ಕುಂದಾಪುರ: ನಿರ್ಗಮಿತ ಎಸಿ ಡಾ| ಮಧುಕೇಶ್ವರ್‌ ಸರಕಾರಿ ನಿವಾಸಕ್ಕೆ ಎಸಿಬಿ ದಾಳಿ

ವರ್ಗಾವಣೆಯಾದ ಮೇಲೂ ಕಡತ ವಿಲೇವಾರಿ

Team Udayavani, Sep 19, 2019, 8:16 PM IST

acb

ಕುಂದಾಪುರ : ವರ್ಗಾವಣೆಯಾಗಿದ್ದರೂ ಕಡತ ವಿಲೇವಾರಿ ನಡೆಸಿ, ಲಂಚಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪ ವಿಭಾಗದ ನಿರ್ಗಮಿತ ಸಹಾಯಕ ಆಯುಕ್ತ, ಕೆಎಎಸ್‌ ಶ್ರೇಣಿಯ ಹಿರಿಯ ಅಧಿಕಾರಿ ಡಾ| ಎಸ್‌.ಎಸ್‌. ಮಧುಕೇಶ್ವರ್‌ ಅವರು ವಾಸ್ತವ್ಯವಿದ್ದ ಸರಕಾರಿ ನಿವಾಸದ ಮೇಲೆ ಉಡುಪಿ ಠಾಣೆಯ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ)ದ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.

ಈ ವೇಳೆ 1.28 ಲಕ್ಷ ರೂ. ನಗದು ಹಾಗೂ ವಿಲೇವಾರಿಗೆ ಬಾಕಿ ಇದ್ದ 23 ಕಡತಗಳು, ರಿಜಿಸ್ಟರ್‌ಗಳು ಸಿಕ್ಕಿದ್ದು, ಅವುಗಳನ್ನು ಎಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳ ಪರಿಶೀಲನೆ ನಡೆಸಿದ್ದಾರೆ.
ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಕಡತ ವಿಲೇವಾರಿ ಮಾಡುತ್ತಿದ್ದಾಗ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ)ದ ಎಸ್ಪಿ ಸುಧೀರ್‌ ಹೆಗ್ಡೆ ಮಾರ್ಗದರ್ಶನದಲ್ಲಿ ಉಡುಪಿ ವಿಭಾಗದ ಡಿವೈಎಸ್‌ಪಿ ಮಂಜುನಾಥ್‌ ಕವರಿ ನೇತೃತ್ವದಲ್ಲಿ ದಾಳಿ ನಡೆದಿದೆ.

2 ದಿನಗಳ ಹಿಂದೆ ವರ್ಗ
ಡಾ| ಮಧುಕೇಶ್ವರ್‌ ಅವರು ಸೆ. 16 ರಂದು ವರ್ಗಾವಣೆಗೊಂಡಿದ್ದು, ಆದರೆ ಯಾವುದೇ ಹುದ್ದೆಗೆ ನಿಯೋಜನೆಗೊಂಡಿರಲಿಲ್ಲ. ಸೆ. 17 ರಂದು ರಾಜು ಕೆ. ಅವರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ವರ್ಗಾವಾದರೂ ವಿಲೇವಾರಿ
ಮಧುಕೇಶ್ವರ್‌ ಅವರು ವರ್ಗವಾಗಿದ್ದರೂ, ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಕಡತ ವಿಲೇವಾರಿಯ ಪ್ರಕರಣವೊಂದಕ್ಕೆ 25 ಸಾವಿರದಿಂದ 1 ಲಕ್ಷ ರೂ. ಲಂಚ ಪಡೆದು ಆದೇಶ ತಯಾರಿಸಿ, ವರ್ಗವಾಗುವ ಹಿಂದಿನ ದಿನಕ್ಕೆ ನಮೂದಿಸಿ ಕಡತಕ್ಕೆ ಅಕ್ರಮ ಸಹಿ ಮಾಡುತ್ತಿದ್ದಾರೆ ಎನ್ನುವುದಾಗಿ ಎಸಿಬಿಗೆ ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಬುಧವಾರ ನ್ಯಾಯಾಲಯದ ಅನುಮತಿ ಪಡೆದಿದ್ದು, ಗುರುವಾರ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಎಸಿಬಿ ಅಧಿಕಾರಿಗಳು ಕುಂದಾಪುರಕ್ಕೆ ಆಗಮಿಸಿದ್ದು, ಆದರೆ ಡಾ| ಮಧುಕೇಶ್ವರ್‌ ಅವರು ಇಲ್ಲಿಲ್ಲದ ಕಾರಣ, ಬೇರೆ ಕಡೆ ಅವರಿಗಾಗಿ ಕಾಯುತ್ತಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಸರಕಾರಿ ನಿವಾಸಕ್ಕೆ ಬರುತ್ತಿದ್ದಂತೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಎಸಿ ಮೇಲೆ ಮೊದಲ ದಾಳಿ
ಕುಂದಾಪುರದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸಹಾಯಕ ಆಯುಕ್ತರಾಗಿದ್ದ ಅಧಿಕಾರಿಗಳ ಮೇಲೆ ಎಸಿಬಿ ಅಥವಾ ಲೋಕಾಯುಕ್ತದಂತಹ ಭ್ರಷ್ಟಚಾರ ನಿಯಂತ್ರಣ ಸಂಸ್ಥೆಯಿಂದ ದಾಳಿ ನಡೆದಿದೆ. ಇದಕ್ಕೂ ಮೊದಲು ತಹಶೀಲ್ದಾರ್‌ ಹಾಗೂ ಅವರಿಗಿಂತ ಕೆಳಗಿನ ಸ್ತರದ ಅಧಿಕಾರಿಗಳ ಮೇಲೆ ದಾಳಿ ನಡೆದಿತ್ತು.

ಎಸಿಬಿ ಎಸ್‌ಐ ಸತೀಶ್‌ ಹಾಗೂ ಸಿಬಂದಿ ದಾಳಿ ನಡೆಸಿದ ತಂಡದಲ್ಲಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.