯ
ಶಿರೂರು ಗ್ರಾ.ಪಂ. ವ್ಯಾಪ್ತಿಯ ಸಮುದ್ರ ಕಿನಾರೆ ಯಲ್ಲಿರುವ ಕಳಿಹಿತ್ಲು ನೈಸರ್ಗಿಕ ಸೌಂದರ್ಯದಿಂದ ಕಂಗೊಳಿಸುವ ಪ್ರದೇಶವಾಗಿದೆ. ಹಲವು ವರ್ಷಗಳ ಹಿಂದೆ ಈ ಭಾಗ ತಾಲೂಕಿನ ದೊಡ್ಡ ಮೀನು ಸಂಗ್ರಹಣೆಯ ಮತ್ತು ಸಂಸ್ಕರಣೆಯ ಕೇಂದ್ರ ವಾಗಿತ್ತು. ಪ್ರತಿವರ್ಷ ಸಾಂಪ್ರದಾಯಿಕ ದೋಣಿ ಸ್ಪರ್ಧೆ ನಡೆಯುತ್ತಿತ್ತು ಎನ್ನುವುದು ಇಲ್ಲಿನ ಸ್ಥಳೀಯರ ಅಭಿಪ್ರಾಯವಾಗಿದೆ. ನದಿ ಸಾಗರ ಸಂಗಮ ಪ್ರದೇಶವಾದ ಇಲ್ಲಿ ಮಳೆಗಾಲ ಹೊರತುಪಡಿಸಿ ಉಳಿದೆಲ್ಲ ತಿಂಗಳುಗಳಲ್ಲೂ ಮೀನುಗಾರಿಕೆ ನಡೆಯುತ್ತವೆ. ಆಗಸ್ಟ್‌, ಸೆಪ್ಟೆಂಬರ್‌ ತಿಂಗಳಲ್ಲಿ ಉಪ್ಪುಂದ, ತಾರಾಪತಿ, ನಾಗೂರು ಮುಂತಾದ ಕಡೆ ಗಳಿಂದ ಸೇರಿ 200ಕ್ಕೂ ಅಧಿಕ ದೋಣಿಗಳು ಈ ಬಂದರು ಮೂಲಕವೆ ಮೀನು ವ್ಯವಹಾರ ನಡೆಸುತ್ತದೆ. ಮೂವತ್ತು ವರ್ಷಗಳ ಹಿಂದೆ ತಡೆಗೋಡೆ ನಿರ್ಮಾಣವಾಗಿತ್ತು.

ಕೆಸರುಮಯವಾದ ರಸ್ತೆ, ಮೀನು ಮಾರಾಟಕ್ಕಿಲ್ಲ ಸ್ಥಳಾವಕಾಶ
ಕರಾವಳಿ ಮಾರ್ಗ ಹಾಗೂ ಶಿರೂರು ಕೆಳಪೇಟೆಯಿಂದ ಬರುವ ವಾಹನಗಳು ರುದ್ರ ಭೂಮಿ ಕ್ರಾಸ್‌ನಿಂದ ಕಳಿಹಿತ್ಲುವರೆಗೆ ಮಣ್ಣಿನ ರಸ್ತೆಯಲ್ಲಿಯೆ ಸಂಪರ್ಕಿಸಬೇಕು. ಕಳೆದ ಹಲವು ವರ್ಷಗಳಿಂದ ಮನವಿ ನೀಡಿದರೂ ರಸ್ತೆ ನಿರ್ಮಾಣವಾಗಿಲ್ಲ. ಮಳೆಗಾಲದ ಅಬ್ಬರ ಮತ್ತು ನಿರಂತರ ವಾಹನ ಸಂಚಾರದಿಂದ ರಸ್ತೆ ಸಂಪೂರ್ಣ ಕೆಸರುಮಯವಾಗಿದೆ. ದ್ವಿಚಕ್ರ ವಾಹನ ಕೂಡ ಸಂಚರಿಸಲಾಗದ ಪರಿಸ್ಥಿತಿ ಇದೆ. ಮಾತ್ರವಲ್ಲದೆ ಇಲ್ಲಿನ ಶಾಲೆ ಹಾಗೂ ಅಂಗನವಾಡಿ ಕೆಸರುಮಯ ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾಗಿದೆ.

