ಕುಸಿಯುವ ಭೀತಿಯಲ್ಲಿ ಸಬಳೂರು ಸ.ಉ.ಹಿ.ಪ್ರಾ. ಶಾಲೆ ಕಟ್ಟಡ

ಜೀವ ಭಯದಲ್ಲೇ ಪಾಠ ಕೇಳುವ ಅನಿವಾರ್ಯತೆ ; ಶೀಘ್ರ ದುರಸ್ತಿಗೆ ಸ್ಥಳೀಯರ ಆಗ್ರಹ

Team Udayavani, Sep 20, 2019, 5:51 AM IST

199ALK01

ಆಲಂಕಾರು: ವಿದ್ಯಾರ್ಥಿಗಳ ಕೊರತೆಯಿಂದಾಗಿ ಸರಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿದ್ದರೆ, ಕಡಬ ತಾಲೂಕಿನ ಕೊçಲ ಗ್ರಾಮದ ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳನ್ನು ಕಳುಹಿಸಿ ಕೊಡುವುದೆಂದರೆ ಹೆತ್ತವರಿಗೆ ಒಂದು ರೀತಿಯ ಆತಂಕ.ಶಾಲಾ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿದ್ದು, ಗೋಡೆಗಳು ಬಿರುಕು ಬಿಟ್ಟಿವೆ. ಛಾವಣಿಗಳು ಕುಸಿಯುವ ಹಂತದಲ್ಲಿದ್ದು ಮಳೆ ನೀರು ಸೋರುತ್ತಿದೆ.

60 ವರ್ಷಗಳ ಇತಿಹಾಸ
ಸುಮಾರು 60 ವರ್ಷಗಳ ಇತಿಹಾಸ ಹೊಂದಿರುವ ಸಬಳೂರು ಶಾಲೆಯಲ್ಲಿ 133 ವಿದ್ಯಾರ್ಥಿಗಳು, ಆರು ಶಿಕ್ಷಕರಿದ್ದಾರೆ. ಒಟ್ಟು ಹತ್ತು ಕೊಠಡಿಗಳಿವೆ, ಇದರಲ್ಲಿ ಒಂದು ಸಭಾ ಭವನ ಸೇರಿದಂತೆ ಐದು ಕೊಠಡಿಗಳು ಇರುವ ಹಳೆಯ ಕಟ್ಟಡದಲ್ಲಿ ಸಭಾಭವನದ ಸ್ಥಿತಿ ಕೇಳುವವರಿಲ್ಲ. ಶಿಕ್ಷಕರ ಕಚೇರಿ ಹಾಗೂ ಎಂಟನೇ ತರಗತಿಯನ್ನು ಸೇರ್ಪಡಿಸುವ ಛಾವಣಿ ಕುಸಿದು ಹೋಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಜೀವ ಭಯದಿಂದ ಪಾಠ ಕೇಳುವಂತಾಗಿದೆ.

ತೇಪೆಯೂ ಮಾಯ!
ಸಭಾಭವನದ ಕೊಠಡಿಯ ಗೋಡೆಗಳು ಎರಡು ಭಾಗದಲ್ಲಿ ಬಿರುಕುಗೊಂಡಿದ್ದು, ಎರಡು ಬಾರಿಯ ತೇಪೆಯೂ ಮಾಯವಾಗಿದೆ. ಇನ್ನಷ್ಟು ಮಳೆ ಮುಂದುವರಿದರೆ ಗೋಡೆ ಕುಸಿಯುವ ಹಂತಕ್ಕೆ ತಲುಪಲಿದೆ. ಎಂಟನೇ ತರಗತಿಯ ಕೊಠಡಿಯ ಛಾವಣಿ ಶಿಥಿಲಗೊಂಡು ನೀರು ಸೋರುವ ಹಿನ್ನೆಲೆಯಲ್ಲಿ ಜೋರು ಮಳೆ ಗಾಳಿ ಬಂದರೆ ವಿದ್ಯಾರ್ಥಿಗಳನ್ನು ಬೇರೆ ತರಗತಿಗಳಿಗೆ ಸ್ಥಳಾಂತರಿಸುವ ಅನಿವಾರ್ಯತೆ ಶಿಕ್ಷಕರದ್ದು. ಇತ್ತ ಈ ಕೊಠಡಿಗೆ ಅಂಟಿಕೊಂಡಿರುವ ಶಿಕ್ಷಕರ ಕೊಠಡಿಯೂ ಸೋರುತ್ತದೆ. ಸಭಾಭವನದಲ್ಲಿ ನಾಲ್ಕು ಹಾಗೂ ಐದನೇ ತರಗತಿಯನ್ನು ನಡೆಸಲಾಗುತ್ತಿತ್ತು. ಈಗ ನಾಲ್ಕನೇ ತರಗತಿಯನ್ನು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಖ್ಯಶಿಕ್ಷಕರ ಕೊಠಡಿಯಲ್ಲಿ ನಡೆಸಲಾಗುತ್ತಿದೆ.

