ನಕಲಿ ನೋಟು ಚಲಾವಣೆ: ಯುವ ಜೋಡಿ ಬಂಧನ

ಐಷಾರಾಮಿ ಕಾರಿನಲ್ಲಿ ಬಂದು ಝೆರಾಕ್ಸ್‌ ಮಾಡಿದ್ದ ನೋಟ್‌ ನೀಡುತ್ತಿದ್ದರು!

Team Udayavani, Sep 19, 2019, 3:50 AM IST

46

ಕಾಪು: ಐಷಾರಾಮಿ ಕಾರಿನಲ್ಲಿ ಬಂದು 200 ರೂ. ಮುಖಬೆಲೆಯ ನಕಲಿ ನೋಟನ್ನು ಚಲಾಯಿಸಿ ಬೆಳ್ಮಣ್‌ ಪರಿಸರದ ಅಂಗಡಿಯವರನ್ನು ವಂಚಿಸಿ ಪರಾರಿಯಾಗಲೆತ್ನಿಸಿದ ಯುವ ಜೋಡಿಯನ್ನು ಕಾಪು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಬುಧವಾರ ಕಾಪುನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ದಾವಣಗೆರೆ ಮೂಲದ ಯುವಕ ಮತ್ತು ಯುವತಿ ನಿಟ್ಟೆಯಿಂದ ಬೆಳ್ಮಣ್‌ವರೆಗಿನ ಅಂಗಡಿಗಳಿಗೆ ತೆರಳಿ ಝೆರಾಕ್ಸ್‌ ಮಾಡಿದ್ದ ನೋಟನ್ನು ನೀಡಿ ವಂಚಿಸಿದ್ದಾರೆ. ಆ ಜೋಡಿಯು ಲೆಮಿನಾ ಕ್ರಾಸ್‌, ನಿಟ್ಟೆ, ಹಾಳೆಕಟ್ಟೆ ಕಲ್ಯ, ಕೆದಿಂಜೆ ಮತ್ತು ಬೆಳ್ಮಣ್‌ ಪರಿಸರದ ಅಂಗಡಿಗಳಿಗೆ ಈ ನಕಲಿ ನೋಟುಗ ಳನ್ನು ನೀಡಿ, ಸಣ್ಣ ಮೊತ್ತದ ತಿಂಡಿ ಖರೀದಿಸುತ್ತಿದ್ದರು ಎನ್ನಲಾಗಿದೆ.

ಪ್ರಕರಣದ ವಿವರ
ಬೆಂಗಳೂರು ನೋಂದಣಿಯ ಕಾರಿನಲ್ಲಿ ಬ್ರಿಜಾ ಕಾರಿನಲ್ಲಿ ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇವರು ಲೆಮಿನಾ ಕ್ರಾಸ್‌ನ ಅಂಗಡಿಗೆ ತೆರಳಿ ಝೆರಾಕ್ಸ್‌ ಮಾಡಿದ್ದ ನೋಟ್‌ ನೀಡಿ ತಿಂಡಿ ಖರೀದಿಸಿದ್ದರು. ಮೋಸ ಹೋದ ವಿಷಯ ತಿಳಿದು ಮಾಜಿ ಜಿ.ಪಂ. ಸದಸ್ಯ ಸುಪ್ರೀತ್‌ ಶೆಟ್ಟಿ ಕೆದಿಂಜೆ ಅವರ ಗಮನಕ್ಕೆ ತರಲಾಯಿತು. ಬಳಿಕ ಕಾರಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾ ತೆರಳಿದಂತೆ ಕಾರ್ಕಳ – ಬೆಳ್ಮಣ್‌ ರಸ್ತೆಯ ಕೆಲವು ಅಂಗಡಿಗಳಲ್ಲೂ ಇದೇ ರೀತಿ ವಂಚಿಸಿರುವುದು ತಿಳಿದು ಬಂತು.

