ವರ್ಲ್ಡ್ ಬಾಕ್ಸಿಂಗ್‌: ಅಮಿತ್‌, ಮನೀಷ್‌ಗೆ ಪದಕ ಖಾತ್ರಿ


Team Udayavani, Sep 19, 2019, 5:42 AM IST

Boxing-a

ಎಕಟೆರಿನ್‌ಬರ್ಗ್‌ (ರಶ್ಯ): ಏಶ್ಯನ್‌ ಗೇಮ್ಸ್‌ನಲ್ಲಿ ಬಂಗಾರ ಪದಕ ಜಯಿಸಿದ್ದ ಭಾರತದ ಅಮಿತ್‌ ಪಂಘಲ್‌ ಮತ್ತು ಇದೇ ಮೊದಲ ಸಲ ಕಣಕ್ಕಿಳಿದ ಮನೀಷ್‌ ಕೌಶಿಕ್‌ “ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌’ನಲ್ಲಿ ಪದಕವೊಂದನ್ನು ಖಚಿತಪಡಿಸಿದ್ದಾರೆ.

ಆದರೆ ಸಂಜೀತ್‌ ಕುಮಾರ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಪರಾಭವಗೊಂಡು ಪದಕ ಸ್ಪರ್ಧೆಯಿಂದ ಹೊರಬಿದ್ದರು.ಅಮಿತ್‌ ಪಂಘಲ್‌ 52 ಕೆಜಿ ವಿಭಾಗದಲ್ಲಿ ಮತ್ತು ಮನೀಷ್‌ 63 ಕೆಜಿ ವಿಭಾಗದಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದು, ಕನಿಷ್ಠ ಕಂಚಿನ ಪದಕವನ್ನು ಗೆಲ್ಲುವ ಅವಕಾಶ ಹೊಂದಿದ್ದಾರೆ. ಆಗ ಇದು ಇವರಿಬ್ಬರ ಪಾಲಾಗಲಿರುವ ಮೊದಲ ವಿಶ್ವಕಪ್‌ ಪದಕವಾಗಲಿದೆ.

ಅಮಿತ್‌ಗೆ 4-1 ಗೆಲುವು
ಬುಧವಾರದ ಕ್ವಾರ್ಟರ್‌ ಫೈನಲ್‌ ಹಣಾ ಹಣಿಯಲ್ಲಿ ಹಾಲಿ ಏಶ್ಯನ್‌ ಚಾಂಪಿಯನ್‌ ಕೂಡ ಆಗಿರುವ, ದ್ವಿತೀಯ ಶ್ರೇಯಾಂಕದ ಅಮಿತ್‌ ಪಂಘಲ್‌ ಫಿಲಿಪ್ಪೀನ್ಸ್‌ನ ಕಾರ್ಲೊ ಪಾಲಮ್‌ ಅವರನ್ನು 4-1 ಅಂತರದಿಂದ ಹಿಮ್ಮೆಟ್ಟಿಸಿದರು. ಕಳೆದ ವರ್ಷದ ಏಶ್ಯನ್‌ ಗೇಮ್ಸ್‌ ಸೆಮಿಫೈನಲ್‌ನಲ್ಲೂ ಪಾಲಮ್‌ ಅವರನ್ನು ಪಂಘಲ್‌ ಪರಾಭವಗೊಳಿಸಿದ್ದರು.

ಅಮಿತ್‌ ಪಂಘಲ್‌ ಅವರ ಸೆಮಿಫೈನಲ್‌ ಎದುರಾಳಿ ಕಜಾಕ್‌ಸ್ಥಾನದ ಸಾಕೆನ್‌ ಬಿಬೊಸ್ಸಿನೋವ್‌. ಅವರು ಅರ್ಮೇನಿಯಾದ ಆರ್ಥರ್‌ ಹೋವನ್ನಿಸ್ಯಾನ್‌ ವಿರುದ್ಧ ಮೇಲುಗೈ ಸಾಧಿಸಿದರು. ಪರಾಜಿತ ಹೋವನ್ನಿಸ್ಯಾನ್‌ ಯುರೋಪಿಯನ್‌ ಬಾಕ್ಸಿಂಗ್‌ ಕೂಟದ ಸ್ವರ್ಣ ಪದಕ ವಿಜೇತರಾಗಿದ್ದು, 6ನೇ ಶ್ರೇಯಾಂಕ ಹೊಂದಿದ್ದಾರೆ.

