ಮನೆ ತೆರವು ಮಾಡದಂತೆ ನಿವಾಸಿಗಳ ಆಗ್ರಹ


Team Udayavani, Sep 20, 2019, 4:27 PM IST

kolar-tdy-2

ಕೋಲಾರ: ಕಸಬಾ ಹೋಬಳಿ ಪೇಟೆಚಾಮನಹಳ್ಳಿ ಗ್ರಾಮದ ಗೋಮಾಳ ಸರ್ವೆ ನಂ.71 ರಲ್ಲಿ ಮನೆಕಟ್ಟಿಕೊಂಡು ಜೀವನ ನಡೆಸುತ್ತಿರುವ ನಮ್ಮನ್ನು ತೆರವುಗೊಳಿಸದಂತೆ ಆಗ್ರಹಿಸಿ ಈ ಭಾಗದ ನಿವಾಸಿಗಳು ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ ನಿವಾಸಿಗಳು, 41 ಎಕರೆ ಜಮೀನಿನಲ್ಲಿ 2.20 ಗುಂಟೆ ಜಮೀನಿನಲ್ಲಿ ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಿದ್ದು, ಇದೀಗ ಎನ್‌ಸಿಸಿಯವರು ಮನೆ ಖಾಲಿ ಮಾಡುವಂತೆ ತೊಂದರೆ ನೀಡುತ್ತಿದ್ದಾರೆಎಂದು ಆರೋಪಿಸಿದರು.

ಅಳಲು: ಈ ಜಾಗದಲ್ಲಿ ಗ್ರಾಮದ ಕಡುಬಡವರು ಹಾಗೂ ನಿರ್ಗತಿಕರು 2 ಎಕರೆ ಸರಕಾರಿ ಗೋಮಾಳ ಜಮೀನಿನಲ್ಲಿ ಹಲವು ವರ್ಷಗಳಿಂದಲೂ ಸರಕಾರದಿಂದ ಮಂಜೂರಾ ಗಿರುವ ವಾಸದ ಮನೆಗಳಲ್ಲಿ ಜೀವನ ಮಾಡುತ್ತಿದ್ದು, ಈಗ ಏಕಾಏಕಿ ಖಾಲಿ ಮಾಡಿ ಎಂದರೆ ನಾವು ಬೀದಿಗೆ ಬೀಳುತ್ತೇವೆ ಎಂದು ಅಳಲು ತೋಡಿಕೊಂಡರು. 1998ನೇ ಸಾಲಿನಲ್ಲಿದ್ದ ಅಂದಿನ ಜಿಲ್ಲಾಧಿಕಾರಿ ಸನಾವುಲ್ಲಾ, ಗ್ರಾಮಕ್ಕೆ ಬಂದು ಸ್ಥಳ ಪರಿಶೀಲನೆ ನಡೆಸಿ, ಈ ಹಿಂದೆ ಎನ್‌ಸಿಸಿ ಕಚೇರಿ ಮೀಸಲಿಟ್ಟಿದ್ದ ಜಮೀನಿನಲ್ಲಿ ಮನೆಗಳು ನಿರ್ಮಿಸಿರುವುದರಿಂದ ಇನ್ನೂ ಉಳಿಕೆ ಇರುವ ಸರಕಾರಿ ಗೋಮಾಳ ಜಾಗವನ್ನು ಎನ್‌ಸಿಸಿ ಕಚೇರಿ ನಿರ್ಮಿಸಲು ಗುರುತಿಸಿದ್ದರು. ಆದರೆ, ಈಗ ಎನ್‌ಸಿಸಿ ಕಚೇರಿ ಸಿಬ್ಬಂದಿ ವಾಸ ಮಾಡು ತ್ತಿರುವ ಮನೆಗಳನ್ನು ತೆರವುಗೊಳಿಸುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು.

ಈಗಾಗಲೇ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿ ಹಾಕಿಕೊಂಡಿದ್ದು, ಅದರಲ್ಲಿ 10-12 ಮಂದಿ ಬ್ಯಾಂಕಿನಲ್ಲಿ ಹಣ ಕಟ್ಟಿದ್ದಾರೆ. ಆದ್ದರಿಂದ ಕಡುಬಡವರಾದ ನಮಗೆ ಸೂಕ್ತ ನ್ಯಾಯ ಕೊಡಿಸಿ ಮನೆಗಳನ್ನು ಹಾಗೆಯೇ ಉಳಿಸಿಕೊಡಬೇಕು ಎಂದು ಮನವಿಮೂಲಕ ಆಗ್ರಹಿಸಿದರು. ಈ ಸಂದರ್ಭದಲ್ಲಿ ಕೋಚಿಮುಲ್‌ ಮಾಜಿ ನಿರ್ದೇಶಕ ರಾಮಕೃಷ್ಣೇಗೌಡ, ಗ್ರಾಪಂ ಸದಸ್ಯರಾದ ಕೆ.ಆನಂದ, ಯಶೋದಮ್ಮ, ಶೋಭಾರಾಣಿ, ಗ್ರಾಮಸ್ಥರಾದ ಎಂ.ನಾರಾಯಣಪ್ಪ, ಚಂದ್ರಪ್ರಭಾ, ಗುಲ್ಲಪ್ಪ, ಜಗದೀಶ್‌, ಶ್ರೀನಿವಾಸ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.