ಅ.17ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ
Team Udayavani, Sep 19, 2019, 3:00 AM IST
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಅ. 17 ರಿಂದ 29 ರವರೆಗೆ ಒಟ್ಟು 13 ದಿನಗಳ ಕಾಲ ನಡೆಯಲಿದೆ. ಜಾತ್ರಾ ಮಹೋತ್ಸವ ಸಿದ್ಧತೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು, ಅ.17ರಂದು ಮಧ್ಯಾಹ್ನ 12.30ಕ್ಕೆ ಬಾಗಿಲು ತೆರೆಯಲಿದ್ದು, ಅ. 29ರಂದು ಮಧ್ಯಾಹ್ನ 12ಗಂಟೆ ನಂತರ ಬಾಗಿಲು ಮುಚ್ಚಲಾಗುವುದು ಎಂದು ಹೇಳಿದರು.
ಬಾಗಿಲು ತೆರೆಯುವ ಅ.17 ರಂದು ಹಾಗೂ ಬಾಗಿಲು ಮುಚ್ಚುವ 29 ರಂದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅ. 18 ರಿಂದ ಪ್ರತಿದಿನ ದೇವಿಗೆ ನೈವೇದ್ಯ ಪೂಜಾ ಸಮಯ ಮಧ್ಯಾಹ್ನ 1ರಿಂದ 3 ಗಂಟೆಯವರೆಗೆ ಭಕ್ತರಿಗೆ ದರ್ಶನ ಇರುವುದಿಲ್ಲ. ಉಳಿದ ಅವಧಿಯಲ್ಲಿ ರಾತ್ರಿ11ಗಂಟೆಯವರೆಗೆ ದರ್ಶಕ್ಕೆ ಆವಕಾಶವಿರುತ್ತದೆ. ಅ.23, 25 ಮತ್ತು ಅ.27ರ ದಿನಾಂಕಗಳಂದು ರಾತ್ರಿ 11ರಿಂದ ಬೆಳಗ್ಗೆ 6 ಗಂಟೆಯವರೆಗೆ ದೇವಿಗೆ ವಿಶೇಷ ನೈವೇದ್ಯ ಮತ್ತು ಪೂಜೆ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್