ಅಜ್ಜಾವರ: ಅಶಕ್ತ ಕುಟುಂಬಕ್ಕೆ ಇಂದು ಮನೆ ಹಸ್ತಾಂತರ

ತಹಶೀಲ್ದಾರ್‌ ಕುಂಞಿ ಅಹ್ಮದ್‌ ಸಮಾಜಮುಖೀ ಕಾರ್ಯಕ್ಕೆ ದಾನಿಗಳ ಬೆಂಬಲ

Team Udayavani, Sep 21, 2019, 4:00 AM IST

u-43

ಅಜ್ಜಾವರ: ಸುಳ್ಯ ತಹಶೀಲ್ದಾರ್‌ ಕುಂಞಿ ಅಹ್ಮದ್‌ ನೇತೃತ್ವದಲ್ಲಿ ಅಶಕ್ತ ಕುಟುಂಬಕ್ಕೆ ದಾನಿಗಳು ಹಾಗೂ ಸಂಘಟನೆಗಳ ನೆರವಿನಿಂದ ಅಜ್ಜಾವರದಲ್ಲಿ ನಿರ್ಮಿಸಲಾದ ಮನೆಯನ್ನು ಸೆ. 21ರಂದು ಹಸ್ತಾಂತರಿಸಲಾಗುವುದು.

ಅಜ್ಜಾವರ ಗ್ರಾಮದ ಅಡ³ಂಗಾಯ ಕಲ್ತಡ್ಕ ಪರಿಸರದಲ್ಲಿ ಮಹಮ್ಮದ್‌ ಕುಂಞಿ ಕುಟುಂಬ ಸಣ್ಣ ಗುಡಿಸಲಿಗೆ ಟಾರ್ಪಲ್‌ ಹಾಕಿ ವಾಸವಾಗಿತ್ತು. ಏಳು ಸದಸ್ಯರಿರುವ ಈ ಕುಟುಂಬಕ್ಕೆ 20 ವರ್ಷಗಳಿಂದ ಈ ಜೋಪಡಿಯೇ ಆಧಾರವಾಗಿತ್ತು. ಈ ಸಲದ ಭಾರೀ ಮಳೆಗೆ ಗುಡಿಸಲು ಸೋರುತ್ತಿತ್ತು. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ದಿಕ್ಕೇ ತೋಚಂದಾಗಿತ್ತು.

ಅಧಾರವಾಯಿತು “ಬೆಳಕು’
ಅಶಕ್ತ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಮಹಮ್ಮದ್‌ ಕುಂಞಿ ಕುಟುಂಬಕ್ಕೆ ಆಸರೆಯಾಗಿದೆ. ಕಳೆದ ತಿಂಗಳು ಅಡ³ಂಗಾಯ ನಿವಾಸಿ ರಾಮಣ್ಣ ನಾಯ್ಕ ಕುಟುಂಬಕ್ಕೆ ಬೆಳಕು ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗಿತ್ತು. ಮಹಮ್ಮದ್‌ ಕುಂಞಿ ಅವರ ಪುತ್ರ ಅಪಘಾತವೊಂದರ ಬಳಿಕ ಅಶಕ್ತರಾಗಿದ್ದಾರೆ. ಈ ಕುಟುಂಬಕ್ಕೆ ಯಾವುದೇ ದಾಖಲೆಗಳಿಲ್ಲದ ಕಾರಣ ಸರಕಾರದ ಸವಲತ್ತು ಸಿಕ್ಕಿರಲಿಲ್ಲ. ಮನೆ ನಂಬರ್‌ ಇಲ್ಲದೆ ಪಡಿತರ ಚೀಟಿ, ಆಧಾರ್‌ ಮೊದಲಾದವೂ ಮರೀಚಿಕೆಯಾಗಿದ್ದವು. ವಸತಿ ಯೋಜನೆ ಸೌಲಭ್ಯಕ್ಕೂ ಇದೇ ಅಡ್ಡಿಯಾಗಿತ್ತು. ಈಗ ಆ ಕುಟುಂಬವೂ ಬೆಳಕು ಕಾಣುವಂತಾಗಿದೆ.