ಬಳಿಕ ಸುಪ್ರೀತ್‌ ಶೆಟ್ಟಿ ನೇತೃತ್ವದ ಯುವಕರ ತಂಡ ಜೋಡಿಯಿದ್ದ ಕಾರನ್ನು ಬೆನ್ನಟ್ಟಿದ್ದು, ಈ ಬಗ್ಗೆ ಪಡುಬಿದ್ರಿ ಪೊಲೀಸರಿಗೂ ತಿಳಿಸಲಾಯಿತು. ಪಡುಬಿದ್ರಿಯಲ್ಲಿ ಪೊಲೀಸರನ್ನು ಕಂಡು ಆರೋಪಿಗಳು ವಾಹನವನ್ನು ಹೆಜಮಾಡಿಯತ್ತ ಕೊಂಡೊಯ್ದಿದ್ದು, ಅಲ್ಲಿ ಡೈವರ್ಷನ್‌ ತೆಗೆದು ಕಾಪುವಿನತ್ತ ತೆರಳಿತ್ತು.

ಕೂಡಲೇ ಪಡುಬಿದ್ರಿ ಪೊಲೀಸರು ಕಾಪು ಠಾಣೆಗೆ ಮಾಹಿತಿ ನೀಡಿದರು. ಕಾಪು ಹೆದ್ದಾರಿಯಲ್ಲಿ ಬಂದ ಕಾರು ಪೊಲಿಪು ಮಸೀದಿ ಬಳಿಯಿಂದ ರಾಂಗ್‌ ಸೈಡ್‌ನ‌ಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಬಿಕ್ಕೋ ಸಂಸ್ಥೆಯ ಬಳಿ ಸ್ಥಳೀಯರು ಮತ್ತು ಪೊಲೀಸರು ಸೇರಿ ಕಾರು ಸಹಿತ ಆರೋಪಿಗಳನ್ನು ತಡೆದರು.

ಪರಾರಿಯಾಗುವ ಯತ್ನದಲ್ಲಿ ಆರೋಪಿಗಳ ಕಾರು ಕೆಲವು ವಾಹನ ಹಾಗೂ ಪೊಲೀಸ್‌ ಬ್ಯಾರಿಕೇಡ್‌ಗಳಿಗೂ ಢಿಕ್ಕಿ ಹೊಡೆಸಿದ್ದರು. ಕೆದಿಂಜೆಯಲ್ಲಿ ಚಲಾಯಿಸಿದ ನೋಟನ್ನು ಸುಪ್ರೀತ್‌ ಶೆಟ್ಟಿ ಬ್ಯಾಂಕಿಗೆ ಕೊಂಡೊಯ್ದು ಪರಿಶೀಲಿಸಿದಾಗ ಅದು ಅಸಲಿಯಲ್ಲ ಎಂಬುದು ತಿಳಿಯಿತು. ಜೋಡಿಯನ್ನು ಕಾಪು ಪೊಲೀಸರು ಕಾರ್ಕಳ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೋಜಿಗಾಗಿ ಕೃತ್ಯ?
ಈ ಜೋಡಿಯು ಮೋಜಿಗಾಗಿ ಈ ಕೃತ್ಯವೆಸಗಿರಬೇಕು ಎಂದು ಶಂಕಿಸಲಾಗಿದೆ. ನೋಟಿನ ಕಲರ್‌ ಪ್ರಿಂಟ್‌ ತೆಗೆದು ಅಂಗಡಿಗಳಿಗೆ ನೀಡಿ ಹಣ ಪಡೆಯಲು ಮತ್ತು ಅಂಗಡಿಯವರ ಚಡಪಡಿಕೆ ನೋಡಿ ಖುಷಿಪಡುತ್ತಿದ್ದರು. ವಸ್ತು ಖರೀದಿಸಿ ಉಳಿದ ಹಣದಲ್ಲಿ ಕಾರಿಗೆ ಇಂಧನ ತುಂಬಿ ಸುತ್ತಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.