ಬಂದರು ಅಭಿವೃದ್ಧಿಯಾಗಬೇಕಾಗಿದೆ
ಕಳಿಹಿತ್ಲು ಬಂದರು ಅಭಿವೃದ್ಧಿಗೆ ವಿಪುಲ ಅವಕಾಶಗಳಿರುವ ಪ್ರದೇಶವಾಗಿದೆ. ನೂರಾರು ದೋಣಿಗಳು ಈ ಪ್ರದೇಶವನ್ನು ಅವಲಂಬಿಸಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಶೂನ್ಯವಾಗಿದೆ. ದೋಣಿಗಳಿಗೆ ಮೀನು ಖಾಲಿ ಮಾಡಲು ಸೂಕ್ತ ವ್ಯವಸ್ಥೆ, ಮತ್ಸé ವ್ಯಾಪಾರಕ್ಕೆ ಅವಶ್ಯವಿರುವ ಸೌಲಭ್ಯ, ಬೀದಿ ದೀಪ, ಕುಡಿಯುವ ನೀರು ಯಾವುದರ ಬಗ್ಗೆಯೂ ಕೂಡ ಇಲಾಖೆ ಗಮನಹರಿಸಿಲ್ಲ. ಶೌಚಾಲಯ ಇಲ್ಲದೆ ಜನರು ಪರದಾಡಬೇಕಾದ ಪರಿಸ್ಥಿತಿ ಇದೆ. ಈ ಪ್ರದೇಶದ ಅಭಿವೃದ್ಧಿ ದೃಷ್ಟಿಯಿಂದ ಪ್ರತಿ ವರ್ಷ ಬೀಚ್‌ ಉತ್ಸವ ನಡೆಸುವ ಮೂಲಕ ಕಳಿಹಿತ್ಲು ಪ್ರವಾಸೋದ‌Âಮ ಪ್ರದೇಶವಾಗಿ ಮಾರ್ಪಡಬೇಕು ಎಂದು ಸರಕಾರದ ಗಮನ ಸೆಳೆಯಲಾಗಿದೆ. ಮೀನುಗಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ಇಲ್ಲಿನ ಸ್ಥಳೀಯರಿಗೆ ಕಳಿಹಿತ್ಲು ಅಭಿವೃದ್ಧಿಯಾದರೆ ಮೀನುಗಾರಿಕೆ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಪ್ರವಾಸೋದ‌Âಮ ಅನುಕೂಲ ಪಡೆದುಕೊಳ್ಳಲು ಬಂದರು ಅಭಿವೃದ್ಧಿ ಮತ್ತು ರಸ್ತೆ ನಿರ್ಮಾಣದ ಬಗ್ಗೆ ಶೀಘ್ರ ಆಸಕ್ತಿ ವಹಿಸಬೇಕಾಗಿದೆ.

ನಡೆದಾಡುವುದೂ ಕಷ್ಟಕರ
ಕಳೆದ ಹಲವಾರು ವರ್ಷಗಳಿಂದ ಕಳಿಹಿತ್ಲು ಬಂದರು ಸಮಸ್ಯೆ ಕುರಿತು ಜನಪ್ರತಿನಿಧಿಗಳ ಗಮನ ಸೆಳೆಯ ಲಾಗುತ್ತಿದೆ.ಇದುವರೆಗೆ ಯಾವುದೇ ಅನುದಾನ ಬಂದಿಲ್ಲ.ಸೆಪ್ಟಂಬರ್‌ ತಿಂಗಳಲ್ಲಿ ನೂರಾರು ದೋಣಿಗಳು ಮೀನುಗಾರಿಕೆಗಾಗಿ ಕಳಿಹಿತ್ಲು ಬಂದರನ್ನು ಆವಲಂಬಿಸಿರುತ್ತವೆ. ಇಲ್ಲಿನ ರಸ್ತೆ ಸಂಪೂರ್ಣ ಕೆಸರುಮಯವಾಗಿ ನಡೆದಾಡಲೂ ಕಷ್ಟವಾಗುತ್ತಿದೆ.ಶೀಘ್ರವಾಗಿ ರಸ್ತೆ ನಿರ್ಮಾಣವಾಗಲು ಇಲಾಖೆ ಪ್ರಯತ್ನಿಸಬೇಕು.
– ಜಿ.ಅಜೀಜ್‌, ಅಧ್ಯಕ್ಷರು ಅಲ್ಪಸಂಖ್ಯಾಕರ ನಾಡದೋಣಿ ಮೀನುಗಾರರ ಸಂಘ ಕಳಿಹಿತ್ಲು

ಕಳಿಹಿತ್ಲು ರಸ್ತೆ ನಿರ್ಮಾಣಕ್ಕೆ ಪ್ರಯತ್ನ
ಕಳಿಹಿತ್ಲು ರಸ್ತೆ ಅಭಿವೃದ್ಧಿ ಕುರಿತು ಈಗಾಗಲೇ ಪ್ರಸ್ತಾವನೇ ಸಂಬಂಧಪಟ್ಟ ಇಲಾಖೆಗೆ ಕಳುಹಿಸಲಾಗಿದೆ. ಶಾಸಕರು ಕೂಡ ಕಳಿಹಿತ್ಲು ರಸ್ತೆ ಅಭಿವೃದ್ಧಿ ಮತ್ತು ಬಂದರು ಪ್ರಗತಿ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ಅತೀ ಶೀಘ್ರದಲ್ಲಿ ಕಳಿಹಿತ್ಲು ರಸ್ತೆ ನಿರ್ಮಾಣದ ಪ್ರಯತ್ನ ಮಾಡಲಾಗುವುದು.
– ಸುರೇಶ್‌ ಬಟ್ವಾಡಿ,
ಜಿ.ಪಂ. ಸದಸ್ಯರು ಶಿರೂರು

ಬರಹ: ಅರುಣ ಕುಮಾರ್‌, ಶಿರೂರು
ಚಿತ್ರ: ಗಿರೀಶ್‌ ಕರಾವಳಿ

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.