ವಿದ್ಯಾರ್ಥಿಗಳ ಬಸ್ ಸಮಸ್ಯೆ ಶೀಘ್ರ ಪರಿಹಾರಕ್ಕೆ ಭರವಸೆ


Team Udayavani, Sep 21, 2019, 11:17 AM IST

uk-tdy-1

ಸಿದ್ದಾಪುರ: ಪಟ್ಟಣದ ತಾಪಂ ಸಭಾಭವನದಲ್ಲಿ ತಾಪಂ ಅಧ್ಯಕ್ಷ ಸುಧೀರ್‌ ಗೌಡರ್‌ ಅಧ್ಯಕ್ಷತೆಯಲ್ಲಿ ಸಾರಿಗೆ ಅದಾಲತ್‌ ನಡೆಯಿತು.

ವಾಯವ್ಯ ಕರ್ನಾಟಕ ಸಾರಿಗೆ ಇಲಾಖೆ ಶಿರಸಿ ವಿಭಾಗದ ಡಿಟಿಒ ಸುರೇಶ ನಾಯ್ಕ ಮಾತನಾಡಿ ಹೊಸ ಬಸ್‌ ಮಾರ್ಗಗಳನ್ನು ಹೊರತುಪಡಿಸಿ ಉಳಿದ ಬಸ್‌ ಮಾರ್ಗಗಳ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಸ್‌ ವ್ಯವಸ್ಥೆಯನ್ನು ಮುಂದಿನ ಹತ್ತುದಿನಗಳಲ್ಲಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ತಾಪಂ ಅಧ್ಯಕ್ಷ ಸುದೀರ್‌ ಗೌಡರ್‌ ಮಾತನಾಡಿ, ಈ ಸಾರಿಗೆ ಅದಾಲತ್‌ ಸಭೆಗೆ ಕೆಎಸ್‌ಆರ್‌ಟಿಸಿ ಡಿಸಿಯವರೇ ಬರಬೇಕೆಂದು ಆಗ್ರಹಿಸಿದ್ದೆವು. ಆದರೆ ಅವರ ಬದಲಾಗಿ ಬಂದಿರುವ ಅಧಿಕಾರಿಗಳು ಎಷ್ಟರ ಮಟ್ಟಿಗೆ ಸಮಸ್ಯೆ ಪರಿಹರಿಸುತ್ತಾರೆ ನೋಡೊಣ. ತಾಲೂಕಿನ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ತಮಗೆ ಆಗಿರುವ ತೊಂದರೆಗಳ ಬಗ್ಗೆ ಹಾಗೂ ಆಗಬೇಕಾಗಿರುವ ವ್ಯವಸ್ಥೆ ಕುರಿತು ತಿಳಿಸಬೇಕು ಎಂದರು. ನಂತರ ವಿವಿಧ ಕಾಲೇಜು ವಿದ್ಯಾರ್ಥಿಗಳು ಬಸ್‌ ಸಮಸ್ಯೆಗಳಿಂದ ಆಗುವ ತೊಂದರೆಗಳ ಕುರಿತಾಗಿ ಅಳಲನ್ನು ತೋಡಿಕೊಂಡರು.

ಬೇಡ್ಕಣಿಯ ತ್ಯಾರ್ಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂತೋಷ ನಮ್ಮ ಕಾಲೇಜು ಪಟ್ಟಣದಿಂದ ಬಹಳ ದೂರ ಇದೆ. ಸಮಯಕ್ಕೆ ಸರಿಯಾಗಿ ಬಸ್‌ ವ್ಯವಸ್ಥೆ ಇಲ್ಲ. ಕುಳಿತುಕೊಳ್ಳುವುದಕ್ಕೂ ಬಸ್‌ ನಿಲ್ದಾಣ ಇಲ್ಲ. ಸಾವಿರಾರು ವಿದ್ಯಾರ್ಥಿಗಳಿದ್ದಾರೆ. ತುಂಬಾ ತೊಂದರೆ ಆಗುತ್ತಿದೆ. ಈ ಕುರಿತು ಎಷ್ಟೋ ಮನವಿ ನೀಡಿ, ಪ್ರತಿಭಟನೆ ಮಾಡಿದ್ದೇವೆ. ಆದರೂ ಏನೂ ಪ್ರಯೋಜನ ಆಗಿಲ್ಲ. ನಮಗೆ ಸಮಪರ್ಕ ಬಸ್‌ ವ್ಯವಸ್ಥೆ ಮಾಡದಿದ್ದರೆ ನಾವು ಕಾಲೇಜನ್ನು ಬಹಿಷ್ಕಾರ ಮಾಡುತ್ತೇವೆ ಎಂದರು.

ಇದಕ್ಕೆ ಸಾರಿಗೆ ಅಧಿಕಾರಿ ಕಾಲೇಜು ಸಮಯಕ್ಕೆ ಬಸ್‌ ಬಿಡಲಾಗುವುದು. ಮಿನಿ ಬಸ್‌ ಬದಲಾಯಿಸಿ ದೊಡ್ಡ ಬಸ್ಸನ್ನು ಕಾಲೇಜು ವಿದ್ಯಾರ್ಥಿಗಳ ಸಮಯ ಕ್ಕೆ ಬದಲಾಯಿಸಿ ಕೊಡುವುದಾಗಿ ಹೇಳಿದರು. ಹರೀಶ ದೇವಾಡಿಗ ಮಾತನಾಡಿ ಶಿರಸಿ-ಸಿದ್ದಾಪುರ ಹಾಲ್ಕಣಿ ಮಾರ್ಗವಾಗಿ ಓಡಿಸುವ ಬಸ್‌ ಸರಿಯಾಗಿ ಬರುತ್ತಿಲ.ಇದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಎಂದು ಗಮನ ಸೆಳೆದರು. ಹಲಗೇರಿ ಕಾಲೇಜಿನ ಹೇಮಂತ ಮಾತನಾಡಿ, ಕೆಲವು ಬಸ್‌ಗಳನ್ನು ಹಲಗೇರಿಯಲ್ಲಿ ನಿಲ್ಲಿಸುವುದಿಲ್ಲ. ಇನ್ನು ಕೆಲವು ಬಸ್‌ ಬರುವುದಿಲ್ಲ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಮನೆಗೆ ಹೋಗುವುದಕ್ಕೆ ರಾತ್ರಿಯಾಗುತ್ತದೆ. ಇದನ್ನು ನಿಯಮಿತವಾಗಿ ಓಡಿಸುವ ವ್ಯವಸ್ಥೆ ಮಾಡುವಂತೆ ಕೇಳಿಕೊಂಡರು.

ಕೋಲಶಿರ್ಸಿ ಗ್ರಾಪಂ ಉಪಾಧ್ಯಕ್ಷ ಕೆ.ಆರ್‌. ವಿನಾಯಕ, ಹಲಗೇರಿ ಗ್ರಾಪಂ ಸದಸ್ಯ ಶ್ರೀಧರ ನಾಯ್ಕ, ವಾಜಗೋಡ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಸಮಸ್ಯೆಗಳ ಕುರಿತು ವಿವರಿಸಿದರು. ಜಿಪಂ ಸದಸ್ಯ ಎಂ.ಜಿ. ಹೆಗಡೆ ಗೆಜ್ಜೆ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಮಾತನಾಡಿದರು. ಸದಸ್ಯರಾದ ವಿವೇಕ ಭಟ್‌, ರಘಪತಿ ಹೆಗಡೆ, ಶಿರಸಿ ಡಿಪೊ ವ್ಯವಸ್ಥಾಪಕ ರವೀಂದ್ರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.