ಅರ್ಧದಲ್ಲಿರುವ ರಂಗಮಂದಿರ
ಹಿರಿಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ರಂಗ ಮಂದಿರದ ಕಾಮಗಾರಿ ಅರ್ಧದಲ್ಲೇ ಇದೆ. ಜಿ.ಪಂ. ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಪ್ರಾಧಿಕಾರದ ಒಂದಷ್ಟು ಅನುದಾನ ಹಾಗೂ ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ಆರಂಭಿಸಿದ್ದು, ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದೆ.

ಈ ಹಳೆಯ ಕಟ್ಟಡದ ಛಾವಣಿಯನ್ನು ಜಿ.ಪಂ. ಹಾಗೂ ತಾ.ಪಂ.ನ 90 ಸಾವಿರ ರೂ. ಅನುದಾನದಲ್ಲಿ ದುರಸ್ತಿ ಮಾಡಲಾಗಿದೆ. ವಿಶೇಷವೆಂದರೆ ದುರಸ್ತಿ ಮಾಡಿರುವ ಛಾವಣಿಯ ಪಕ್ಕಾಸುಗಳು ಕಳಪೆಯಾಗಿರುವುದರಿಂದ ಛಾವಣಿ ಕುಸಿಯುವ ಹಂತದಲ್ಲಿದೆ. ಇತ್ತೀಚೆಗೆ ಗ್ರಾ.ಪಂ.ನ ವಾರ್ಡ್‌ ಸಭೆ ಇದೇ ಶಾಲಾ ಸಭಾಭವನದಲ್ಲಿ ನಡೆಯುತ್ತಿದ್ದಾಗ ಜೋರು ಗಾಳಿ ಮಳೆ ಬಂದು ಗ್ರಾಮಸ್ಥರು ಹಾಗೂ ಅಧಿಕಾರಿಗಳು ಬೇರೆ ಕೊಠಡಿಗೆ ಸ್ಥಳಾಂತರಗೊಂಡಿದ್ದರು. ಈ ಸಭಾಭವನದ ಕೊಠಡಿ ಮತದಾನ ಕೇಂದ್ರವೂ ಆ ದ್ದು, ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಟ್ಟಡದ ಪರಿಸ್ಥಿತಿ ಅರಿವಿಗೆ ಬಂದಿತ್ತು. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಅವರು ತಿಳಿಸಿದ್ದರು. ಕಟ್ಟಡದ ಪರಿಸ್ಥಿತಿಯ ಬಗ್ಗೆ ಶಿಕ್ಷಣ ಇಲಾಖೆ, ಜನಪ್ರತಿನಿಧಿಗಳಿಗೆ ಮುಖ್ಯ ಶಿಕ್ಷಕರು ಮನವಿ ಮಾಡಿದ್ದು, ಈವರೆಗೆ ಕ್ರಮ ಕೈಗೊಂಡಿಲ್ಲ. ಶಿಥಿಲಗೊಂಡಿರುವ ಐದು ಕೊಠಡಿಗಳ ಕಟ್ಟಡ ಸಂಪೂರ್ಣ ನೆಲಸಮ ಮಾಡಿ ನೂತನವಾಗಿ ನಿರ್ಮಿಸಬೇಕೆಂದು ಗ್ರಾಮಸ್ಥರಿಂದ ಆಗ್ರಹಿಸಿದ್ದಾರೆ.

