ಶಿಕ್ಷಣ ಸ್ವಾವಲಂಬಿ ಬದುಕಿಗೆ ಪ್ರೇರಕ ಶಕ್ತಿ: ಹರೀಶ್‌ ಸಾಲ್ಯಾನ್‌


Team Udayavani, Sep 20, 2019, 5:54 PM IST

mumbai-tdy-1

ಮುಂಬಯಿ, ಸೆ. 19: ಸಂಸ್ಕೃತಿ, ಸಂಸ್ಕಾರಗಳರಭಸದ ಬದಲಾವಣೆಯಲ್ಲೂ ಯಕ್ಷಗಾನ ಸನಾತನ ಧರ್ಮದ ವೇದಿಕೆಯನ್ನು ಕಾಯ್ದು ಕೊಂಡಿದೆ. ಇದು ಸರ್ವ ಸಮಸ್ಯೆಗಳ ಪರಿಹಾರ ಒದಗಿಸುವ ಮಾತೃಸ್ವರೂಪಿಯಾಗಿದೆ. ಸ್ಥಳ ಪುರಾಣಗಳ ಬಯಲಾಟದ ಪ್ರದರ್ಶನದಿಂದ ತುಳುನಾಡಿನ ಪವಿತ್ರ ದೇಗುಲಗಳ ಪೌರಾಣಿಕ ಹಿನ್ನೆಲೆಗಳ ಅರಿವು ನಮಗೆ ಆಗುತ್ತದೆ. ಇದರಿಂದ ಆಯಾಯ ಊರಿನ ಸಂಪ್ರದಾಯ ಶಾಶ್ವತಗೊಳ್ಳುತ್ತದೆ ಎಂದು ಘೋಡ್‌ಬಂದರ್‌ ರೋಡ್‌ ಕನ್ನಡ ಅಸೋಸಿಯೇಶನ್‌ ಥಾಣೆ ಇದರ ಅಧ್ಯಕ್ಷ ಹರೀಶ್‌ ಡಿ. ಸಾಲ್ಯಾನ್‌ ಅಭಿಪ್ರಾಯಪಟ್ಟರು.

ಸೆ. 17ರಂದು ಅಪರಾಹ್ನ ಥಾಣೆ ಪಶ್ಚಿಮದ ಘೋಡ್‌ ಬಂದರ್‌ರೋಡ್‌ ಕಾಶೀನಾಥ್‌ ಘಾಣೇಕರ್‌ ಸಭಾಗೃಹದಲ್ಲಿ ಘೋಡ್‌ ಬಂದರ್‌ ರೋಡ್‌ ಕನ್ನಡ ಅಸೋಸಿಯೇಶನ್‌ ಥಾಣೆ ಇದರ ಶೈಕ್ಷಣಿಕ ನೆರವು ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಅಮೂಲಾಗ್ರ ಬದಲಾವಣೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ. ಇದು ಸ್ವಾವಲಂಬಿ ಬದುಕಿಗೆ ಪ್ರೇರಕ ಶಕ್ತಿಯಾಗಿದೆ. ಹಲವು ವರ್ಷಗಳಿಂದ ನಮ್ಮ ಸಂಸ್ಥೆಯು ಆರ್ಥಿ ಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದಾನಿಗಳ ಹಾಗೂ ಸದಸ್ಯರ ಸಹಕಾರದಿಂದ ನೆರವು ಒದಗಿಸಿದೆ ಎಂದು ತಿಳಿಸಿದ ಅವರು ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸಂಘದ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಅತಿಥಿ ಯಾಗಿ ಉಪಸ್ಥಿತರಿದ್ದ ಆನಂದ ಬಂಗೇರ ಬಜ್ಪೆ ಶುಭ ಕೋರಿ ಮಾತನಾಡಿದರು. ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ, ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕ ರಾಜೇಶ್‌ ಗುಜರನ್‌ ಪಾವೂರು, ಸಂಚಾಲಕ ಬಿ. ದಯಾನಂದ ಗುಜರನ್‌ ಅವರನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಪುರಸ್ಕಾರದ ಯಾದಿಯನ್ನು ಶೈಕ್ಷಣಿಕ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮೋಹಿನಿ ಕೊಠಾರಿ ವಾಚಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸೀಮಾ ಶೆಟ್ಟಿ ವಂದಿಸಿದರು. ಲೇಖಕ ನಿತ್ಯಾನಂದ ಬೆಳ್ವಾಯಿ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಘೋಡ್‌ ಬಂದರ್‌ ರೋಡ್‌ ಕನ್ನಡ ಅಸೋಸಿಯೇಶನ್‌ ಗೌರವ ಅಧ್ಯಕ್ಷ ವಿಕ್ರಮಾನಂದ ಶೆಟ್ಟಿ, ಉಪಾಧ್ಯಕ್ಷ ಲಕ್ಷ¾ಣ್‌ ಮಣಿಯಾಣಿ, ಕೋಶಾಧಿಕಾರಿ ಶ್ರೀನಾಥ್‌ ಶೆಟ್ಟಿ, ಜತೆ ಕಾರ್ಯದರ್ಶಿ ರವಿ ಕೋಟ್ಯಾನ್‌, ಜತೆ ಕೋಶಾಧಿಕಾರಿ ಸದಾಶಿವ ಮೊಲಿ, ಸಲಹೆಗಾರ ಪ್ರಶಾಂತ್‌ ನಾಯಕ್‌, ಲೆಕ್ಕ ಪರಿಶೋಧಕ ಜಯ ಪೂಜಾರಿ ಯುವ ವಿಭಾಗದ ಅಧ್ಯಕ್ಷ ವಿಶ್ವನಾಥ್‌ ಶೆಟ್ಟಿ, ಪ್ರತಿಭಾ ಶೆಟ್ಟಿ, ಅನುಪಮಾ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಆಡಳಿತ ಮಂಡಳಿ, ಮಹಿಳಾ ವಿಭಾಗ, ಯುವ ವಿಭಾಗ, ಸರ್ವ ಸದಸ್ಯರು ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರಿಂದ ಶ್ರೀ ಭಗವತಿ ಕ್ಷೇತ್ರ ಮಹಾತೆ¾ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

 ಚಿತ್ರ-ವರದಿ :ರಮೇಶ್‌ ಅಮೀನ್‌

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.