“ರಾಜಲಕ್ಷ್ಮೀ’ಯ ಹಾಡು ಬಂತು

ತಂದೆ-ತಾಯಿಯ ಹೆಸರೇ ಟೈಟಲ್‌

Team Udayavani, Sep 21, 2019, 3:01 AM IST

Rajlakshmi

ಈ ಹಿಂದೆ “ರಾಜಲಕ್ಷ್ಮೀ’ ಚಿತ್ರವೊಂದು ತಯಾರಾಗಿದ್ದು, ಇಷ್ಟರಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ ಎಂಬ ಕುರಿತು ಹೇಳಲಾಗಿತ್ತು. ಈಗ ಆ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಹೌದು, ಹೊಸ ತಂಡವೊಂದು ಸೇರಿಕೊಂಡು “ರಾಜಲಕ್ಷ್ಮೀ’ ಚಿತ್ರ ಮಾಡಿದ್ದು, ಇತ್ತೀಚೆಗೆ ಚಿತ್ರದ ಆಡಿಯೋ ಕೂಡ ಹೊರತಂದಿದೆ. ನಿರ್ಮಾಪಕ ಎಸ್‌.ಕೆ.ಮೋಹನ್‌ಕುಮಾರ್‌ ಅವರು ತಮ್ಮ ತಂದೆ ಹಾಗೂ ತಾಯಿ ಹೆಸರನ್ನೇ ಈ ಚಿತ್ರಕ್ಕೆ ಶೀರ್ಷಿಕೆಯನ್ನಾಗಿಸಿದ್ದಾರೆ.

ಅಷ್ಟಕ್ಕೂ “ರಾಜಲಕ್ಷ್ಮೀ’ ಚಿತ್ರದ ಕಥೆ ಕೂಡ ಹಾಗೆಯೇ ಇರುವುದರಿಂದ, ನಾಯಕ, ನಾಯಕಿ ಕೂಡ ಇಲ್ಲಿ ರಾಜ, ಲಕ್ಷ್ಮಿ ಆಗಿರುವುದರಿಂದ ಚಿತ್ರಕ್ಕೂ ಅದೇ ನಾಮಕರಣ ಮಾಡಿದ್ದಾರೆ. ಅಂದಹಾಗೆ, ಇದೊಂದು ನೈಜ ಘಟನೆಯ ಚಿತ್ರ. ಈ ಹಿಂದೆ ಕೆರಗೂಡು ಗ್ರಾಮದ ಸಮೀಪದದಲ್ಲಿ ನಡೆದ ನೈಜ ಘಟನೆಗಳು ಚಿತ್ರದ ಜೀವಾಳವಂತೆ. ಈ ಚಿತ್ರಕ್ಕೆ ಕಾಂತರಾಜ್‌ ಗೌಡ ನಿರ್ದೇಶಕರು. ವಕೀಲರಾಗಿರುವ ಅವರು, ಸಿನಿಮಾ ಮೇಲಿನ ಆಸಕ್ತಿ ಇಟ್ಟುಕೊಂಡಿದ್ದರು.

ಹಲವು ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವದ ಮೇಲೆ, “ರಾಜಲಕ್ಷ್ಮೀ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ನಿರ್ದೇಶನಕ್ಕೂ ಮುನ್ನ, ಸುಮಾರು ಹದಿನೈದಕ್ಕೂ ಹೆಚ್ಚು ಕಥೆಗಳನ್ನು ನಿರ್ಮಾಪಕರಿಗೆ ಹೇಳಿದ್ದರೂ, ಅವರು ಎಲ್ಲವನ್ನೂ ತಿರಸ್ಕರಿಸಿದ್ದರಂತೆ. ಕೊನೆಗೆ ನೈಜ ಘಟನೆಯ ಕಥೆ ಬಗ್ಗೆ ಹೇಳಿದಾಗ, ಇದು ವರ್ಕೌಟ್‌ ಆಗುತ್ತೆ ಅಂತ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಕ್ಕೆ, “ರಾಜಲಕ್ಷ್ಮೀ’ ಚಿತ್ರ ಆಗಿದೆ ಎಂಬುದು ನಿರ್ದೇಶಕರ ಮಾತು.

