ಉದ್ದಿಮೆಗಳ ಕಾರ್ಪೊರೇಟ್ ತೆರಿಗೆ ಕಡಿತ: ಆರ್ವಿಡಿ ಸ್ವಾಗತ
Team Udayavani, Sep 21, 2019, 3:00 AM IST
ಬೆಂಗಳೂರು: ಉದ್ದಿಮೆಗಳ ಮೇಲೆ ವಿಧಿಸಿದ್ದ ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸ್ವಾಗತಿಸಿದ್ದಾರೆ. ದೇಶದ ಆರ್ಥಿಕತೆಯನ್ನು ಉತ್ತೇಜಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೆಗೆದು ಕೊಂಡ ನಿರ್ಧಾರ ಸಮಯೋಚಿತ ಮತ್ತು ಸಮಂಜಸವಾಗಿದೆ ಎಂದಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರಸ್ತುತ ಕಂಪನಿಗಳ ಮೇಲಿನ ತೆರಿಗೆಯನ್ನು 22 ಹಾಗೂ ಹೊಸ ಉತ್ಪಾದಕ ಸಂಸ್ಥೆಗಳ ಮೇಲಿನ ತೆರಿಗೆಯನ್ನು 15ಕ್ಕೆ ಇಳಿಸುವ ಮೂಲಕ ಕಾರ್ಪೊರೇಟ್ ವಲಯದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಹೇಳಿದ್ದಾರೆ. ದೇಶದ ಆರ್ಥಿಕ ಬೆನ್ನೆಲುಬಾಗಿರುವ ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ.
ಆರ್ಥಿಕ ಹಿಂಜರಿತದಿಂದ ಅನೇಕ ಕೈಗಾರಿಕೆಗಳು ನಿರು ದ್ಯೋಗ ಸಮಸ್ಯೆ ಹುಟ್ಟು ಹಾಕಿವೆ. ಹೀಗಾಗಿ ಉದ್ದಿಮೆದಾರರ ವಿಶ್ವಾಸ ಹೆಚ್ಚಿಸಿ, ಉದ್ದಿಮೆಗಳಿಗೆ ಜೀವ ತುಂಬಬೇಕಾದ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ. 2020ರ ಮಾರ್ಚ್ವರೆಗೆ ಆರಂ ಭಿ ಸುವ ಸಣ್ಣ ಹಾಗೂ ಮಧ್ಯಮ, ಅತಿ ಸಣ್ಣ ಉದ್ದಿಮೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ಹೇಳಿರುವುದು ಪ್ರಶಂಸನೀಯ ಎಂದಿದ್ದಾರೆ.
ಸಣ್ಣ ಉದ್ದಿಮೆಗಳಿಗೆ ಮುಂಗಡ ಸಾಲ ಮರು ಪಾವತಿಸುವ ಅವಧಿಯನ್ನು 5 ವರ್ಷಗಳಿಗಿಂತಲೂ ಹೆಚ್ಚು ಮಾಡಿ ದೀರ್ಘಾವಧಿ ಸಾಲ ಮರುಪಾವತಿ ಅವಧಿಯನ್ನು 10-15 ವರ್ಷಕ್ಕೆ ಹೆಚ್ಚಿಸುವಂತೆ ದೇಶಪಾಂಡೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