ಛಾವಣಿ ಕುಸಿಯುವ ಭೀತಿ
ಈ ಹಳೆಯ ಕಟ್ಟಡದ ಛಾವಣಿಯನ್ನು ಜಿ.ಪಂ. ಹಾಗೂ ತಾ.ಪಂ.ನ 90 ಸಾವಿರ ರೂ. ಅನುದಾನದಲ್ಲಿ ದುರಸ್ತಿ ಮಾಡಲಾಗಿದೆ. ವಿಶೇಷವೆಂದರೆ ದುರಸ್ತಿ ಮಾಡಿರುವ ಛಾವಣಿಯ ಪಕ್ಕಾಸುಗಳು ಕಳಪೆಯಾಗಿರುವುದರಿಂದ ಛಾವಣಿ ಕುಸಿಯುವ ಹಂತದಲ್ಲಿದೆ. ಇತ್ತೀಚೆಗೆ ಗ್ರಾ.ಪಂ.ನ ವಾರ್ಡ್‌ ಸಭೆ ಇದೇ ಶಾಲಾ ಸಭಾಭವನದಲ್ಲಿ ನಡೆಯುತ್ತಿದ್ದಾಗ ಜೋರು ಗಾಳಿ ಮಳೆ ಬಂದು ಗ್ರಾಮಸ್ಥರು ಹಾಗೂ ಅಧಿಕಾರಿಗಳು ಬೇರೆ ಕೊಠಡಿಗೆ ಸ್ಥಳಾಂತರಗೊಂಡಿದ್ದರು. ಈ ಸಭಾಭವನದ ಕೊಠಡಿ ಮತದಾನ ಕೇಂದ್ರವೂ ಆ ದ್ದು, ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಟ್ಟಡದ ಪರಿಸ್ಥಿತಿ ಅರಿವಿಗೆ ಬಂದಿತ್ತು. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಅವರು ತಿಳಿಸಿದ್ದರು. ಕಟ್ಟಡದ ಪರಿಸ್ಥಿತಿಯ ಬಗ್ಗೆ ಶಿಕ್ಷಣ ಇಲಾಖೆ, ಜನಪ್ರತಿನಿಧಿಗಳಿಗೆ ಮುಖ್ಯ ಶಿಕ್ಷಕರು ಮನವಿ ಮಾಡಿದ್ದು, ಈವರೆಗೆ ಕ್ರಮ ಕೈಗೊಂಡಿಲ್ಲ. ಶಿಥಿಲಗೊಂಡಿರುವ ಐದು ಕೊಠಡಿಗಳ ಕಟ್ಟಡ ಸಂಪೂರ್ಣ ನೆಲಸಮ ಮಾಡಿ ನೂತನವಾಗಿ ನಿರ್ಮಿಸಬೇಕೆಂದು ಗ್ರಾಮಸ್ಥರಿಂದ ಆಗ್ರಹಿಸಿದ್ದಾರೆ.

ನೂತನ ಕಟ್ಟಡ ನಿರ್ಮಾಣ ಸೂಕ್ತ
ಶಾಲಾ ಕೊಠಡಿಗಳ ಗೋಡೆಗಳು ಬಿರುಕುಗೊಂಡು ಎರಡು ವರ್ಷಗಳು ಕಳೆದಿವೆ. ಛಾವಣಿಗಳು ಕುಸಿಯುತ್ತಿವೆ. ಈ ಹಿನ್ನೆಯಲ್ಲಿ ಐದು ಕೊಠಡಿಗಳಿರುವ ಹಳೆಯ ಕಟ್ಟವನ್ನು ಸಂಪೂರ್ಣ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣವಾದರೆ ಮಾತ್ರ ಸಮಸ್ಯೆಗೆ ಪರಿಹಾರವಾಗುತ್ತದೆ. ದುರಸ್ತಿ ಮಾಡಿದರೆ ಮತ್ತೆ ಮತ್ತೆ ದುಸ್ಥಿತಿಗೆ ಹೋಗುವುದು ಖಂಡಿತ. ಈ ಹಿನ್ನೆಲೆಯಲ್ಲಿ ತತ್‌ಕ್ಷಣ ನೂತನ ಕಟ್ಟಡ ನಿರ್ಮಿಸಬೇಕು.
– ಶೇಖರ ಗೌಡ ಕೊಲ್ಯ,
ಅಧ್ಯಕ್ಷ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ

ಮನವಿ ಮಾಡಲಾಗಿದೆ
ಕಟ್ಟಡ ಹಾಗೂ ಛಾವಣಿ ಶಿಥಿಲಾ ವಸ್ಥೆಗೆ ತಲುಪಿ ವಿದ್ಯಾರ್ಥಿ ಗಳು ಹಾಗೂ ಶಿಕ್ಷಕರು ಆತಂಕದಲ್ಲಿ ದಿನ ದೂಡುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗಾಳಿಮಳೆಯ ಸಂದರ್ಭದಲ್ಲಿ ಬೇರೆ ಕೊಠಡಿಗಳಿಗೆ ಸ್ಥಳಾಂತರಿಸಲಾಗುತ್ತದೆ. ಕಟ್ಟಡದ ದುಸ್ಥಿತಿಯ ಬಗ್ಗೆ ಸಂಬಂಧಪಟ್ಟವರಿಗೆ ಮನವಿ ಮಾಡಲಾಗಿದೆ.
– ವಾರಿಜಾ,
ಮುಖ್ಯಶಿಕ್ಷಕಿ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.