ಇದು ನಿರ್ದೇಶಕ ಕಾಂತರಾಜ್‌ಗೌಡ ಅವರ ಮೊದಲ ಚಿತ್ರ. ಎರಡು ಹಾಡುಗಳಿಗೆ ಸಾಹಿತ್ಯವನ್ನೂ ಬರೆದಿದ್ದಾರೆ. ಇದೊಂದು ಪಕ್ಕಾ ಲವ್‌ಸ್ಟೋರಿ ಇರುವ ಕಥೆ. ಅದರಲ್ಲೂ ಗ್ರಾಮೀಣ ಸೊಗಡಿನ ಕಥೆ ಹೊಂದಿದೆ. ಸಂಪೂರ್ಣ ಗ್ರಾಮೀಣ ಭಾಗದಲ್ಲೇ ನಡೆಯುವ ರಾಜಕೀಯ ಚಟುವಟಿಕೆಗಳನ್ನು ತೋರಿಸುವ ಪ್ರಯತ್ನ ಇಲ್ಲಿದೆ. ಬಹುತೇಕ ಮಂಡ್ಯ ಸುತ್ತಮುತ್ತಲ ಗ್ರಾಮಗಳಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ನವೀನ್‌ ತೀರ್ಥಹಳ್ಳಿ ಹೀರೋ. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಅವರು ಈಗಾಗಲೇ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ.

“ರಾಜಲಕ್ಷ್ಮೀ’ ಚಿತ್ರದಲ್ಲಿ ಅವರು ಕಾಲೇಜು ಹುಡುಗನಾಗಿಯೂ, ರೈತನಾಗಿಯೂ ನಟಿಸಿದ್ದಾರಂತೆ. ಇಲ್ಲಿ ಆ್ಯಕ್ಷನ್‌ಗೂ ಹೆಚ್ಚು ಒತ್ತು ಕೊಡಲಾಗಿದೆ ಎಂಬುದು ನವೀನ್‌ ಮಾತು. ನಾಯಕಿಯಾಗಿ ರಶ್ಮಿಗೌಡ ನಟಿಸಿದ್ದು, ಆವರಿಗೆ ಇದು ಮೊದಲ ಸಿನಿಮಾ. ಅವರಿಲ್ಲಿ ರಾಜಕಾರಣಿಯ ಮಗಳ ಪಾತ್ರ ನಿರ್ವಹಿಸಿದ್ದಾರಂತೆ. ಸೈಲೆಂಟ್‌ ಆಗಿ ಕಂಡರೂ, ರಗಡ್‌ ಹುಡುಗಿಯ ಪಾತ್ರವಂತೆ ಅದು. ಮೂರ್ತಿ ಅವರು ಇಲ್ಲಿ ನಾಯಕಿ ತಂದೆ ಪಾತ್ರ ಮಾಡಿದರೆ, ಕಿರಣ್‌ಗೌಡ ಖಳನಟನಾಗಿ ನಟಿಸುತ್ತಿದ್ದಾರೆ.

ಉಳಿದಂತೆ “ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮುತ್ತುರಾಜ್‌, ಹೊನ್ನವಳ್ಳಿ ಕೃಷ್ಣ, ಟೆನ್ನಿಸ್‌ ಕೃಷ್ಣ ಇದ್ದಾರೆ. ಎ.ಟಿ.ರವೀಶ್‌ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಮಾಗಡಿ ಯತೀಶ್‌ ಸಂಭಾಷಣೆ ಇದೆ. ಡಿ.ಕೆ.ದಿನೇಶ್‌ ಅವರ ಛಾಯಾಗ್ರಹಣವಿದೆ. ನಾಗರಾಜ್‌.ಎಸ್‌.ಮೂರ್ತಿ, ನೃತ್ಯವಿದೆ. ಹಾಡುಗಳ ಬಿಡುಗಡೆ ವೇಳೆ, ನಾಗೇಂದ್ರಪ್ರಸಾದ್‌, ಧರ್ಮ, ತಾಂಡವ್‌, ವಾಣಿಜ್ಯ ಮಂಡಳಿ ಕಾರ್ಯದರ್ಶಿ ನರಸಿಂಹಲು ಇತರರು ಇದ್ದರು. ಅಕ್ಟೋಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.