ದಾನಿ, ಸಂಘಟನೆಗಳ ನೆರವು
ಅಜ್ಜಾವರ ಗ್ರಾಮಸ್ಥರು ಅಡ³ಂಗಾಯದ ಈ ಕುಟುಂಬದ ಕುರಿತು ತಹಶೀಲ್ದಾರ್‌ಗೆ
ಮಾಹಿತಿ ನೀಡಿದ್ದರು. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಲೋಕೇಶ್‌ ಗುಡ್ಡಮನೆ ಹಾಗೂ ವಿನೋದ್‌ ಲಸ್ರಾದೊ ನೆರವಿನಿಂದ ಶೀಘ್ರವಾಗಿ ಮನೆ ನಿರ್ಮಿಸಲಾಗಿದೆ. ಸುಳ್ಯದ ಅಂಗಡಿ ಮಾಲಕರು ಕಟ್ಟಡ ಸಾಮಗ್ರಿ ಒದಗಿಸಿದ್ದಾರೆ.

ದಾನಿಗಳು ಸಿಮೆಂಟ್‌, ಕಲ್ಲು, ಇಟ್ಟಿಗೆ, ಶೀಟ್‌, ಪೈಂಟ್‌ ಇತ್ಯಾದಿ ನೀಡಿದ್ದಾರೆ. ಉಬರಡ್ಕ ಯುವಕ ಮಂಡಲ ನೆರವಿನ ಹಸ್ತ ಚಾಚಿದೆ. ಯುವ ಬ್ರಿಗೇಡ್‌, ಎಸ್ಕೆಎಸ್ಸೆಸ್ಸೆಫ್ ವಿಖಾಯ, ಎಸ್ಸೆಸ್ಸೆಫ್ ಸಂಘಟನೆಗಳ ಶ್ರಮದಾನದಿಂದ ಕೇವಲ 18 ದಿನಗಳಲ್ಲಿ 2.25 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣವಾಗಿದೆ.

ಬೆಳಕು-3 ಬೆಳ್ಳಾರೆಯಲ್ಲಿ
ಬೆಳಕು ಯೋಜನೆಯ ಮೂರನೆ ಮನೆಯನ್ನು ಬೆಳ್ಳಾರೆಯ ಅಶಕ್ತ ಕುಟುಂಬವೊಂದಕ್ಕೆ ನಿರ್ಮಿಸಲಾಗುವುದು. ಮನೆಗೆ ಬೇಕಾಗಿರುವ ಕಟ್ಟಡ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶನಿವಾರವೇ ಕೆಲಸ ಆರಂಭವಾಗಲಿದೆ ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ.

ಇಂದು ಮನೆ ಹಸ್ತಾಂತರ
ಕಲ್ತಡ್ಕದಲ್ಲಿ ನಿರ್ಮಾಣವಾಗಿರುವ “ಬೆಳಕು’ ಮನೆಯ ಹಸ್ತಾಂತರ ಸೆ. 21ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಶಾಸಕ ಎಸ್‌. ಅಂಗಾರ ಅವರು ಮನೆಯನ್ನು ಮಹಮ್ಮದ್‌ ಕುಂಞಿ ಕುಟುಂಬಕ್ಕೆ ಹಸ್ತಾಂತರಿಸಲಿದ್ದಾರೆ. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್‌ ಕುಂಞಿ ಅಹಮ್ಮದ್‌ ಭಾಗವಹಿಸುವರು.

ಸಹಕಾರ ಮಾದರಿ
ಮಹಮ್ಮದ್‌ ಅವರ ಕುಟುಂಬವು ಟಾರ್ಪಲ್‌ ಹಾಕಿ ಸಣ್ಣ ಗುಡಿಸಲಿನಲ್ಲಿ ವಾಸವಾಗಿತ್ತು. ಅದು ಹಾನಿಯಾಗಿ ಯಾವುದೇ ಸವಲತ್ತುಗಳಿಲ್ಲದೆ ಮನೆ ನಿರ್ಮಿಸಲು ಅಶಕ್ತವಾಗಿದ್ದ ಬಗ್ಗೆ ನನ್ನ ಗಮನಕ್ಕೆ ಬಂದಾಗ ದಾನಿಗಳನ್ನು ಸಂಪರ್ಕಿಸಿದೆವು. ಇಲ್ಲಿನ ಜನರ ಸಹಕಾರ ಶ್ಲಾಘನೀಯ. ಶೀಘ್ರವಾಗಿ ಬೇಕಾದ ಎಲ್ಲ ಸಾಮಗ್ರಿಗಳನ್ನು ಕೊಟ್ಟು ಸಹಕರಿಸಿದ್ದಾರೆ.
– ಕುಂಞಿ ಅಹ್ಮದ್‌, ತಹಶೀಲ್ದಾರ್‌

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.