ಕಳೆದ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಅಮಿತ್‌ ಪಂಘಲ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಹಸನ್‌ಬಾಯ್‌ ದುಸ್ಮತೋವ್‌ ಕೈಯಲ್ಲಿ ಸೋಲನುಭವಿಸಿದ್ದರು. ಅಂದು ಅಮಿತ್‌ 49 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದರು.

ಮನೀಷ್‌ಗೆ ಭರ್ಜರಿ ಜಯ
63 ಕೆಜಿ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಮನೀಷ್‌ ಬ್ರಝಿಲ್‌ನ ವಾಂಡರ್ಸನ್‌ ಡಿ ಒಲಿವೆರ ಅವರನ್ನು 5-0 ಅಂತರದಿಂದ ಉರುಳಿಸಿದರು. 91 ಕೆಜಿ ವಿಭಾಗದ ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ಸಂಜೀತ್‌ ಕುಮಾರ್‌ ಅವರನ್ನು ಈಕ್ವಡರ್‌ನ ಜೂಲಿಯೊ ಸೆಸ ಕ್ಯಾಸ್ಟಿಲ್ಲೊ ಟೊರೆಸ್‌ 4-1ರಿಂದ ಪರಾಭವಗೊಳಿಸಿದರು.

ಮನೀಷ್‌ ಕೌಶಿಕ್‌ ಅವರಿನ್ನು ಕ್ಯೂಬಾದ ಅಗ್ರ ಶ್ರೇಯಾಂಕಿತ ಆ್ಯಂಡಿ ಗೋಮೆಜ್‌ ಕ್ರುಝ್ ವಿರುದ್ಧ ಸೆಣಸಲಿದ್ದಾರೆ. 2017ರ ಕೂಟದಲ್ಲಿ ಕ್ರುಝ್ 64 ಕೆಜಿ ವಿಭಾಗದಲ್ಲಿ ಚಿನ್ನ, ಪಾನ್‌ ಅಮೆರಿಕನ್‌ ಗೇಮ್ಸ್‌ನಲ್ಲಿ ಅವಳಿ ಚಿನ್ನ ಗೆದ್ದ ಸಾಧನೆಗೈದಿದ್ದಾರೆ.

ಈ ವರೆಗೆ ನಾಲ್ಕೇ ಕಂಚು
ಭಾರತ ಈ ವರೆಗೆ ವಿಶ್ವಕಪ್‌ ಬಾಕ್ಸಿಂಗ್‌ ಆವೃತ್ತಿಯೊಂದರಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದದ್ದಿಲ್ಲ. ಈವರಗೆ 4 ಕೂಟಗಳಲ್ಲಿ 4 ಪದಕ ಜಯಿಸಿದ್ದು, ಎಲ್ಲವೂ ಕಂಚಿನ ಪದಕಗಳಾಗಿವೆ. 2009ರಲ್ಲಿ ವಿಜೇಂದರ್‌ ಸಿಂಗ್‌, 2011ರಲ್ಲಿ ವಿಕಾಸ್‌ ಕೃಷ್ಣನ್‌, 2015ರಲ್ಲಿ ಶಿವ ಥಾಪ ಮತ್ತು 2017ರಲ್ಲಿ ಗೌರವ್‌ ಬಿಧುರಿ ಈ ಸಾಧನೆ ಮಾಡಿದ್ದರು. ಈ ಬಾರಿ ಭಾರತದಿಂದ ನೂತನ ದಾಖಲೆ ನಿರ್ಮಾಣವಾಗಲಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.